Avatar

NAMMA MEDIA 24X7

ಮಂಗಳೂರು: ಕಾರಿನಲ್ಲಿ ಜಾನುವಾರು ಸಾಗಾಟ – ಇಬ್ಬರು ಬಂಧನ

ಮಂಗಳೂರು: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ. ಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು…

Read More

ರಮೇಶ್ ಚೆನ್ನಿತ್ತಲಗೆ ಗೃಹ ಸಚಿವರಾಗುವ ಸಾಧ್ಯತೆ? ವಿ.ಡಿ. ಸತೀಶನ್ ಸಂಪುಟದಲ್ಲಿ ಚೆನ್ನಿತ್ತಲಗೆ ಮಹತ್ವದ ಸ್ಥಾನ?

ತಿರುವನಂತಪುರಂ:ರಮೇಶ್ ಚೆನ್ನಿತ್ತಲ್ ಅವರು ವಿ.ಡಿ.ಸತೀಸನ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗುವ ಸಾಧ್ಯತೆಯಿದೆ. ನಿಯೋಜಿತ ಮುಖ್ಯಮಂತ್ರಿ ವಿ.ಡಿ.ಸತೀಸನ್ ಹಾಗೂ ರಮೇಶ್ ಚೆನ್ನಿತ್ತಲ ನಡುವೆ ಮಾತುಕತೆ ನಡೆದ ಬಳಿಕ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದೇ ವೇಳೆ,ವಿ. ಡಿ. ಸತೀಶನ್ ಅವರ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸ್ಥಾನವನ್ನು ವಿ. ಡಿ. ಸತೀಶನ್ ಅವರಿಗೆ ನೀಡುವಂತೆ ಹೈಕಮಾಂಡ್ ಘೋಷಿಸಿದ ಬಳಿಕ ರಮೇಶ್ ಚೆನ್ನಿತ್ತಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ….

Read More

ಬಂಟ್ವಾಳ: ಸ್ಕೂಟರ್ ಸ್ಕಿಡ್ – ಸವಾರ ಮೃತ್ಯು

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ಸವಾರನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ರಾಮಲ್ ಕಟ್ಟೆ ಟೋಲ್ ಗೇಟ್ ಸಮೀಪ ನಡೆದಿದೆ. ಪಿ.ಸೋಮನಾಥ ಪ್ರಭು( 65) ಎಂಬವರು ಮೃತಪಟ್ಟ ವ್ಯಕ್ತಿ.ಅವರು ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುವ ಸಂದರ್ಭದಲ್ಲಿ ರಾಮಲ್ ಕಟ್ಟೆ ಟೋಲ್ ಗೇಟ್ ಸಮೀಪ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇವರಿಗೆ…

Read More

ಮಂಗಳೂರು: ಹಿಜಾಬ್ ವಿಚಾರಕ್ಕೆ ರಾಜಕೀಯ ಬಣ್ಣ – ಐವನ್ ಡಿ’ಸೋಜ

ಮಂಗಳೂರು:ಹಿಜಾಬ್ ಧರಿಸುವುದು ಹೊಸ ಪದ್ಧತಿಯಲ್ಲ. ಅದು ಮುಸ್ಲಿಂ ಸಮುದಾಯದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಯ ಭಾಗವಾಗಿದ್ದು, ಅದಕ್ಕೆ ರಾಜಕೀಯ ಬಣ್ಣ ಬಳೆಯುತ್ತಿರುವುದು ಬಿಜೆಪಿಯ ಸಣ್ಣತನ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಐವನ್ ಡಿ’ಸೋಜ ಕಟುವಾಗಿ ರಾಜ್ಯ ಬಿಜೆಪಿ ಸರಕಾರವನ್ನು ಟೀಕಿಸಿದರು . ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಧರಿಸುವ ಪದ್ಧತಿ ಬಾಲ್ಯದಿಂದಲೇ ನಡೆದುಕೊಂಡು ಬಂದಿರುವ ಧಾರ್ಮಿಕ ಸಂಪ್ರದಾಯವಾಗಿದೆ. ಸಿಖ್ ಸಮುದಾಯದವರು ಪೇಟ ಧರಿಸುವಂತೆ, ಮುಸ್ಲಿಂ ಮಹಿಳೆಯರೂ ತಮ್ಮ ಧರ್ಮದ ಸಂಸ್ಕೃತಿಯ ಭಾಗವಾಗಿ…

Read More

ಮಂಗಳೂರು: ಇಂಧನ ದರ ಏರಿಕೆ ಕೇಂದ್ರದ ವೈಫಲ್ಯ – ಐವನ್ ಡಿ’ಸೋಜ

ಮಂಗಳೂರು: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಐವನ್ ಡಿ’ಸೋಜ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರಗಳನ್ನು ಏರಿಸಲಾಗಿದೆ. ಜನರ ಸಂಕಷ್ಟಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಜನರ…

Read More

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರಪ್ರಥಮ ಬಾರಿಗೆ ಸಂಭ್ರಮಿಸಿದ ಸ್ನೇಹ ಸಂಭ್ರಮ

1963 ರಲ್ಲಿ ಸ್ಥಾಪನೆ ಆದ ಶ್ರೀ ಸುಬ್ರಮಣ್ಯಶ್ವರ ಪ್ರೌಢಶಾಲೆಯಲ್ಲಿ ಪ್ರಥಮ ಬಾರಿಗೆ 2005ನೇ ಸಾಲಿನ ವಿದ್ಯಾರ್ಥಿಗಳು 20 ವರ್ಷಗಳ ನಂತರ ಒಂದುಗೂಡಿ ಆಯೋಜಿಸಿದ ಸ್ನೇಹ ಸಂಭ್ರಮ ಹಾಗೂ ಶ್ರೀ ಜ್ಞಾನದೀಪ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವೂ ಪ್ರೌಢಶಾಲ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ನಂದಾ ಹರೀಶ್ ಇವರ ಅದ್ಯಕ್ಷತೆಯಲ್ಲಿ ದಿನಾಂಕ ಮೇ 11ರಂದು ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಕಾಲೇಜಿನ ಗೌರವಾನ್ವಿತ ಪ್ರಾಂಶುಪಾಲರಾದ ಶ್ರೀ ಸೋಮಶೇಖರ್ ನಾಯಕ್ ರವರು ದೀಪ…

Read More

ಮಂಗಳೂರು: ಮೇ 20ರಂದು ಔಷಧ ಅಂಗಡಿಗಳ ಸಂಪೂರ್ಣ ಬಂದ್

ಮಂಗಳೂರು:ದೇಶವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರಕ್ಕೆ ಸಂಬಂಧಿಸಿದಂತೆ ಮೇ 20ರಂದು ನಡೆಯಲಿರುವ ಬಂದ್ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸೌತ್ ಕನರಾ ಕೆಮ್ & ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಅರುಣ್ ಶೆಟ್ಟಿ ಮಾತನಾಡಿ, ಆಲ್ ಇಂಡಿಯಾ ಆರ್ಗನೈಜೇಶನ್ ಆಫ್ ಕೆಮಿಸ್ಟ್ಸ್ & ಡ್ರಗ್ಗಿಸ್ಟ್ಸ್ (AIOCD) ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರ್ನಾಟಕ ಕೆಮಿಸ್ಟ್ಸ್ & ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ (KCDA) ಬೆಂಬಲ ವ್ಯಕ್ತಪಡಿಸಿದ್ದು, ಅದರಂತೆ ಮೇ 20ರಂದು 24…

Read More

”ದಕ್ಷ್ ಪ್ಲೇ ಸ್ಕೂಲ್ ” 2026-27ನೇ ಶೈಕ್ಷಣಿಕ ಸಾಲಿನಿಂದ ಮಕ್ಕಳಿಗೆ ಕೃಷಿ ಕುರಿತು ಪ್ರಾಯೋಗಿಕ ಅಧ್ಯಯನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನರ್ಸರಿ , ಎಲ್ ಕೆ ಜಿ , ಯುಕೆಜಿ , ಡೇಕೇರ್ ಮಕ್ಕಳಿಗಾಗಿ ಉಳ್ಳಾಲಬೈಲಿನ ”ದಕ್ಷ್ ಪ್ಲೇ ಸ್ಕೂಲ್ ” 2026-27ನೇ ಶೈಕ್ಷಣಿಕ ಸಾಲಿನಿಂದ ಪುಟಾಣಿ ಮಕ್ಕಳಿಗೆ ಕೃಷಿ ಕುರಿತು ತಳಮಟ್ಟದ ಅಧ್ಯಯನ ನಡೆಸಲು ಫುಡ್ ಚೈನ್ ಕ್ಯಾಂಪೇನ್ (ಕೆ.ವಿ.ಕೆ.) ಮಂಗಳೂರು ಇದರ ಜೊತೆ ಪಾಲುದಾರಿಕೆಯೊಂದಿಗೆ ಈ ಚಟುವಟಿಕೆ ನಡೆಯಲಿದೆ ಎಂದು ದಕ್ಷ್ ಪ್ಲೇ ಸ್ಕೂಲ್ ಉಳ್ಳಾಲ ಇದರ ಫೌಂಡರ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರಾದ ಮಲ್ಲಿಕಾ ಉಳ್ಳಾಲಬೈಲ್ ತಿಳಿಸಿದರು…

Read More

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್; ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ

ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಅವರು ಕರ್ನಾಟಕ ರಾಜ್ಯ ಸರ್ಕಾರವು ಹಿಜಾಬ್ ನಿಷೇಧವನ್ನು ಹಿಂಪಡೆಯಲು ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಕ್ರಮವು ವಿದ್ಯಾರ್ಥಿನಿಯರ ಶಿಕ್ಷಣ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಿಕ ಹಕ್ಕುಗಳನ್ನು ಗೌರವಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ, ಈ ನಿರ್ಧಾರವು ಜನಪರ ಹೋರಾಟ ಹಾಗೂ ನಿರಂತರ ಕಾನೂನು ಹೋರಾಟದ ಜಯವಾಗಿದೆ ಎಂದು ಅವರು ವಿವರಿಸಿದರು . ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಿಜಾಬ್ ನಿಷೇಧವನ್ನು ಹಿಂಪಡೆಯುವುದಾಗಿ…

Read More

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಇಬ್ಬರು ಹಿಡಿತ

ಮಂಗಳೂರು: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್‌ನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಟ್ರಕ್‌ನಲ್ಲಿ 27 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಹಾವೇರಿಯಿಂದ ಮಂಗಳೂರು ಮಾರ್ಗವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು…

Read More
error: Content is protected !!