ಆಗಸ್ಟ್ 1ರಿಂದ 31ರವರೆಗೆ SDTU ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ: ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗಲು ಕರೆ
ಬೆಂಗಳೂರು, ಜುಲೈ 26: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ “ಶ್ರಮಕ್ಕೆ ಗೌರವ – ಹಕ್ಕುಗಳಿಗೆ ಹೋರಾಟ” ಎಂಬ ಘೋಷವಾಕ್ಯದಡಿ ಆಗಸ್ಟ್ 1ರಿಂದ ಆಗಸ್ಟ್ 31ರವರೆಗೆ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ ತಿಳಿಸಿದ್ದಾರೆ. ದೇಶದಲ್ಲಿ ಕಾರ್ಮಿಕರ ಹಕ್ಕುಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವ ಈ ಸಂದರ್ಭದಲ್ಲಿ, ಕಾರ್ಮಿಕರ ಏಕತೆ ಮತ್ತು ಸಂಘಟಿತ ಶಕ್ತಿಯೇ ಅವರ ಹಕ್ಕುಗಳನ್ನು ಸಂರಕ್ಷಿಸುವ ಪ್ರಮುಖ…
