ಮಂಗಲ್ಪಾಡಿ ಕುಲಾಲ ಸಂಘದ ವಾರ್ಷಿಕೋತ್ಸವ ಸಂಭ್ರಮ: ಕೃಷಿರತ್ನ ಬಿರುದು ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ
ಮಂಗಲ್ಪಾಡಿ : ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಗಲ್ಪಾಡಿ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 24/05/2026ನೇ ರವಿವಾರ ಬೆಳಿಗ್ಗೆ 10ಗಂಟೆಗೆ ಕುಬಣೂರು ಶ್ರೀ ರಾಮ ಎ.ಯು.ಪಿ.ಶಾಲಾ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜ್ರಂಭಣೆಯಿಂದ ಜರುಗಿತು.ಮೊದಲಿಗೆ ಸಭಾ ಕಾರ್ಯಕ್ರಮವನ್ನು ಪ್ರೇಮಲತಾ ಬೊಳ್ಳಾರು ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.ಶ್ರೀ ಬಾಲಕೃಷ್ಣ ಪಯ್ಯಾರ್ ಅತಿಥಿಯವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಈ ಸಭಾ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಮಂಗಲ್ಪಾಡಿ ಶಾಖೆಯ ಅಧ್ಯಕ್ಷರಾದ ಶ್ರೀ ಸತೀಶ್ ಎಂ.ಹೇರೂರು ವಹಿಸಿದರು.ಶ್ರೀ ಶಂಕರ…