ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಮಾರ್ಗ ವ್ಯವಸ್ಥೆ: ಭಕ್ತರಿಗೆ ಸುಲಭ ದರ್ಶನ ವ್ಯವಸ್ಥೆ
ಉಡುಪಿ: ಶ್ರೀಕೃಷ್ಣ ದೇವರ ದರ್ಶನಕ್ಕಾಗಿ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ದರ್ಶನ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರತಿಯೊಬ್ಬ ಭಕ್ತನಿಗೂ ಸುಗಮವಾಗಿ ದರ್ಶನ ಸಿಗುವಂತೆ ನೂತನ ಪಥವನ್ನು ರೂಪಿಸಲಾಗಿದೆ ಎಂದು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ. ಹೊಸ ವ್ಯವಸ್ಥೆಯಂತೆ ಭಕ್ತರು ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಮಾಡಿ, ಬಳಿಕ ಶ್ರೀಚಂದ್ರಮೌಳೀಶ್ವರ ಹಾಗೂ ಶ್ರೀಅನಂತೇಶ್ವರ ದೇವರ ದರ್ಶನ ಪಡೆದು, ಶ್ರೀಮನ್ ಮಧ್ವಾಚಾರ್ಯರು ಅದೃಶ್ಯರಾದ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸಲಿದ್ದಾರೆ. ನಂತರ ನವಗ್ರಹ ಕಿಂಡಿಯಲ್ಲಿ ಭಗವಂತನ ದರ್ಶನ…