ಕುಂಜತ್ತಬೈಲ್ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ಮಂಗಳೂರು: ನಗರದ ಕುಂಜತ್ತಬೈಲ್ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 6ರಿಂದ 12ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಆಶಿಕ್ ಬಲ್ಲಾಳ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12ರಂದು (ಭಾನುವಾರ) ಪೂರ್ವಾಹ್ನ 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನದ ಸುಮುಹೂರ್ತದಲ್ಲಿ ನೆರವೇರಲಿದೆ ಎಂದು ಹೇಳಿದರು. ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6ರಿಂದವೇ ವೇದಮೂರ್ತಿ…