ಉಡುಪಿ ಶ್ರೀ ಕೃಷ್ಣಮಠದಲ್ಲಿ ಅನ್ನದಾನಕ್ಕೆ ಯಾವುದೇ ಸಮಸ್ಯೆ ಇಲ್ಲ : ಅಡುಗೆ ಅನಿಲ ಮುಗಿದರೂ ಕಟ್ಟಿಗೆ ಒಲೆಯಲ್ಲಿ ಭೋಜನ ವ್ಯವಸ್ಥೆ ಸಿದ್ಧ !
ಉಡುಪಿ:ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ. ಪ್ರತಿ ದಿನ ಸಾವಿರಾರು ಭಕ್ತರು ಭೋಜನ ಸ್ವೀಕರಿಸುವ ಉಡುಪಿ ಶ್ರೀ ಕೃಷ್ಣಮಠವನ್ನು “ಅನ್ನ ಬ್ರಹ್ಮನ ದೇಗುಲ” ಎಂದೇ ಕರೆಯಲಾಗುತ್ತದೆ. ಇಲ್ಲಿ ಪರಂಪರೆಯಿಂದ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವ ಪದ್ಧತಿ ಇದ್ದರೂ, ಇತ್ತೀಚಿನ ವರ್ಷಗಳಲ್ಲಿ ಅಡುಗೆ ಕಾರ್ಯಕ್ಕೆ ಅನಿಲದ ಅವಲಂಬನೆಯೂ ಹೆಚ್ಚಾಗಿದೆ.ಸದ್ಯ ಅಡುಗೆ ಅನಿಲ ಲಭ್ಯವಿದ್ದು, ಯಾವುದೇ ತೊಂದರೆ ಇಲ್ಲ….