Avatar

NAMMA MEDIA 24X7

ಪೊಲೀಸರ ಕಣ್ಣುತಪ್ಪಿಸಿ ಓಡಾಡುತ್ತಿದ್ದ ಆರೋಪಿ ಕೊನೆಗೂ ಸೆರೆ

ಮಂಜೇಶ್ವರ: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಕುಂಬಳೆ ಪೊಲೀಸರು ಚಾಣಾಕ್ಷತನದಿಂದ ಬಂಧಿಸಿದ್ದಾರೆ.ಆರಿಕ್ಕಾಡಿ ಬನ್ನಂಗುಳ ನಿವಾಸಿ ಅಬ್ದುಲ್ ಜಲೀಲ್ ಅಲಿಯಾಸ್ ಜಲ್ಲು (28) ಬಂಧಿತ ಆರೋಪಿ. ​ಬದಿಯಡ್ಕ ಮತ್ತು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಸೇರಿದಂತೆ ಹಲವಾರು ಗಂಭೀರ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಕಳೆದ ಕೆಲವು ಸಮಯದಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಎಂಬಲ್ಲಿ ಗುಟ್ಟಾಗಿ ನೆಲೆಸಿದ್ದ ಈತನ ಬಗ್ಗೆ ಕುಂಬಳೆ ಎಸ್‌….

Read More

ಅಪಘಾತಕ್ಕೀಡಾದ ಬೈಕ್ ಕಳವು; ಯುವಕ ಬಂಧನ

ಮಂಜೇಶ್ವರ: ಅಪಘಾತಕ್ಕೀಡಾಗಿ ರಸ್ತೆ ಬದಿಯಲ್ಲಿದ್ದ ಬೈಕನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಅಲಿಯಾಸ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ​ಮೇ 1ರಂದು ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂ.ಎನ್. ಸಂತೋಷ್ ಎಂಬವರ ಬೈಕ್ ಅಪಘಾತಕ್ಕೀಡಾಗಿತ್ತು. ಗಾಯಗೊಂಡಿದ್ದ ಸಂತೋಷ್ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡು ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ​ ಈತನ ಮೇಲೆ ಈಗಾಗಲೇ ಮಂಜೇಶ್ವರ ಠಾಣೆಯಲ್ಲಿ ಪೋಕ್ಸೊ ಪ್ರಕರಣ…

Read More

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಅಮೆರಿಕ-ಇರಾನ್ ಸಂಘರ್ಷ ತೀವ್ರ

ವಾಷಿಂಗ್ಟನ್/ತೆಹ್ರಾನ್: ಅಮೆರಿಕ-ಇರಾನ್ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಸ್ಟ್ರೈಟ್ ಆಫ್ ಹಾರ್ಮುಜ್ ಸುತ್ತ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇರಾನ್ ರಾಜ್ಯ ಟಿವಿ ವರದಿ ಪ್ರಕಾರ, ಹೊಸ ಐಆರ್‌ಜಿಸಿ ನಿಯಮಗಳ ಅಡಿಯಲ್ಲಿ ಹೆಚ್ಚಿನ ಹಡಗುಗಳು ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುತ್ತಿವೆ. ಈ ನಡುವೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅಮೆರಿಕದ ಮೇಲೆ ಇರಾನ್‌ಗೆ ವಿಶ್ವಾಸವಿಲ್ಲ ಎಂದು ಹೇಳಿದ್ದು, ಅಮೆರಿಕ ಗಂಭೀರ ನಿಲುವು ತಾಳಿದರೆ ಮಾತ್ರ ಸಾಧ್ಯ ಮಾತುಕತೆ ಎಂದು. ಆದಾಗ್ಯೂ, ಭಾರತ…

Read More

ಕುಂಜತ್ತೂರು: ಬಸ್ ಚಾಲಕರ ಹಠಮಾರಿ ಧೋರಣೆಗೆ ಹೆಚ್ಚಿದ ಅಪಘಾತದ ಭೀತಿ: ಸಾರಿಗೆ ನಿಯಮ ಪಾಲಿಸುವಂತೆ ಮುಸ್ಲಿಂ ಯೂತ್ ಲೀಗ್ ಟೌನ್ ಕಮಿಟಿಯಿಂದ ಕಡಕ್ ಎಚ್ಚರಿಕೆ

ಮಂಜೇಶ್ವರ: ಕುಂಜತ್ತೂರು ಜಂಕ್ಷನ್‌ನಲ್ಲಿ ತಲಪಾಡಿ ಕಡೆಗೆ ಹೋಗುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ನಿಗದಿಪಡಿಸಿದ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ, ಅಂಡರ್‌ಪಾಸ್ ಬಳಿಯೇ ನಿಲ್ಲಿಸುತ್ತಿರುವುದರಿಂದ ಅಪಘಾತಗಳು ನಿತ್ಯ ದರ್ಶನವಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾದ ನಂತರ ಅಂಡರ್‌ಪಾಸ್ ಬಳಿ ಬಸ್‌ಗಳನ್ನು ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದು ಇತರ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ದೊಡ್ಡ ಪ್ರಾಣಭೀತಿಯನ್ನು ತಂದೊಡ್ಡಿದೆ. ​ಈ ಬಗ್ಗೆ ಸಾರ್ವಜನಿಕರು ಮತ್ತು ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳನ್ನು ಹಾಗೂ ಪೊಲೀಸರನ್ನು ಸಂಪರ್ಕಿಸಿದರೂ ಯಾರೂ ಇತ್ತಕಡೆ ತಿರುಗಿಯೂ ನೋಡಿಲ್ಲವೆಂಬ ಆರೋಪವಿದೆ. ​ಈ…

Read More

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳಿಗೆ ಅವಕಾಶ: ಬ್ಯಾರಿಸ್ ಸೆಂಟ್ರಲ್ ಕಮಿಟಿ ಸ್ವಾಗತ

ಬೆಂಗಳೂರು:ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಸ್ವಾಗತಿಸುತ್ತದೆ ಎಂದು ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಸೇರಿದಂತೆ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಶಿಸ್ತು, ಸುರಕ್ಷತೆ ಮತ್ತು ಗುರುತಿಸುವಿಕೆಗೆ ಅಡ್ಡಿಯಾಗದ ರೀತಿಯಲ್ಲಿ ಧರಿಸಲು ಅವಕಾಶ…

Read More

ಮೇ 26ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯ ನಿರೀಕ್ಷೆ

ತಿರುವನಂತಪುರಂ: ಈ ಬಾರಿ ಕೇರಳಕ್ಕೆ ಮೇ 26ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು, ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಆಗಮಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ ಹಾಗೂ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳಲಿದ್ದು, ಮೇ 24ರೊಳಗೆ ಕೇರಳ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮುಂಗಾರು ಉತ್ತರದತ್ತ…

Read More

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶಮಾಧ್ಯಮ, ಚಿತ್ರರಂಗ ಹಾಗೂ ಡಿಸೈನ್ ಕ್ಷೇತ್ರದಲ್ಲಿ ವೃತ್ತಿಜೀವನಕ್ಕೆ ಅವಕಾಶ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ (ಆನರ್ಸ್) ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಚಿತ್ರರಂಗ, ಪತ್ರಿಕೋದ್ಯಮ, ಜಾಹೀರಾತು ಹಾಗೂ ಡಿಸೈನ್ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಸ್ಥೆ ಅತ್ಯಾಧುನಿಕ ತರಬೇತಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಭಾರತದಲ್ಲೇ ಏಕೈಕ Godox ಪ್ರಮಾಣಿತ ಸಂಸ್ಥೆ ಎಂಬ ಹೆಗ್ಗಳಿಕೆಗೆ…

Read More

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಫೋಟೋಗ್ರಫಿ–ಫಿಲ್ಮ್‌ಮೇಕಿಂಗ್ ಕೋರ್ಸ್‌ಗೆ ಪ್ರವೇಶ ಆರಂಭಆಧುನಿಕ ಸ್ಟುಡಿಯೋ ಹಾಗೂ ಕೈಗಾರಿಕಾ ಸಂಪರ್ಕ ಸೌಲಭ್ಯ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಎಂ.ಎ. ಇನ್ ಫೋಟೋಗ್ರಫಿ ಮತ್ತು ಫಿಲ್ಮ್‌ಮೇಕಿಂಗ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಮಾಧ್ಯಮ ಹಾಗೂ ದೃಶ್ಯ ಸಂವಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ಸಂಸ್ಥೆಯಲ್ಲಿ ಅತ್ಯಾಧುನಿಕ ಮಲ್ಟಿ-ಕ್ಯಾಮೆರಾ ಟೆಲಿವಿಷನ್ ಸ್ಟುಡಿಯೋ, ಐಮ್ಯಾಕ್ ಎಡಿಟಿಂಗ್ ಸ್ಟುಡಿಯೋ, ಆಡಿಯೋ–ವೀಡಿಯೋ ಎಡಿಟಿಂಗ್, ಗ್ರಾಫಿಕ್ ಹಾಗೂ ವೆಬ್ ಡಿಸೈನಿಂಗ್ ಸೌಲಭ್ಯಗಳಿವೆ. 2024 ಮತ್ತು 2025ರಲ್ಲಿ ಪ್ರಶಸ್ತಿ…

Read More

ನರಹರಿ–ಕೃಷ್ಣಕೋಡಿ ಸಂಪರ್ಕ ಕಡಿತ: 150ಕ್ಕೂ ಹೆಚ್ಚು ಕುಟುಂಬಗಳಿಗೆ ತೊಂದರೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಬಂದ್ ಆಗಿರುವ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಮಾಡುವಂತೆ ಹಾಗೂ ಕೆಡವಿ ಹಾಕಲಾದ ಬಸ್ ನಿಲ್ದಾಣವನ್ನು ಮರುಸ್ಥಾಪಿಸಿಕೊಡುವಂತೆ ನರಹರಿ ಭಾಗದ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.ಬಿಸಿರೋಡು- ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ 75 ರ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣದ ವೇಳೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಗ್ರಾ.ಪಂ‌.ವ್ಯಾಪ್ತಿಯ ನರಹರಿ ನಗರ ಮತ್ತು ಕೃಷ್ಣಕೋಡಿ ಎಂಬಲ್ಲಿ ಒಟ್ಟು ಮೂರು ರಸ್ತೆಗಳ ಸಂಪರ್ಕವನ್ನು ಕಡಿದು ಹಾಕಲಾಗಿತ್ತು. ಹಾಗಾಗಿ ಕಳೆದ ಮೂರು ವರ್ಷಗಳಿಂದ ಈ ಭಾಗದ ಸಾರ್ವಜನಿಕರು ಸಂಚರಿಸಲು…

Read More

ಇರಾನ್ ಮೇಲೆ ಪರಮಾಣು ದಾಳಿ ವಿಚಾರಣೆ? ಟ್ರಂಪ್ ಪ್ರಶ್ನೆ ಬಹಿರಂಗ!

ವಾಷಿಂಗ್ಟನ್: ಇರಾನ್ ವಿರುದ್ಧ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಬಳಸುವ ಸಾಧ್ಯತೆಯಿದೆ ಕುರಿತು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಜನರಲ್ ಡಾನ್ ಕೆನ್ ಅವರನ್ನು ಪ್ರಶ್ನಿಸಿದ್ದರು ಎಂಬ ಸಾರ್ವಜನಿಕ ಮಾಹಿತಿ ಬಹಿರಂಗವಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದು, ಇರಾನ್ ವಿರುದ್ಧದ ಯುದ್ಧದ ಸಂದರ್ಭದಲ್ಲಿ ಟ್ರಂಪ್ ಪರಮಾಣು ಬಳಕೆಯ ಶಸ್ತ್ರಾಸ್ತ್ರ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು….

Read More
error: Content is protected !!