Avatar

NAMMA MEDIA 24X7

ಮಂಜೇಶ್ವರ ವಿಧಾನ ಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ? ಮತ ವಿಭಜನೆಗೆ ಕಾರಣವಾಗಲಿದೆಯೇ ಈ ನಿರ್ಧಾರ ? ಬಿಜೆಪಿಗೆ ಈ ನಿರ್ಧಾರದಿಂದ ವರವೋ ಯುಡಿಎಫ್ ಗೆ ಶಾಪವೋ ?

ಕಾಸರಗೋಡು: ರಾಜ್ಯದ ಗಡಿ ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಚುನಾವಣಾ ಕಣ ಕಾದುಕೊಂಡಿದ್ದು, ಗೆಲ್ಲುವ ಕುದುರೆ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಎಸ್‌ಡಿಪಿಐ ತನ್ನ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆ.ಎಂ. ಅವರನ್ನು ಕಣಕ್ಕಿಳಿಸುವ ಮೂಲಕ ರಾಜಕೀಯ ಸಮೀಕರಣಗಳಲ್ಲಿ ಅಚ್ಚರಿ ಮೂಡಿಸಿದೆ. ವಿಶೇಷವೆಂದರೆ, ಯುಡಿಎಫ್ ಅಭ್ಯರ್ಥಿ ಮತ್ತು ಹಾಲಿ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಹೆಸರಿನೊಂದಿಗೆ ಹೋಲಿಕೆಯಿರುವ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ….

Read More

ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಭಕ್ತಿಭರವಸೆಯ ಹರಿಕಥಾ ಸಪ್ತಾಹ: ಸದಸ್ಯರು ಮತ್ತು ಭಕ್ತರಿಗೆ ಆಹ್ವಾನ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರ, ಹೊಸಂಗಡಿ–ಮಂಜೇಶ್ವರ ಪ್ರದೇಶದಲ್ಲಿ ಮಾರ್ಚ್ 25ರಿಂದ 31ರವರೆಗೆ ಭಕ್ತಿಭಾವದಿಂದ ಹರಿಕಥಾ ಸಪ್ತಾಹವನ್ನು ವೈಭವದಿಂದ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6.00ರಿಂದ 8.00ರವರೆಗೆ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಖ್ಯಾತ ಹರಿಕಥಾ ವಿದ್ವಾಂಸರು ಭಾಗವಹಿಸಿ ಪುರಾಣ ಪ್ರಸಂಗಗಳನ್ನು ನಿರೂಪಿಸಲಿದ್ದಾರೆ. ಮಾರ್ಚ್ 25, 2026 (ಬುಧವಾರ) ರಿಂದ ಮಾರ್ಚ್ 31, 2026 (ಮಂಗಳವಾರ) ರವರೆಗೆ ವಾರಪೂರ್ತಿ ಹರಿಕಥಾ ಸಪ್ತಾಹವನ್ನು ವೈಭವದಿಂದ ಆಯೋಜಿಸಲಾಗಿದೆ. ಈ ಸಪ್ತಾಹದ ಅಂಗವಾಗಿ ಪ್ರತಿದಿನ ಸಂಜೆ 6.00 ಗಂಟೆಗೆ ಹರಿಕಥಾ ಕಾರ್ಯಕ್ರಮ…

Read More

ಮಂಜೇಶ್ವರದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ

ಮಂಜೇಶ್ವರ: ಯುಡಿಎಫ್ (UDF) ನೇತಾರರು ಹಾಗೂ ಮಂಜೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಘವ್ ಮಂಜೇಶ್ವರ ಮತ್ತು ಪೈವಳಿಕೆಯ ಅಬ್ದುಲ್ ಸಮದ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ)ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ K. Surendran ಅವರು ಇಬ್ಬರಿಗೂ ಸದಸ್ಯತ್ವ ನೀಡಿ ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ತತ್ವಗಳು ಮತ್ತು ಅಭಿವೃದ್ಧಿ ದೃಷ್ಟಿಕೋನದಿಂದ ಪ್ರೇರಿತರಾಗಿ ಹೊಸ ಮುಖಗಳು ಬಿಜೆಪಿಗೆ ಸೇರುತ್ತಿರುವುದು ಸಂತೋಷದ ವಿಚಾರ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ…

Read More

ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿ ಖಂಡಿಸಿ ಹಾಗೂ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟನೆ

ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿಗಳನ್ನು ಖಂಡಿಸಿ, ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಗೊಳ್ಳಬೇಕೆಂದು ಒತ್ತಾಯಿಸಿ ಇಂದು ಮಂಗಳೂರು ನಗರದ ಹೃದಯ ಭಾಗದಲ್ಲಿ CITU, DYFI, JMS,DHS,ಆದಿವಾಸಿ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದದಾಹದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಗತ್ತಿನೆಲ್ಲೆಡೆ ಶಾಂತಿ ನೆಲೆಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಅಮೇರಿಕನ್ ಸಾಮ್ರಾಜ್ಯಶಾಹಿ ಇಡೀ ಜಗತ್ತನ್ನು ತನ್ನ‌ ನಿಯಂತ್ರಣದಲ್ಲಿಡಲು ಹರಸಾಹಸ ಪಡುತ್ತಿದೆ.ಜಗತ್ತಿನ 80…

Read More

ಕಾಸರಗೋಡಿನಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ, ನಾಮಪತ್ರ ಸಲ್ಲಿಕೆ

ಕಾಸರಗೋಡು: ಸಪ್ತ ಭಾಷಾ ಸಂಗಮ ಭೂಮಿ ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ ನಡೆಸಿ ಇಂದು ನಾಮಪತ್ರ ಸಲ್ಲಿಸಿದರು. ಕರಂದಕ್ಕಾಡು ಮೈದಾನದಿಂದ ಆರಂಭವಾದ ರೋಡ್ ಶೋ ಭಾರೀ ಜನಸಾಗರದ ಮಧ್ಯೆ ಸಾಗಿದ್ದು, ಸಾರ್ವಜನಿಕ ಮೆರವಣಿಗೆ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು. ಮೆರವಣಿಗೆಯಲ್ಲಿ ಪಕ್ಷದ ಧ್ವಜಗಳು, ಘೋಷಣೆಗಳು ಮತ್ತು ಭರ್ಜರಿ ಸ್ವಾಗತದ ನಡುವೆ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಗಮನಸೆಳೆದರು . ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಎಡನೀರು ಮಠಕ್ಕೆ ಭೇಟಿ ನೀಡಿ…

Read More

ಗೋಡೆ ಬರಕ್ಕೆ ಹೈಟೆಕ್ ಸ್ಪರ್ಶ ….. !

ಪಾಲಕ್ಕಾಡ್: ಗೋಡೆ ಬರಹ ಅದು ಕಲಾ ಕೃತಿಯ ಒಂದು ಪ್ರಕಾರ ದೇವರ ನಾಡು ಕೇರಳದಲ್ಲಿ ಚುನಾವಣೆಯ ಪ್ರಚಾರಕ್ಕಾಗಿ ಗೋಡೆ ಬರವನ್ನು ಬರೆಯುತ್ತಾರೆ. ವರುಷಗಳು ಉರುಳಿದರು ಇಂದಿಗೂ ಗೋಡೆ ಪ್ರಚಾರ ಜೀವಂತವಾಗಿ ಕೇರಳದಲ್ಲಿ ಇಂದಿಗೂ ಮುಂದುವರಿದು ಕೊಂಡು ಹೋಗುತ್ತಿದೆ . ತಂತ್ರಜ್ಞಾನವು ಸಕತ್ ಆಗಿ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ . ಈಗ ಗೋಡೆ ಬರಹಕ್ಕೂ ಆಧುನಿಕ ಸ್ಪರ್ಶವನ್ನು ನೀಡಿ ಗೋಡೆ ಬರಹ ಬರವಣಿಗೆಗೆ ಕೇರಳದಲ್ಲಿ ರೋಬೋಟ್ ಕೂಡಾ ಪಾದಾರ್ಪಣೆ ಮಾಡಿರುವುದು ವಿಶೇಷ . ಚುವರ್ ಬೋಟ್ ಎಂಬ…

Read More

ಅಳಪೆ ದಕ್ಷಿಣ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಕುಂದರ್ ಕುಟುಂಬ ದೈವಸ್ಥಾನ ಚಾವಡಿ ಸಮಿತಿ ವತಿಯಿಂದ ಅಳಪೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪಡೀಲಿನ ಕುಂದರ್ ಕುಟುಂಬದ ದೈವಸ್ಥಾನಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಬಹಳ ಕಿರಿದಾಗಿದ್ದು, ಅಭಿವೃದ್ಧಿ ಕಾಮಗಾರಿಯ ಅಗತ್ಯತೆ ಬಹಳ ದಿನಗಳಿಂದ ಇದ್ದುದಾಗಿ ಹೇಳಿದರು. ಇಂದು ಶಿಲಾನ್ಯಾಸಗೊಂಡಿರುವ ಈ ಕಾಮಗಾರಿ ಶೀಘ್ರದಲ್ಲೇ…

Read More

ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಯುವಕನ ಬಂಧನ

ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಹಮ್ಮದ್ ಝಾಕೀರ್, ಬಂಧಿತ ಯುವಕ. ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರು ಫೀಜಾ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಮೊಹಮ್ಮದ್ ಝಾಕೀರ್ ಎಂಬಾತನು ಎಮ್.ಡಿ.ಎಮ್.ಎ ಮಾದಕವಸ್ತುವನ್ನು ತಂದು ತನ್ನ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ…

Read More

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿ ಬಂಧನ

ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೈದರ್ @ ಹೈದರ್ ಆಲಿ, ಮೊಹಮ್ಮದ್ ಸಜಾದ್, ಜೈಸನ್ ಮೆನೆಜಸ್ ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ 2,50,000ಮೌಲ್ಯದ 26 ಗ್ರಾಂ…

Read More

ಗಾಂಜಾ ಮಾರಾಟ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅ.ಕ್ರ 328/2016, ಕಲಂ :8(c) ಜೊತೆಗೆ 20(b) NDPS Act ಪ್ರಕರಣ ಹಾಗೂ LPC NO : 11/2024 ರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉತ್ತರ ಪ್ರದೇಶದ ನಸೀಮ್ ಎಂಬಾತನನ್ನು ಸುಳ್ಯ ಠಾಣಾ ಸಿಬ್ಬಂದಿಗಳಾದ Hc 359-ರಮೇಶ್ ಎಲ್, Hc 368-ರಾಜು…

Read More
error: Content is protected !!