ಜಾಗತಿಕ ಯುದ್ಧ ಭೀತಿ ವಿರುದ್ಧ ಮಂಗಳೂರಿನಲ್ಲಿ ಮೌನ ಕೂಗು
“ಭೂಮಿಗೆ ಶಾಂತಿ ಬೇಕು” ಸಂದೇಶದೊಂದಿಗೆ ಹಂಪನಕಟ್ಟೆಯಲ್ಲಿ ಮೌನ ಧರಣಿ ಮಂಗಳೂರು: ಜಾಗತಿಕ ಯುದ್ಧ ಭೀತಿ, ಮಾನವೀಯ ಮೌಲ್ಯಗಳ ಕುಸಿತ ಹಾಗೂ ಪರಿಸರ ಹಾನಿಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಶನಿವಾರ ಮಂಗಳೂರು ಹಂಪನಕಟ್ಟೆಯ ಕ್ಲಾಕ್ ಟವರ್ ಎದುರು ಮೌನ ಧರಣಿ ನಡೆಸಲಾಯಿತು. ನಮ್ಮ ಭೂಮಿ ಕುಂದಾಪುರ ಸಂಸ್ಥೆಯ ಪ್ರಮುಖರಾದ ರಾಮಾಂಜಿ ಅವರ ನೇತೃತ್ವದಲ್ಲಿ “ಈ ಶಾಂತಿ ಅಭಿಯಾನದಲ್ಲಿ ಭೂಮಿ ಮೇಲೆ ಶಾಂತಿ ನೆಲೆಸಬೇಕು, ಮಾನವೀಯ ಸಂಬಂಧಗಳು ಉಳಿಯಬೇಕು, ಪ್ರಕೃತಿ ಸಂಪನ್ಮೂಲಗಳ ಸಂರಕ್ಷಣೆ ಆಗಬೇಕು ಹಾಗೂ ಮಕ್ಕಳ ಭವಿಷ್ಯಕ್ಕಾಗಿ…