ಮಂಜೇಶ್ವರ ವಿಧಾನ ಸಭಾ ಚುನಾವಣೆಯಲ್ಲಿ ಎಸ್ಡಿಪಿಐ ? ಮತ ವಿಭಜನೆಗೆ ಕಾರಣವಾಗಲಿದೆಯೇ ಈ ನಿರ್ಧಾರ ? ಬಿಜೆಪಿಗೆ ಈ ನಿರ್ಧಾರದಿಂದ ವರವೋ ಯುಡಿಎಫ್ ಗೆ ಶಾಪವೋ ?
ಕಾಸರಗೋಡು: ರಾಜ್ಯದ ಗಡಿ ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಚುನಾವಣಾ ಕಣ ಕಾದುಕೊಂಡಿದ್ದು, ಗೆಲ್ಲುವ ಕುದುರೆ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಎಸ್ಡಿಪಿಐ ತನ್ನ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆ.ಎಂ. ಅವರನ್ನು ಕಣಕ್ಕಿಳಿಸುವ ಮೂಲಕ ರಾಜಕೀಯ ಸಮೀಕರಣಗಳಲ್ಲಿ ಅಚ್ಚರಿ ಮೂಡಿಸಿದೆ. ವಿಶೇಷವೆಂದರೆ, ಯುಡಿಎಫ್ ಅಭ್ಯರ್ಥಿ ಮತ್ತು ಹಾಲಿ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಹೆಸರಿನೊಂದಿಗೆ ಹೋಲಿಕೆಯಿರುವ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ….