Avatar

NAMMA MEDIA 24X7

ಒಳಮೀಸಲಾತಿ ರೋಸ್ಟರ್ ವಿರೋಧಿಸಿ ಮಾರ್ಚ್ 24ರಂದು ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರುದ್ಧ ಭೋವಿ ಹಾಗೂ ಇತರೆ ಸಮುದಾಯಗಳ ವತಿಯಿಂದ ಮಾರ್ಚ್ 24ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಭಟನೆಯಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ ಹಾಗೂ ಸೂಕ್ಷ್ಮ…

Read More

ಮಂಜೇಶ್ವರ ವಿಧಾನಸಭಾ ಕ್ಷೇತ್ರ: ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ಅವರು ಸೋಮವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಉಪ್ಪಳ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಕಾರ್ಯಕರ್ತರು ಉಪ್ಪಳ ಪಟ್ಟಣದ ವಿವಿಧ ಭಾಗಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು. ಪಕ್ಷದ…

Read More

ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ, ತಾರಸಿ ತೋಟ ತರಬೇತಿ ಹಾಗೂ ಬೀಜ ವಿತರಣೆ ಕಾರ್ಯಕ್ರಮ

ಉಳ್ಳಾಲ: ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ ತೋಟಗಾರಿಕೆ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಕೈತೋಟ ಮತ್ತು ತಾರಸಿ ತೋಟ ತರಬೇತಿ ಕಾರ್ಯಕ್ರಮ ತೊಕ್ಕೊಟ್ಟುವಿನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ, ಫುಡ್ ಚೈನ್ ಕ್ಯಾಂಪೇನ್, ಶಿವಾಜಿ ಫ್ರೆಂಡ್ಸ್ ಸರ್ಕಲ್, ಸ್ವಾಮಿ ಕೊರಗಜ್ಜ ಸೇವಾ ಸಮಿತಿ ತೊಕ್ಕೊಟ್ಟು, ರಿಚಲ್ ಸರ್ವಿಸಸ್ ಹಾಗೂ ಮಂಗಳೂರು ಆಟೋ ರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ತೊಕ್ಕೊಟ್ಟು ಇವುಗಳು ಸಹಭಾಗಿತ್ವ ನೀಡಿದವು. ಈ ಸಂದರ್ಭದಲ್ಲಿ ತರಕಾರಿ ಬೀಜ ಮತ್ತು…

Read More

ಮಾಂಸದ ಕೋಳಿಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು

ಕೋಳಿ ಮನೆಗಳಲ್ಲಿ ದಿನದ 24 ಗಂಟೆಗಳ ಕಾಲ ತಂಪಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿ ಮನೆ ಮಾಡಿನ ಮೇಲ್ಭಾಗಕ್ಕೆ ಸುಣ್ಣ ಬಳಿಯಬೇಕು ಆಥವಾ ಹುಲ್ಲು ಅಡಿಕೆಗರಿ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲವಿದ್ದರೆ ಕೋಳಿ ಮನೆಯ ಮಾಡಿನ ಮೇಲೆ ಸ್ಪ್ರಿಂಕ್ಲರ್ನಲ್ಲಿ ನೀರು ಸಿಂಪಡಿಸಬೇಕು. ಕೋಳಿ ಮನೆಯ ಒಳಗೆ ಫ್ಯಾನ್ ಅಥವಾ ಫಾಗಸ್ರ್ಗಳನ್ನು ಅಳವಡಿಸಬೇಕು. ವಿಟಮಿನ್ ಸಿ ಮತ್ತು ಇತರೆ ಎಲೆಕ್ಟ್ರೋಲೈಟ್‍ಗಳನ್ನು…

Read More

ಬೇಸಿಗೆ ಉಷ್ಣತೆಗೆ ಜಾನುವಾರುಗಳ ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಅಗತ್ಯ

ಮಂಗಳೂರು: ಬೇಸಿಗೆ ಕಾಲದಲ್ಲಿ ಉಷ್ಣತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಾವಶ್ಯಕ ಎಂದು ಪಶುಪಾಲನಾ ತಜ್ಞರು ಸೂಚಿಸಿದ್ದಾರೆ. ಉಷ್ಣತೆಯ ಪರಿಣಾಮ ಕಡಿಮೆಗೊಳಿಸಲು ದನಗಳನ್ನು ಬೆಳಿಗ್ಗೆ ಅಥವಾ ಸಂಜೆ ವೇಳೆಯಲ್ಲಿ ಮಾತ್ರ ಮೇಯಲು ಹೊರಗಡೆ ಬಿಡಬೇಕು. ವಿಶೇಷವಾಗಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಜಾನುವಾರುಗಳನ್ನು ಹೊರಗೆ ಬಿಡುವುದನ್ನು ತಪ್ಪಿಸಬೇಕು. ದಿನಪೂರ್ತಿ ತಂಪಾದ ನೀರನ್ನು ಸಮರ್ಪಕವಾಗಿ ನೀಡಬೇಕು. ನೀರಿನ ಕೊರತೆ ಕಂಡುಬಂದಲ್ಲಿ ಸ್ಥಳೀಯ ಸಂಸ್ಥೆಗಳ ಸಹಾಯ ಪಡೆಯುವುದು ಅಗತ್ಯ. ಜಾನುವಾರುಗಳನ್ನು ಸದಾ ನೆರಳಿನಲ್ಲೇ…

Read More

ಸಹ್ಯಾದ್ರಿಯ ಸೆರಗಿನ ಸಾಹಿತ್ಯ ಋಷಿ: ಮಂಜೇಶ್ವರದ ‘ಪೈ’ ಅಜ್ಜನಿಗೊಂದು ಪ್ರೀತಿಯ ನಮನ

​ನಮ್ಮ ಕರಾವಳಿಯ ಮಣ್ಣಿಗೆ ಒಂದು ವಿಚಿತ್ರ ಗುಣವಿದೆ. ಇಲ್ಲಿ ಅಲೆಗಳ ಸದ್ದಿನಲ್ಲಿ ಸಾಹಿತ್ಯವಿದೆ, ತೆಂಗಿನ ಮರಗಳ ಮರ್ಮರದಲ್ಲಿ ಕವಿತೆಯಿದೆ. ಈ ಮಣ್ಣಿನ ಗಂಧವನ್ನು ಜಗತ್ತಿನಾದ್ಯಂತ ಪಸರಿಸಿದ ಆ ಅಪ್ರತಿಮ ಚೇತನವೇ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳು. ಇಂದು ಅವರ ಹುಟ್ಟುಹಬ್ಬ. ಈ ಹೊತ್ತಿನಲ್ಲಿ ಅವರನ್ನೊಮ್ಮೆ ನೆನಪು ಮಾಡಿಕೊಳ್ಳುವುದು ಅಂದರೆ ಅದು ನಮ್ಮ ಅಸ್ಮಿತೆಯನ್ನು ನಾವು ಹುಡುಕಿಕೊಂಡಂತೆ.​ಪೈಗಳೆಂಬ ಜ್ಞಾನದ ಭಂಡಾರ​ಪೈಗಳು ಕೇವಲ ಕವಿಯಲ್ಲ, ಅವರೊಬ್ಬ ಚಲಿಸುವ ವಿಶ್ವಕೋಶ. ಮಂಜೇಶ್ವರದ ಆ ಪುಟ್ಟ ಮನೆಯಲ್ಲಿ ಕುಳಿತು, ಜಗತ್ತಿನ ಹತ್ತಾರು ಭಾಷೆಗಳನ್ನು…

Read More

ಮಂಗಳೂರು ಬಂದರಿಗೆ ರಷ್ಯಾ ತೈಲ ಟ್ಯಾಂಕರ್, ಅಮೆರಿಕ ಅನಿಲ ನೌಕೆ ಆಗಮನ

ಮಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮಂಗಳೂರಿನ ನವ ಮಂಗಳೂರು ಬಂದರಿಗೆ ರಷ್ಯಾದ ತೈಲ ಟ್ಯಾಂಕರ್ ಹಾಗೂ ಅಮೆರಿಕದ ಅನಿಲ ಸಾಗಣೆ ನೌಕೆ ಆಗಮಿಸಿರುವುದು ಗಮನ ಸೆಳೆಯುತ್ತಿದೆ. ರಷ್ಯಾದ “ಆಕ್ವಾ ಟೈಟಾನ್” (Aqua Titan) ಹೆಸರಿನ ಬೃಹತ್ ತೈಲ ಸಾಗಣೆ ಹಡಗು ಭಾನುವಾರ ಮಂಗಳೂರು ತಲುಪಿದೆ. ಮೂಲತಃ ಚೀನಾಕ್ಕೆ ತೆರಳಬೇಕಿದ್ದ ಈ ಹಡಗು ದಕ್ಷಿಣ ಚೀನಾ ಸಮುದ್ರದಲ್ಲಿ ಸಂಚರಿಸುತ್ತಿದ್ದ ವೇಳೆ ಕಳೆದ ವಾರದ ಆರಂಭದಲ್ಲಿ ಯು-ಟರ್ನ್ ಪಡೆದು ಭಾರತದತ್ತ ಮುಖ ಮಾಡಿತ್ತು ಎಂದು ತಿಳಿದುಬಂದಿದೆ. ಇದರ ಜೊತೆಗೆ…

Read More

ಮಾರ್ಚ್ 26ರಿಂದ 28ರವರೆಗೆ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 26ರಿಂದ 28ರವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತ್ರಿದಿನ ಸಮ್ಮೇಳನಕ್ಕೆ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸಾಹಿತ್ಯೋತ್ಸವದ ಅಂಗವಾಗಿ ಅಮ್ಮೆಂಬಳ ಬಾಳಪ್ಪ ದ್ವಾರದ ಉದ್ಘಾಟನೆ ನಡೆಯಲಿದ್ದು, “ತಂತ್ರಜ್ಞಾನ–ಸಾಹಿತ್ಯ–ಸಹಬಾಳ್ವೆ”…

Read More

ಮೊದಲ ವಾಹನ

ಒಂದು ಕಾಲವಿತ್ತು, ಆಗ ರೂ. 20 ಉಳಿಸಲು 20 ನಿಮಿಷ ನಡೆಯುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ 20 ನಿಮಿಷ ಉಳಿಸಲು 200 ರೂಪಾಯಿ ಖರ್ಚು ಮಾಡಲು ತಯಾರಿದ್ದಾರೆ. ಪ್ರತಿಯೊಬ್ಬರು ಓಡಾಡಲು ಸ್ವಂತ ಗಾಡಿಯನ್ನು ಇಟ್ಟುಕೊಂಡಿದ್ದಾರೆ.ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ಗಳಷ್ಟು ದೂರ ನಮ್ಮ ಮನೆಗೆ ಇದ್ದುದರಿಂದ ನಮಗೂ ಒಂದು ಗಾಡಿ ಅವಶ್ಯವಿದೆ ಎಂದು ನಮಗನಿಸುತ್ತಿತ್ತು. ಬೆರಳೆಣಿಕೆಯಷ್ಟು ಅಡಿಕೆ ಮರಗಳಿದ್ದ ತೋಟ ನಮ್ಮದು, ಮನೆಯಲ್ಲಿ ಅನಾರೋಗ್ಯದಿಂದ ಪೀಡಿತ ವಯಸ್ಸಾದ ಅತ್ತೆ ಮಾವ, ಇವೆಲ್ಲದುದರಿಂದ ಹಣ ಹೊಂದಿಸುವುದು ಕಷ್ಟವಿತ್ತು. ಆದರೆ ದೇವರ…

Read More

ಸಿದ್ದಾಪುರದಲ್ಲಿ ವಿಶ್ವ ಜಲದಿನಾಚರಣೆ: ಗಂಗಾಪೂಜೆ, ಗೋಪೂಜೆ ಮೂಲಕ ಜಲ ಸಂರಕ್ಷಣೆಗೆ ಕರೆ

ಸಿದ್ದಾಪುರ: ಗ್ರಾಮ ವಿಕಾಸ ಸಮಿತಿ, ಸಿದ್ದಾಪುರ ಹಾಗೂ ಪರ್ಯಾವರಣ ಗತಿವಿಧಿ ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದ ಇತಿಹಾಸ ಪ್ರಸಿದ್ಧ ಕಾಶಿಕಲ್ಲು ಕೆರೆ ವಠಾರದಲ್ಲಿ ವಿಶ್ವ ಜಲದಿನಾಚರಣೆ ಅಂಗವಾಗಿ ಗಂಗಾಪೂಜೆ, ಗೋಪೂಜೆ ಮತ್ತು ಭೂಮಿ ಸುಪೋಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಮಂಗಳೂರು ವಿಭಾಗದ ಗ್ರಾಮ ವಿಕಾಸ ಪರ್ಯಾವರಣ ವಿಭಾಗ ಪ್ರಮುಖರಾದ ಶ್ರೀಮತಿ ರಮಿತಾ ಸೂರ್ಯವಂಶಿ ಹಾಗೂ ಸಿದ್ದಾಪುರ ತಾಲೂಕು ಪರ್ಯಾವರಣ ಗತಿವಿಧಿ ಪ್ರಮುಖರಾದ ಆರ್ಗೋಡು ಶ್ರೀಕಾಂತ್ ಶೆಣೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಮಿತಾ ಸೂರ್ಯವಂಶಿ…

Read More
error: Content is protected !!