ಇನೋಳಿಗೆ ಸರ್ಕಾರಿ ಬಸ್ ಓಡಾಟಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ
ಕೊಣಾಜೆ: ಪಾವೂರು ಗ್ರಾಮದ ಇನೋಳಿಗೆ ಸರ್ಕಾರಿ ಬಸ್ ಸೇವೆ ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಬಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಲಾರ್ ಪದವಿನ ಸೆಂಟ್ರಲ್ ಮುಸ್ಲಿಂ ಶಾಲೆ ಬಳಿ ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಇನೋಳಿಗೆ ಸರ್ಕಾರಿ ಬಸ್ ಓಡಾಟ ಆರಂಭಿಸುವಂತೆ ಗ್ರಾಮ ಪಂಚಾಯಿತಿ, ಸಚಿವರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದ್ದಾರೆ. ಸರ್ಕಾರಿ ಬಸ್ ಸೇವೆ ಇಲ್ಲದ ಕಾರಣ ರಾಜ್ಯ ಸರ್ಕಾರದ ಮಹತ್ವದ…