Avatar

NAMMA MEDIA 24X7

ಮಂಜೇಶ್ವರದಲ್ಲಿ ಯು.ಡಿ.ಎಫ್. ಅಬ್ಬರ: ಎ.ಕೆ.ಎಂ. ಅಶ್ರಫ್ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯು.ಡಿ.ಎಫ್. ಅಧಿಕೃತ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಉಪ್ಪಳದ ಲೀಗ್ ಕಚೇರಿಯಿಂದ ಯು.ಡಿ.ಎಫ್. ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಪಕ್ಷದ ಧ್ವಜಗಳನ್ನು ಹಿಡಿದು ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ್ದು, ಭಾರೀ ಜನಸಮೂಹ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶ್ರಫ್ ಅವರು, “ಮಂಜೇಶ್ವರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ…

Read More

ಮಂಗಳೂರಿನಲ್ಲಿ ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್ ನೂತನ ಶೋರೂಮ್ ಉದ್ಘಾಟನೆ

ಮಂಗಳೂರು: ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್‌ನ ನೂತನ ಶೋರೂಮ್ ಉದ್ಘಾಟನಾ ಕಾರ್ಯಕ್ರಮವು ಹಂಪನಕಟ್ಟೆಯ ಕ್ಲಾಕ್ ಟವರ್ ಸಮೀಪದಲ್ಲಿರುವ ಶೋರೂಮ್‌ನಲ್ಲಿ ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಭಾನುವಾರ, ಮಾರ್ಚ್ 22ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ಅಭಿನಂದನೆ ಸಲ್ಲಿಸಿದರು . ಮುಖ್ಯ ಅತಿಥಿಯಾಗಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಭಾಗವಹಿಸಿದರು. ವಿಶೇಷ ಅತಿಥಿಯಾಗಿ 812 ಕಿಮೀ ಓಟದ ವಿಶಿಷ್ಟ ವಿಶ್ವ ದಾಖಲೆ ಹಾಗೂ ಗಿನ್ನೆಸ್ ದಾಖಲೆ ಸಾಧಿಸಿರುವ ಚೆಮ್ಮಣೂರು ಮಾಲೀಕ…

Read More

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮ ದಿನಾಚರಣೆ: ಕೆ. ಸುರೇಂದ್ರನ್ ಭಾವನಾತ್ಮಕ ನಮನ

ಕಾಸರಗೋಡು: ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಜನ್ಮ ದಿನದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆ. ಸುರೇಂದ್ರನ್ ಅವರು, ರಾಷ್ಟ್ರಕವಿಗಳ ಜನ್ಮನಾಡಿನಲ್ಲಿ ಗಡಿನಾಡ ಕನ್ನಡಿಗರ ಜನ್ಮಸಿದ್ಧ ಹಕ್ಕುಗಳ ಸಂರಕ್ಷಣೆ ತನ್ನ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಮಂಜೇಶ್ವರ ಗೋವಿಂದ ಪೈ ಅವರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದೂ ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು…

Read More

ಹೆಜಮಾಡಿ ಟೋಲ್ ಬಳಿ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಉಡುಪಿ: ಹೆಜಮಾಡಿ ಟೋಲ್ ಸಮೀಪದ ಟಯರ್ ಪಂಕ್ಚರ್ ಅಂಗಡಿಯಲ್ಲಿ ಭಾನುವಾರ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಯಿತು. ಅಗ್ನಿ ಅವಘಡದ ಪರಿಣಾಮ ಬಾನೆತ್ತರಕ್ಕೆ ಹೊಗೆ ಆವರಿಸಿಕೊಂಡಿದ್ದು, ಸುತ್ತಮುತ್ತಲಿನ ಗಿಡಮರಗಳು ಬೆಂಕಿಗಾಹುತಿಯಾದವು. ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಎಚ್ಚೆತ್ತು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳೀಯರ ಸಮಯಪ್ರಜ್ಞೆಯಿಂದ ಹತ್ತಿರದ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದ್ದು, ಭಾರೀ ಅನಾಹುತದಿಂದ ಪಾರುಗೊಂಡಂತಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ…

Read More

ಚಾರ್ಮಾಡಿ ಘಾಟ್ ಅಪಘಾತ: ಗಾಯಾಳು ವೃದ್ಧರೊಬ್ಬರು ಮೃತ್ಯು

ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಮೇಲನಹಳ್ಳಿ ಗ್ರಾಮದ ಒಟ್ಟು 10 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್‌ನ ಒಂಬತ್ತನೇ ತಿರುವಿನಲ್ಲಿ ವಾಹನದ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಒಂಬತ್ತು…

Read More

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಅಮಾನತುಗೊಂಡಿರುವ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. 2018ರಿಂದ 2023ರ ಅವಧಿಯಲ್ಲಿ ಈ ಘಟನೆಗಳು ನಡೆದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ಪ್ರಕಾರ, ಆರೋಪಿಯಾಗಿರುವ ಸಂದೇಶ್ ಪಿ.ಜಿ ಅವರು ಈ ಅವಧಿಯಲ್ಲಿ ಶಿಕ್ಷಕಿಯ ಮನೆಗೆ ತೆರಳಿ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ….

Read More

ಕಾಸರಗೋಡು ಕನ್ನಡಿಗರ ಆತಿಥ್ಯ ಅವಿಸ್ಮರಣೀಯ: ನಾ. ನಾಗಚಂದ್ರ

ಕಾಸರಗೋಡು: ಗಡಿನಾಡು ಕಾಸರಗೋಡಿನ ಕನ್ನಡಿಗರು ತೋರಿಸುವ ಆತಿಥ್ಯ, ಪ್ರೀತ್ಯಾದರ ಹೃದಯಸ್ಪರ್ಶಿಯಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ಎಂದು ರಂಗಭೂಮಿ ನಟ, ನಿರ್ದೇಶಕ ಹಾಗೂ ಸಾಹಿತಿ ನಾ. ನಾಗಚಂದ್ರ ಹೇಳಿದ್ದಾರೆ. ನುಳ್ಳಿಪ್ಪಾಡಿಯ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ನಡೆಯುವ ಕನ್ನಡ ಭವನ ಗ್ರಂಥಾಲಯದಲ್ಲಿ “ಕನ್ನಡ ಪಯಸ್ವಿನಿ ಪ್ರಶಸ್ತಿ” ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದ ಹಲವಾರು ಭಾಗಗಳಿಗೆ ಭೇಟಿ ನೀಡಿದ ಅನುಭವದಲ್ಲಿಯೂ ಕಾಸರಗೋಡಿನಂತಹ ಪ್ರೀತಿ, ಗೌರವ ಎಲ್ಲಿಯೂ ಸಿಗಲಿಲ್ಲ ಎಂದು ಹೇಳಿದರು. ಯಕ್ಷಗಾನ ಪಿತಾಮಹ ಪಾರ್ತಿಸುಬ್ಬ, ರಾಷ್ಟ್ರಕವಿ ಮಂಜೇಶ್ವರ…

Read More

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವಕ್ಕೆ ಆಹ್ವಾನ

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಕವಿ-ಕವಯತ್ರಿಯರಲ್ಲಿರುವ ಸಾಹಿತ್ಯ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ವಿಶೇಷ ಸಾಹಿತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. 2000ರಲ್ಲಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ, ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ ಸ್ಥಾಪಿತವಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ಚುಟುಕು ಸಾಹಿತ್ಯ ಹಾಗೂ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಈಗಾಗಲೇ 7 ಬಾರಿ ಜಿಲ್ಲಾ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನ…

Read More

ಮಾದರಿ ನಾಯಕತ್ವದ ಪ್ರತಿರೂಪ: ಶಾಸಕ ಡಾ. ಮಂಜುನಾಥ ಭಂಡಾರಿ

ವಿಧಾನ ಪರಿಷತ್ ಶಾಸಕರಲ್ಲಿ ವಿಭಿನ್ನ ಚಿಂತನೆ, ಕಾರ್ಯಶೈಲಿ ಮತ್ತು ಜನಸಂಪರ್ಕದ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿರುವವರು ಡಾ. ಮಂಜುನಾಥ ಭಂಡಾರಿ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಂದ ನಿರೀಕ್ಷಿಸುವ ಗುಣಗಳನ್ನು ಸಮರ್ಥವಾಗಿ ಅನಾವರಣಗೊಳಿಸಿರುವ ಅವರ ಕಾರ್ಯಪದ್ಧತಿ ಇತರರಿಗೆ ಮಾದರಿಯಾಗಿದೆ. ರಾಜಕೀಯವನ್ನು ಕೇವಲ ಅಧಿಕಾರದ ಸಾಧನವಾಗಿ ನೋಡುವುದಕ್ಕೆ ಬದಲಾಗಿ, ಸೇವೆಯ ಮಾರ್ಗವಾಗಿ ರೂಪಾಂತರಗೊಳಿಸಿರುವ ಅವರ ದೃಷ್ಟಿಕೋನವೇ ಅವರನ್ನು ಇತರರಿಂದ ಭಿನ್ನಗೊಳಿಸಿದೆ. ಪಕ್ಷ ರಾಜಕೀಯದಿಂದ ಚುನಾವಣಾ ರಾಜಕೀಯದ ಮೂಲಕ ಸಕ್ರಿಯ ಸೇವೆಯತ್ತಹಿಂದೆ ವಿಧಾನ ಪರಿಷತ್ ಸದಸ್ಯರೆಂದರೆ ಅಧಿವೇಶನಗಳಿಗೆ ಮಾತ್ರ ಸೀಮಿತವಾಗಿರುವುದು…

Read More

ಮಲಯಾಳ ಭಾಷಾ ಮಸೂದೆ -ಕನ್ನಡಿಗರ ಕರಾಳ ಭವಿಷ್ಯ

ಇದೇ ಬರುವ ದಿನಾಂಕ 28.3.2026.ಶನಿವಾರ ಬೆಳಿಗ್ಗೆ 10ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಂಕೀರ್ಣದಲ್ಲಿರುವ “ಕನ್ನಡದ ಶಕ್ತಿ ಶ್ರೀ ಬೇವಿ0ಜೆ ಶ್ರೀಧರ ಕಕ್ಕಿಲ್ಲಾಯ -ಸರೋಜಾದೇವಿ ಉಚಿತ ಸಾರ್ವಜನಿಕ ವಾಚನಾಲಯ “ದಲ್ಲಿ ಕನ್ನಡ ಭವನದ ನೇತೃತ್ವದಲ್ಲಿ, ಕನ್ನಡ ಸಂಘ ಸಂಸ್ಥೆಗಳ ಸಹಯೋಗದಲ್ಲಿ, ಕರಾಳ ಮಸೂದೆಯ ವಿರುದ್ಧ ಪ್ರತಿಭಟನಾ ಸಭೆ ನಡೆಯಲಿದೆ. 28.3.2026. ರಂದು ಬೆಳಿಗ್ಗೆ 10ಗಂಟೆಗೆ ಆಯೋಜಿಸಿದ ಈ ಪ್ರತಿಭಟನಾ ಸಭೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಸೇರಿ ಅಭಿಪ್ರಾಯ ಮಂಡಿಸಬೇಕಾಗಿ ಅತೀವ ಕಾಳಜಿಯಿಂದ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ…

Read More
error: Content is protected !!