Avatar

NAMMA MEDIA 24X7

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆಯಲ್ಲಿ ಬದಲಾವಣೆ: ಪ್ಯಾಸೆಂಜರ್ ರೈಲುಗಳು ರದ್ದು, ಎಕ್ಸ್‌ಪ್ರೆಸ್‌ಗಳಿಗೆ ವಿಳಂಬ

ಮಂಗಳೂರು: ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ನಡುವೆ ಸಂಚರಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಪ್ರಮುಖ ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಿಸಿದೆ. ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಹಾಗೂ ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ–ಮಂಗಳೂರು ಪ್ಯಾಸೆಂಜರ್) ರೈಲುಗಳನ್ನು ಒಟ್ಟು 35 ದಿನಗಳ ಕಾಲ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ರೈಲುಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ಸಂಚರಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಇದರೊಂದಿಗೆ, ಏಪ್ರಿಲ್ ತಿಂಗಳಲ್ಲಿ ಹಲವಾರು ಎಕ್ಸ್‌ಪ್ರೆಸ್…

Read More

ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಫರಾಜ್ @ ಮೊಹಮ್ಮದ್ ಫರಾಜ್, ಬಂಧಿತ ಯುವಕ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ…

Read More

ಮಾರ್ಚ್ 23ರಂದು ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ನಾಮಪತ್ರ ಸಲ್ಲಿಕೆ

ಕಾಸರಗೋಡು: ಕಾಸರಗೋಡು ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಅವರು ಮಾರ್ಚ್ 23ರಂದು (ಸೋಮವಾರ) ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಪಕ್ಷದ ಹಿರಿಯ ನಾಯಕರು, ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಚುನಾವಣಾ ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ.

Read More

ಕೋಟಿಮುರ-ಸರಿಪಳ್ಳ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ: 1.80 ಕೋಟಿ ಅನುದಾನ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ – ಸರಿಪಳ್ಳ ಸಂಪರ್ಕಿಸುವ ಮುಖ್ಯ ರಸ್ತೆಯು 1.80 ಕೋಟಿ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಸುಮಾರು 900 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯ ಅಗತ್ಯತೆಯ ಕುರಿತು ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು,…

Read More

ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿಯಿಂದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ

ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಬಿ. ಜನಾರ್ದನ ಪೂಜಾರಿ ಅವರು ಸಂಸದನಾಗಿ ಕಾರ್ಯನಿರ್ವಹಣೆ ಕುರಿತು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಚರ್ಚೆ ನಡೆಸಿ, ಉತ್ತಮವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಶುಭಹಾರೈಸಿದರು. ಈ ಶಿಷ್ಟಾಚಾರ ಭೇಟಿಯ ವೇಳೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಕೂಡ ಉಪಸ್ಥಿತರಿದ್ದರು.

Read More

ಡಿಯಾಗೋ ಗಾರ್ಸಿಯಾ ಮೇಲೆ ಇರಾನ್ ಕ್ಷಿಪಣಿ ದಾಳಿ ಪ್ರಯತ್ನ: ಜಾಗತಿಕ ಭದ್ರತೆಯಲ್ಲಿ ಸಂಚಲನ

ಮಧ್ಯಪ್ರಾಚ್ಯ: ಜಾಗತಿಕ ರಕ್ಷಣಾ ವಲಯವನ್ನು ಬೆಚ್ಚಿಬೀಳಿಸುವ ಬೆಳವಣಿಗೆಯಲ್ಲಿ Iran ತನ್ನ ಕ್ಷಿಪಣಿ ದಾಳಿಯ ವ್ಯಾಪ್ತಿಯನ್ನು ಅನಿರೀಕ್ಷಿತವಾಗಿ ವಿಸ್ತರಿಸಿರುವ ವರದಿಗಳು ಲಭ್ಯವಾಗಿವೆ. ಹಿಂದೂ ಮಹಾಸಾಗರದಲ್ಲಿರುವ ಅಮೆರಿಕ–ಬ್ರಿಟನ್ ಸಂಯುಕ್ತ ಸೈನಿಕ ತಾಣವಾದ Diego Garcia ಮೇಲೆ ಎರಡು ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದ ಮಾಹಿತಿ ಹೊರಬಂದಿದೆ. ಈ ದಾಳಿ ಕೇವಲ ಗುರಿಯನ್ನು ತಲುಪುವ ಪ್ರಯತ್ನವಾಗಿರದೆ, ಅಮೆರಿಕದ ಪ್ರಮುಖ ಸೈನಿಕ ನೆಲೆಗಳೂ ಇರಾನ್‌ನ ವ್ಯಾಪ್ತಿಯಿಂದ ದೂರವಿಲ್ಲ ಎಂಬ ಬಲವಾದ ಎಚ್ಚರಿಕೆಯಾಗಿ ಪರಿಗಣಿಸಲಾಗುತ್ತಿದೆ. ಇರಾನ್ ಇದುವರೆಗೆ ತನ್ನ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಗರಿಷ್ಠ…

Read More

ಜೂಜು ರಹಿತ ಕೋಳಿ ಅಂಕಕ್ಕೆ ಅವಕಾಶ ನೀಡಿ: ಸರ್ಕಾರಕ್ಕೆ ವೇದಿಕೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸಾಂಪ್ರದಾಯಿಕ ಜೂಜು ರಹಿತ ಕೋಳಿ ಅಂಕಗಳಿಗೆ ಅವಕಾಶ ನೀಡುವಂತೆ ಜಿಲ್ಲೆಯ ಶಾಸಕರ ಜೊತೆ ಬೆಂಗಳೂರು ವಿಧಾನ ಸೌಧಕ್ಕೆ ತೆರಳಿ ರಾಜ್ಯ ಸರಕಾರಕ್ಕೆ ಒತ್ತಡವನ್ನು ಹಾಕಿದ್ದೇವೆ ಎಂದು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಗೌರವಾಧ್ಯಕ್ಷ ಶಿವಣ್ಣ ಗೌಡ ಕಡಬ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಂಪ್ರದಾಯಿಕ ಕೋಳಿ ಅಂಕಗಳನ್ನು ನಡೆಸಲು ಅವಕಾಶ ನೀಡುವ ಸಲುವಾಗಿ ಜಿಲ್ಲೆಯ ರೈತರು ಸೇರಿಕೊಂಡು ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆಯನ್ನು ಮಾಡಿದ್ದೇವೆ,ಇದೀಗ…

Read More

ಇಂದ್ರಾಳಿಯಲ್ಲಿ ಬೃಹತ್ ಹೆಬ್ಬಾವಿನ ರಕ್ಷಣೆ: ಗಾಯಗೊಂಡ ಹಾವಿಗೆ ಚಿಕಿತ್ಸೆ

ಉಡುಪಿ: ನಗರದಲ್ಲಿನ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪ ಬೃಹತ್ ಗಾತ್ರದ ಹೆಬ್ಬಾವೊಂದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಇಂದ್ರಾಳಿ ರೈಲ್ವೆ ನಿಲ್ದಾಣದ ಆಟೋ ಸ್ಟ್ಯಾಂಡ್ ಹತ್ತಿರ, ರೈಲ್ವೆ ಪ್ರಯಾಣಿಕರ ಸಂಚಾರ ಜೋರಾಗಿರುವ ಪ್ರದೇಶದಲ್ಲಿ ಹೆಬ್ಬಾವಿನ ಚಲನವಲನವನ್ನು ಗಮನಿಸಿದ ಆಟೋ ಚಾಲಕ ಪ್ರಶಾಂತ್ ಅವರು, ತಕ್ಷಣ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಒಳಕಾಡು ಅವರು, ಹಾವು ಹಿಡಿಯುವ ಪರಿಣಿತಿ ಹೊಂದಿರುವ ಆಟೋ ಚಾಲಕ ಬಶೀರ್ ಅವರನ್ನು ಕರೆಯಿಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಿದರು….

Read More

ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ರಾಜ್ಯ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ : ಸ್ಪೀಕ‌ರ್ ಯು.ಟಿ.ಖಾದರ್

ಮಂಗಳೂರು :ವಿಧಾನಸೌಧದ ಮುಖ್ಯ ದ್ವಾರವನ್ನು ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ 25 ರಂದು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕ‌ರ್ ಯು.ಟಿ.ಖಾದರ್ ತಿಳಿಸಿದ್ದಾರೆ ಅವರು ಮಂಗಳೂರಿನ ಜೆಪ್ಪಿನಮೊಗರು ಎಂ ಎಸ್ ಗಾರ್ಡನ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ರವೇಶ ದ್ವಾರವು ಅತ್ಯಂತ ಸುಂದರವಾದ ಕಲಾಕೃತಿಯ ಕೆತ್ತನೆಗಳೊಂದಿಗೆ ಕರ್ನಾಟಕ ಶೈಲಿಯನ್ನು ಹೊಂದಿದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು . ವಿಧಾನಸೌಧದ…

Read More

ಗೂನಡ್ಕ ಲಾಡ್ಜ್‌ನಲ್ಲಿ ಯುವಕನ ಆತ್ಮಹತ್ಯೆ

ಬಂಟ್ವಾಳ: ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ತಿಲಕರಾಜ್ ಅವರು ಮಾರ್ಚ್ 19ರಂದು ಅನಂತಾಡಿ ಪ್ರದೇಶದ ಮನೆಯೊಂದರಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕಾಗಿ ಅಗತ್ಯ ಸಾಮಗ್ರಿಗಳನ್ನು ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಕುಟುಂಬದವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇವರು…

Read More
error: Content is protected !!