Avatar

NAMMA MEDIA 24X7

ಕುಂಜತ್ತಬೈಲ್‌ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ಮಂಗಳೂರು: ನಗರದ ಕುಂಜತ್ತಬೈಲ್‌ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 6ರಿಂದ 12ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಆಶಿಕ್ ಬಲ್ಲಾಳ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12ರಂದು (ಭಾನುವಾರ) ಪೂರ್ವಾಹ್ನ 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನದ ಸುಮುಹೂರ್ತದಲ್ಲಿ ನೆರವೇರಲಿದೆ ಎಂದು ಹೇಳಿದರು. ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6ರಿಂದವೇ ವೇದಮೂರ್ತಿ…

Read More

ಕಾಸರಗೋಡು: ಅನಧಿಕೃತ ಮರಳು ಸಾಗಾಟ – ಟಿಪ್ಪರ್ ಚಾಲಕ, ಮಾಲೀಕ ಬಂಧನ

ಕಾಸರಗೋಡು: ಅನಧಿಕೃತವಾಗಿ ನದಿ ಮರಳನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕ ಮತ್ತು ಮಾಲೀಕರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ನದಿ ತೀರ ಪ್ರದೇಶಗಳಲ್ಲಿ ಮರಳು ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕುಂಬಳ ಇನ್‌ಸ್ಪೆಕ್ಟರ್ ಬೈಜು ಕೆ ಜೋಸ್ ಅವರ ಸೂಚನೆಯಂತೆ ಎಸ್‌ಐಗಳಾದ ಕೆ ಸನಿತ್ ಹಾಗೂ ಅನಂತಕೃಷ್ಣನ್ ಆರ್ ಮೇನನ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಕೇರಳ ಜಲ ಪ್ರಾಧಿಕಾರದ ಎಡವಟ್ಟು: ಸಂಪರ್ಕ ಕಡಿತವಾದರೂ ಗ್ರಾಹಕನಿಗೆ ಸಾವಿರಾರು ರೂಪಾಯಿ ಬಿಲ್

ಮಂಜೇಶ್ವರ: ಕೇರಳ ಜಲ ಪ್ರಾಧಿಕಾರದ ಆಡಳಿತಾತ್ಮಕ ದೋಷವೊಂದು ಇದೀಗ ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ನೀರಿನ ಸಂಪರ್ಕವನ್ನು ಅಧಿಕೃತವಾಗಿ ಕಡಿತಗೊಳಿಸಿ, ಬಾಕಿ ಮೊತ್ತವನ್ನೂ ಸಂಪೂರ್ಣವಾಗಿ ಪಾವತಿಸಿದ ಬಳಿಕವೂ ಗ್ರಾಹಕನೊಬ್ಬನಿಗೆ ಸಾವಿರಾರು ರೂಪಾಯಿ ಬಿಲ್ ಕಳುಹಿಸಿರುವ ಘಟನೆ ಮಂಜೇಶ್ವರದಲ್ಲಿ ಬೆಳಕಿಗೆ ಬಂದಿದೆ. ಮಂಜೇಶ್ವರ ಚೌಕಿ ನಿವಾಸಿ, ದೃಶ್ಯ ಮಾಧ್ಯಮ ಕ್ಯಾಮರಾಮನ್ ಮೊಹಮ್ಮದ್ ಹನೀಫ್ ಈ ಸಮಸ್ಯೆಗೆ ಒಳಗಾದ ಗ್ರಾಹಕರಾಗಿದ್ದಾರೆ. ಹನೀಫ್ ಅವರು ನಿಯಮಾನುಸಾರವಾಗಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಇಲಾಖೆಗೆ ಅರ್ಜಿ ಸಲ್ಲಿಸಿ, ಅಂದಿನವರೆಗೆ ಬಾಕಿ ಇದ್ದ ಸಂಪೂರ್ಣ ಮೊತ್ತವನ್ನು ಪಾವತಿಸಿದ್ದರು….

Read More

ಮಂಜೇಶ್ವರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಸಾಧ್ಯತೆ: ರಾಜಕೀಯ ವಲಯದಲ್ಲಿ ಚರ್ಚೆ

ಮಂಜೇಶ್ವರ: ತ್ರಿಕೋಣ ಸ್ಪರ್ಧೆ ನಡೆಯುತ್ತಿರುವ ಮಂಜೇಶ್ವರ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಕೆ.ಎಂ. ಅಶ್ರಫ್ ಅವರು ಇಂದು ತಮ್ಮ ನಾಮಪತ್ರವನ್ನು ಹಿಂಪಡೆಯುವ ಸಾಧ್ಯತೆ ಇರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ. ಒಟ್ಟು 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವ ಈ ಕ್ಷೇತ್ರದಲ್ಲಿ, ಎಸ್‌ಡಿಪಿಐ ಸ್ಪರ್ಧೆ ಮುಂದುವರಿಸಿದರೆ ಅದು ಬಿಜೆಪಿಗೆ ಲಾಭವಾಗಬಹುದು ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಅಭ್ಯರ್ಥಿತ್ವ ಹಿಂಪಡೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಎಸ್‌ಡಿಪಿಐ ಮಂಜೇಶ್ವರದಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಸಂಘಟನೆಯೊಳಗೂ ಎರಡು ಭಿನ್ನ ಅಭಿಪ್ರಾಯಗಳು ಇರುವುದಾಗಿ ಹೇಳಲಾಗುತ್ತಿದೆ. ಇದಲ್ಲದೆ, ಮುಸ್ಲಿಂ…

Read More

ರಾಮನವಮಿ ಪ್ರಯುಕ್ತ ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್

ರಾಮನವಮಿ ಹಬ್ಬದ ಪ್ರಯುಕ್ತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಮಂಜೇಶ್ವರ ಕಣ್ವತೀರ್ಥ ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು. ಜೊತೆಗೆ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ., ಮುಖಂಡರಾದ ಯಾದವ ಬಡಾಜೆ, ಕಾರ್ತಿಕ್ ಶೆಟ್ಟಿ, ಕುಂಜತೂರು ಸುರೇಶ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು….

Read More

ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಹರಿಕಥಾ ಸಪ್ತಾಹ:ಇಂದುಎರಡನೇ ದಿನದ ಕಾರ್ಯಕ್ರಮ

ಹೊಸಂಗಡಿ: ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದ ಅಂಗವಾಗಿ ಇಂದು (ಮಾ. 26, ಗುರುವಾರ) ಸಂಜೆ 6:00 ಗಂಟೆಗೆ ಎರಡನೇ ದಿನದ ಕಾರ್ಯಕ್ರಮ ಜರುಗಲಿದೆ. ಈ ದಿನದ ಪ್ರಮುಖ ಆಕರ್ಷಣೆಯಾಗಿ ಹರಿದಾಸ ಜಯಾನಂದ ಹೊಸದುರ್ಗ ಅವರು ‘ಸತ್ಯದಾಸ ಸಾವಿತ್ರಿ’ ಎಂಬ ಹರಿಕಥೆಯನ್ನು ಪ್ರಸ್ತುತಪಡಿಸಲಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಸಾರುವ ಈ ಹರಿಕಥಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಕಲಾಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

Read More

ಕಾಸರಗೋಡು: ಅನಂಗೂರ್ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಧರ್ಮ ನೇಮ ಏಪ್ರಿಲ್ 5ರಂದು

ಕಾಸರಗೋಡು ನಗರದ ಸಮೀಪದ ನುಳ್ಳಿಪ್ಪಾಡಿಯ ಪಿ.ಎಂ.ಎಸ್. ರಸ್ತೆಯಲ್ಲಿರುವ ಅನಂಗೂರ್ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಧರ್ಮ ನೇಮ ಕಾರ್ಯಕ್ರಮವು ಈ ಬಾರಿ ಏಪ್ರಿಲ್ 5, ಭಾನುವಾರ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಮಾರ್ಚ್ 27, 2026ರಂದು ತಂಬಿಲ ಸೇವೆ ನಡೆಯಲಿದ್ದು, ಏಪ್ರಿಲ್ 4 ಶನಿವಾರ ಸಂಜೆ 7ಕ್ಕೆ ಗುಳಿಗನ ಕೋಲ ಹಾಗೂ ರಾತ್ರಿ 8ಕ್ಕೆ ಯಕ್ಷಗಾನ ಬಯಲಾಟ ಏರ್ಪಡಿಸಲಾಗಿದೆ. ಏಪ್ರಿಲ್ 5 ಭಾನುವಾರ ಬೆಳಿಗ್ಗೆ 9ರಿಂದ ಧೂಮಾವತಿ ದೈವ ಕೋಲ ಮತ್ತು ಅನ್ನಸಂತರ್ಪಣೆ ನಡೆಯಲಿದ್ದು, ಮಧ್ಯಾಹ್ನ…

Read More

ಕೋಮು ಪ್ರಚೋದಕ ಪೋಸ್ಟ್ ಪ್ರಕರಣ: ಆರೋಪಿ ಬಂಧನ, ನ್ಯಾಯಾಂಗ ಬಂಧನಕ್ಕೆ ಆದೇಶ

ಮಂಗಳೂರು: ನಗರದಲ್ಲಿ 2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಕಂಕನಾಡಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025ರಂತೆ ಬಿ.ಎನ್‌.ಎಸ್‌. 2023ರ ಕಲಂ 353(1), 353(2), 61(2), 55 ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿತ್ತು. ತನಿಖೆ ವೇಳೆ ‘TN-MADDY’ ಎಂಬ ಸಾಮಾಜಿಕ ಜಾಲತಾಣ ಖಾತೆಯಿಂದ ಕೋಮು ಪ್ರಚೋದಕ ವಿಷಯಗಳನ್ನು ಹಂಚಿಕೊಳ್ಳಲಾಗಿರುವುದು…

Read More

ಮಂಗಳೂರಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಕ್ಷಯರೋಗದ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಶ್ವ ಕ್ಷಯರೋಗ ದಿನಾಚರಣೆ 2026 ಕಾರ್ಯಕ್ರಮವನ್ನು ಜಿಲ್ಲಾ ವೆನ್ಲಾಕ್…

Read More

ಬಂಟ್ವಾಳದಲ್ಲಿ ಯುವತಿ ಕಾಣೆ: ಪ್ರಕರಣ ದಾಖಲು

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ಮನೆಗೆ ಮರಳದೆ ಕಾಣೆಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅರಳ ಗ್ರಾಮದ ಮುಲಾರಪಟ್ನ ನಿವಾಸಿಯಾದ ಕುಮಾರಿ ಫಾತಿಮತ್ ಇಪ್ರಾ (18) ಕಾಣೆಯಾದ ಯುವತಿಯಾಗಿದ್ದಾಳೆ. ಕಂಪ್ಯೂಟರ್ ತರಬೇತಿ ಪಡೆದಿದ್ದ ಈಕೆ ಬಿಸಿರೋಡಿನಲ್ಲಿರುವ ಒನ್ ಸೈಬರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಮಾರ್ಚ್ 24ರಂದು ಕೆಲಸಕ್ಕೆಂದು ತೆರಳಿದ್ದ ಫಾತಿಮತ್ ಇಪ್ರಾ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದಾಳೆ. ಈ ಕುರಿತು ಯುವತಿಯ ತಾಯಿ ರಝೀಯಾ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು…

Read More
error: Content is protected !!