Avatar

NAMMA MEDIA 24X7

ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಮಾವೇಶ ಏಪ್ರಿಲ್ 20ರಂದು

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಬೆಳಗ್ಗೆ 9 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಳ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ…

Read More

ಕನಿಷ್ಠ ವೇತನದ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ

ಕನಿಷ್ಠ ವೇತನ ಪುನರ್ ವಿಮರ್ಶೆಗೆ ಆಗ್ರಹಿಸಿ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳ ಸಂರಕ್ಷಿಸಲು ಒತ್ತಾಯಿಸಿ ನಗರದಲ್ಲಿಂದು ಸಾರ್ವಜನಿಕರ ಮಧ್ಯೆ ಸಹಿ ಸಂಗ್ರಹ ಚಳುವಳಿಯನ್ನು ನಡೆಸಲಾಯಿತು.ಕಾರ್ಮಿಕ ವರ್ಗದ ಆಶಾಕಿರಣವಾದ ಡಾ.ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾರಣೆಯ ದಿನದಂದು ಕರ್ನಾಟಕ ರಾಜ್ಯಾದ್ಯಂತ ಸಹಿ ಸಂಗ್ರಹ ಚಳುವಳಿಯನ್ನು ನಡೆಸಬೇಕೆಂಬ CITU ಕರೆಯ ಮೇರೆಗೆ CITU ದ.ಕ.ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಈ ಕಾರ್ಯಕ್ರಮವನ್ನು‌ ಆಯೋಜಿಸಲಾಯಿತು. ಸಹಿ ಸಂಗ್ರಹ ಚಳುವಳಿಯನ್ನು ಉದ್ಘಾಟಿಸಿದ ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರರಾದ ಜೆ ಬಾಲಕೃಷ್ಣ ಶೆಟ್ಟಿಯವರು ಮಾತನಾಡಿ,…

Read More

ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ: ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ

ಮಂಗಳೂರು: ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕೆಂದು ನವಸಹಜ ಸಮುದಾಯ ಸಂಘಟನೆ ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷೆ ನಿಖಿಲಾ, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ಮಂಗಳೂರಿನ ಕೆಲವರು ಅಪಹರಿಸಿದ್ದು, ಆತನಿಗೆ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹಾಗೂ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಯನ್ನು ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಮಾಡಿಸಿರುವುದು ಗಂಭೀರ ಅಪರಾಧವಾಗಿದೆ ಎಂದು…

Read More

ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ

ಮಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮೊಗವೀರ ಸಮುದಾಯದ ಮುಖಂಡರಾಗಿದ್ದ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಮೊಗವೀರ ಸಮುದಾಯದಲ್ಲಿ ಹಿರಿಯ ರಾಜಕೀಯ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಮೀನುಗಾರರಿಗೆ ಸಮಸ್ಯೆ ಎದುರಾದಾಗ ತಕ್ಷಣ ಸ್ಪಂದಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಾಮಾಜಿಕ ಕಳಕಳಿಯುಳ್ಳ ನಾಯಕರೆಂದು ಹೆಸರು ಗಳಿಸಿದ್ದರು. ಮಂಗಳೂರಿನ ಪ್ರಮುಖ ರಂಗಕರ್ಮಿ, ಸಾಹಿತಿ ಹಾಗೂ ಸಾಮಾಜಿಕ…

Read More

ಪಾವೂರು ಪೊಯ್ಯೇ ಶ್ರೀ ಚಾಮುಂಡೇಶ್ವರಿ ದೈವಸ್ಥಾನದಲ್ಲಿ 57ನೇ ಏಕಹಾ ಭಜನೆ

ಪಾವೂರು ಪೊಯ್ಯೇ ಶ್ರೀ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ವತಿಯಿಂದ 57ನೇ ಏಕಹಾ ಭಜನೆ ಕಾರ್ಯಕ್ರಮ ಭಕ್ತಿಭಾವದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಅಧ್ಯಕ್ಷರಾದ ಮನೋಹರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತ್ಯಾಪಣ್ಣ ಶೆಟ್ಟಿ, ರವಿ ಮುಡಿಮಾರ್, ನಾಗೇಶ್ ಬಲ್ಲೂರ್, ವಿನೋದ್ ಪಾವೂರು, ಶಿವಕುಮಾರ್ ಬಳ್ಳೂರ್, ಶಿವ ಕೊಪ್ಪಳ, ಗಣೇಶ್ ಪಾವೂರು, ಮೋನಪ್ಪ ಶೆಟ್ಟಿ ಮುಟ್ಲ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಹಲವಾರು ಭಕ್ತರು ಭಾಗವಹಿಸಿದರು. ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಬಾಲಗೋಕುಲ…

Read More

28 ವರ್ಷದ ಕೃಷಿ ಸಾಧನೆ — ಪೆರ್ಮುದೆಯ ಸುಬ್ಬಣ್ಣ ನಾಯ್ಕ ಮಾದರಿ ರೈತ

ಉಪ್ಪಳ, ಏಪ್ರಿಲ್:ಮಣ್ಣಿನೊಂದಿಗೆ ಮನಸ್ಸು ಸೇರಿಸಿದರೆ ಯಶಸ್ಸು ಖಚಿತ ಎಂಬುದನ್ನು ಪೆರ್ಮುದದ ರೈತ ಸುಬ್ಬಣ್ಣ ನಾಯ್ಕ ಅವರು ತಮ್ಮ 28 ವರ್ಷದ ಕೃಷಿ ಜೀವನದ ಮೂಲಕ ಸಾಬೀತುಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೃಷಿಯನ್ನು ಜೀವನದ ಭಾಗವನ್ನಾಗಿಸಿಕೊಂಡಿರುವ ಅವರು, ವೈವಿಧ್ಯಮಯ ಬೆಳೆಗಳ ಮೂಲಕ ಸ್ಥಳೀಯ ರೈತರಿಗೆ ಮಾದರಿಯಾಗಿದ್ದಾರೆ. ಒಂದು ಬೆಳೆಗೇ ಸೀಮಿತವಾಗದೆ, ಪೇರಲೆ, ಪಪ್ಪಾಯಿ, ದಾಳಿಂಬೆ ಸೇರಿದಂತೆ ವಿವಿಧ ಹಣ್ಣುಗಳು, ಹರಿವೆ ಸೊಪ್ಪು (ಚೀರ), ಬೆಂಡೆಕಾಯಿ , ಮಲ್ಲಿಗೆ ಸೇರಿದಂತೆ ತರಕಾರಿ ಹಾಗೂ ಸುಗಂಧ ದ್ರವ್ಯಗಳನ್ನು ಬೆಳೆಸುತ್ತಿದ್ದಾರೆ. ಇದರ ಜೊತೆಗೆ…

Read More

ಬೇಸಿಗೆ ರಜೆಯಲ್ಲಿ ಕುಂಡು ಕೊಳಕೆ ಕಡಲತೀರಕ್ಕೆ ಜನಸಾಗರ

ಮಂಜೇಶ್ವರ :ಕಾಸರಗೋಡು ಜಿಲ್ಲೆಯ ಗಡಿ ಭಾಗವಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿ ಹೊರಹೊಮ್ಮುತ್ತಿದೆ. ಅರಬ್ಬಿ ಸಮುದ್ರದ ನೀಲಿ ಅಲೆಗಳು ಹಾಗೂ ಹಸಿರು ಪ್ರಕೃತಿಯ ನಡುವೆ ಇರುವ ಈ ಕಡಲತೀರವು ಬೇಸಿಗೆ ರಜೆಯ ಸಂದರ್ಭದಲ್ಲಿಯೇ ಜನರಿಂದ ಕಿಕ್ಕಿರಿದು ತುಂಬುತ್ತಿದೆ. ಈ ತಾಣದ ಪ್ರಮುಖ ಆಕರ್ಷಣೆ ‘ಓಷನ್ ವಾಟರ್ ಪಾರ್ಕ್’ ಆಗಿದ್ದು, ಶಾಲಾ ರಜೆಯ ಸಂಭ್ರಮದಲ್ಲಿರುವ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಮನರಂಜನೆಯ ಕೇಂದ್ರವಾಗಿದೆ. ಮಕ್ಕಳಿಗಾಗಿ ಸುರಕ್ಷಿತ ಸ್ಲೈಡ್‌ಗಳು ಹಾಗೂ ವಿವಿಧ ಜಲ ಕ್ರೀಡೆಗಳ…

Read More

ಮಹಮ್ಮದ್ ನಂದರಬೆಟ್ಟು ಅಗಲಿಕೆ: ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕಂಬನಿ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಮಹಮ್ಮದ್ ನಂದರಬೆಟ್ಟು ಅವರ ನಿಧನಕ್ಕೆ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಸಮಾಜಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟ ಉಂಟುಮಾಡಿದೆ ಎಂದು ತಿಳಿಸಿದ್ದಾರೆ. ಮೂರು ಬಾರಿ ಬಂಟ್ವಾಳ ಪುರಸಭೆಗೆ ಆಯ್ಕೆಯಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮಹಮ್ಮದ್ ನಂದರಬೆಟ್ಟು ಅವರು, ತಮ್ಮ ಕಾರ್ಯಕಾಲದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು. ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಅವರು, ಒಂದು…

Read More

ಎಫ್‌ಎಂಸಿಐ ಪದವಿ ಪ್ರದಾನ ಸಮಾರಂಭ ಎ.16ರಿಂದ 18ರವರೆಗೆ — 856 ಪದವೀಧರರಿಗೆ ಪದವಿ

ಫಾದರ್ ಮುಲ್ಲರ್ ಚಾರಿಟೇಬಲ್ ಶಿಕ್ಷಣ ಸಂಸ್ಥೆಗಳ (ಎಫ್‌ಎಂಸಿಐ) ಪದವಿ ಪ್ರದಾನ ಸಮಾರಂಭ ಎ.16ರಿಂದ 18ರ ತನಕ ನಡೆಯಲಿದ್ದು, ಆರೋಗ್ಯ ಕ್ಷೇತ್ರದ 856 ಪದವೀಧರರರು ಆರೋಗ್ಯ ಸೇವೆಯ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ ಎಂದು ಎಫ್‌ಎಂಸಿಐ ನಿರ್ದೇಶಕ ಫಾದರ್ ಫಾಸ್ಟಿನ್ ಲೂಕಾಸ್ ಲೋಬೊ ತಿಳಿಸಿದರು . ಅವರು ಸಂಸ್ಥೆಯ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಣೆಯನ್ನು ನೀಡಿದರು . ಪದವಿ ಪ್ರದಾನ ಸಮಾರಂಭದಲ್ಲಿ ಸಾಂಪ್ರದಾಯಿಕ ಆಕ್ಸ್‌ಫರ್ಡ್ ಕ್ಯಾಪ್…

Read More

ಸುಳ್ಯ ಸಮೀಪ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ: ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ

ಸುಳ್ಯ ಸಮೀಪ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿ ಬಾವಿಗೆ ಬಿದ್ದ ಕಾಡಾನೆಯನ್ನು ರಕ್ಷಣೆ ಮಾಡಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಾಜು 20 ವರ್ಷ ಪ್ರಾಯದ ಗಂಡಾನೆಯೊಂದು ಪೆರಾಜೆ ಸಮೀಪ ಕಲ್ಚರ್ಪೆಯಲ್ಲಿ ಭಾನುವಾರ ರಾತ್ರಿ 11.30ರ ವೇಳೆಗೆ ತೆರೆದ ಬಾವಿಗೆ ಬಿದ್ದಿದೆ. ಕಾಡಿನಿಂದ ನಾಡಿಗೆ ಬಂದ ಆನೆಯು ಅರಣ್ಯದಂಚಿನ ತೋಟದ ಬದಿಯಲ್ಲಿರುವ ಪಾಳು ಬಿದ್ದ ಬಾವಿಗೆ ಆಯ ತಪ್ಪಿ…

Read More
error: Content is protected !!