ಮಂಜೇಶ್ವರದಲ್ಲಿ ಯು.ಡಿ.ಎಫ್. ಅಬ್ಬರ: ಎ.ಕೆ.ಎಂ. ಅಶ್ರಫ್ ನಾಮಪತ್ರ ಸಲ್ಲಿಕೆ
ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯು.ಡಿ.ಎಫ್. ಅಧಿಕೃತ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಉಪ್ಪಳದ ಲೀಗ್ ಕಚೇರಿಯಿಂದ ಯು.ಡಿ.ಎಫ್. ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಪಕ್ಷದ ಧ್ವಜಗಳನ್ನು ಹಿಡಿದು ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ್ದು, ಭಾರೀ ಜನಸಮೂಹ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶ್ರಫ್ ಅವರು, “ಮಂಜೇಶ್ವರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ…