ವಿಷು ಕಣಿಯ ದರ್ಶನ ಪಡೆದ ಭಕ್ತರು: ಶ್ರೀ ಮುತ್ತಪ್ಪನ್ ದೇವಸ್ಥಾನದಲ್ಲಿ ವಿಶೇಷ ಪೂಜೆ
ಮಂಗಳೂರು: ವಿಷು ಹಬ್ಬವು ದಕ್ಷಿಣ ಭಾರತದ ಪ್ರಮುಖ ಹಬ್ಬಗಳಲ್ಲಿ ಒಂದು .ಈ ಹಬ್ಬವನ್ನು ಕೇರಳ ಮತ್ತು ತುಳುನಾಡಿನ ಭಾಗದಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಗುತ್ತದೆ. ವಿಷು ಹಬ್ಬದ ಪ್ರಮುಖ ವಿಶೇಷವೆಂದರೆ ವಿಷು ಕಣಿ. ಬೆಳಿಗ್ಗೆ ಎದ್ದ ತಕ್ಷಣ ದೇವರ ಮುಂದೆ ಇಡಲಾಗಿರುವ ಹಣ್ಣುಗಳು, ಹೂವುಗಳು, ಕನ್ನಡಿ, ನಾಣ್ಯಗಳು ಮತ್ತು ಶ್ರೀಕೃಷ್ಣನ ಮೂರ್ತಿಯನ್ನು ನೋಡುವುದು ಶುಭಕರವೆಂದು ನಂಬಲಾಗುತ್ತದೆ. ಈ ಸಂಪ್ರದಾಯವು ಮುಂದಿನ ವರ್ಷದ ಜೀವನ ಸಮೃದ್ಧಿಯಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತದೆ. ಹಬ್ಬದ ಸಂದರ್ಭದಲ್ಲಿ ಹಿರಿಯರು ಕಿರಿಯರಿಗೆ ವಿಷುಕೈನೀಟಂ ಎಂಬ ಹೆಸರಿನಲ್ಲಿ ಹಣ…