Avatar

NAMMA MEDIA 24X7

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ: ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಉಳ್ಳಾಲ–ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯ ಬಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯ ನಿಯಮ 377ರಡಿ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ, ಅಂದರೆ ಶೇ.48.40ರಷ್ಟು ಭಾಗ ಕಡಲ್ಕೊರೆತಕ್ಕೆ ಒಳಗಾಗುತ್ತಿದೆ ಎಂದು ತಿಳಿಸಿದ್ದಾರೆ. ಇದು ಕರ್ನಾಟಕ ರಾಜ್ಯದ ಸರಾಸರಿ ಶೇ.24 ಮತ್ತು ರಾಷ್ಟ್ರೀಯ ಸರಾಸರಿ ಶೇ.33.6ಕ್ಕಿಂತಲೂ ಹೆಚ್ಚು ಎನ್ನುವುದನ್ನು…

Read More

ಸೇಡಿಯಾಪು ಜಾಗದಲ್ಲೇ 300 ಹಾಸಿಗೆಗಳ ನೂತನ ಆಸ್ಪತ್ರೆ: ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ಯೋಜನೆಯ ಭಾಗವಾಗಿ ಸೇಡಿಯಾಪು ಪ್ರದೇಶದಲ್ಲಿಯೇ 300 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ನಾಯಕರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದರು. ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಡಿಯಾಪುವಿನಲ್ಲಿರುವ 40 ಎಕರೆ ಜಾಗದಲ್ಲಿ ಮೆಡಿಕಲ್ ಕಾಲೇಜು, 300 ಹಾಸಿಗೆಗಳ ಆಸ್ಪತ್ರೆ ಹಾಗೂ ಆಯುರ್ವೇದ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದರು. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಒಂದೇ…

Read More

ತುಳು ಮಕ್ಕಳ ಗೀತೆ, ಕಥೆಗಳಿಗೆ ಆಹ್ವಾನ

ಮಂಗಳೂರು: ತುಳು ಭಾಷೆ ಹಾಗೂ ಸಂಸ್ಕೃತಿಯ ಉತ್ತೇಜನಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ತುಲುವೆರೆ ಕಲ ಟ್ರಸ್ಟ್ (ರಿ.) ಮಂಗಳೂರು ತನ್ನ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕರಿಂದ ತುಳು ಮಕ್ಕಳ ಗೀತೆ ಹಾಗೂ ಮಕ್ಕಳ ಕಥೆಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅತ್ಯುತ್ತಮ ಮೂರು ಗೀತೆ ಹಾಗೂ ಮೂರು ಕತೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ ಮೇ ತಿಂಗಳಲ್ಲಿ ನಡೆಯುವ ಟ್ರಸ್ಟ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿಜೇತರನ್ನು ಗೌರವಿಸಲಾಗುತ್ತದೆ. ಆಯ್ಕೆಯಾದ ಬರಹಗಳನ್ನು ನಂತರ ಪುಸ್ತಕ ರೂಪದಲ್ಲಿಯೂ ಪ್ರಕಟಿಸಲಾಗುವುದು ಎಂದು ಟ್ರಸ್ಟ್ ಪ್ರಕಟಣೆಯಲ್ಲಿ…

Read More

ಬಂಟ್ವಾಳದಲ್ಲಿ ಮನೆಯಲ್ಲೇ ಮಾದಕ ವಸ್ತು ಮಾರಾಟ: 17.97 ಗ್ರಾಂ MDMA ವಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮನೆಯಲ್ಲೇ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳದ ನೇರಳಕಟ್ಟೆ ಇಂದಿರಾ ನಗರದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂ.ಎ (MDMA) ಅನ್ನು ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು. ಈ ಮಾಹಿತಿ ಆಧರಿಸಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್…

Read More

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್…

Read More

ಎ.ಜೆ.ಐ. ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಪ್ರೇರಣಾ ತರಗತಿ

ಬಂದ್ಯೋಡ್:10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಎ.ಜೆ.ಐ. ಇಂಗ್ಲಿಷ್ ಶಾಲೆಯಲ್ಲಿ ಪ್ರೇರಣಾ ತರಗತಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ವ್ಯವಸ್ಥಾಪಕ ಅಬ್ದುಲ್ ಖಾದರ್ ಪಾರಾ ಉದ್ಘಾಟಿಸಿದರು. ಜನರಲ್ ಸೆಕ್ರಟರಿ ಅಬ್ದುಲ್ಲ ಮಾಳಿಕ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಮೊಹಮ್ಮದ್ ಪುಳಿಯಿಂಟಡಿ ಮತ್ತು ಉಪಾಧ್ಯಕ್ಷ ಉಸ್ಮಾನ್ ಹಾಜಿ ಕುಕ್ಕಾರ್ ಮಾತನಾಡಿದರು. ಶಾಲೆಯ ಪ್ರಿನ್ಸಿಪಲ್ ವೀಣಾ ಕುಮಾರಿ ಸ್ವಾಗತ ಭಾಷಣ ಮಾಡಿದರು. ಆಡಳಿತಾಧಿಕಾರಿ ಅಬ್ದುಲ್ಲ ಮೌಲವಿ ಶುಭಾಶಯಗಳನ್ನು ತಿಳಿಸಿದರು. ಹಮೀದ್ ಕೋಸ್ಮೋಸ್, ಹಮೀದ್ ನೀಲಕಮಲ್ ಮತ್ತು…

Read More

ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಚಾಲನೆ ….!

ಮಂಗಳೂರು – ತಿರುನಲ್ವೇಲಿ ಎಕ್ಸ್‌ಪ್ರೆಸ್ (16707/16708): ತಿರುನಲ್ವೇಲಿಯಿಂದ ಬುಧವಾರ ಅಪರಾಹ್ನ 3.45ಕ್ಕೆ ಹೊರಟು ಸಂಜೆ 5.55ಕ್ಕೆ ಮಧುರೈ ತಲುಪಲಿದೆ. ಗುರುವಾರ ಬೆಳಗ್ಗೆ 6.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಗುರುವಾರ ಅಪರಾಹ್ನ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಸಂಜೆ 4.30ಕ್ಕೆ ಮಧುರೈ ತಲುಪಲಿದೆ. ಶುಕ್ರವಾರ ಬೆಳಗ್ಗೆ 7.45ಕ್ಕೆ ತಿರುನಲ್ವೇಲಿ ತಲುಪಲಿದೆ. ತಿರುನಲ್ವೇಲಿ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ತಿರುನಲ್ವೇಲಿ ಮತ್ತು ಕರಾವಳಿ ಕರ್ನಾಟಕದ ನಡುವೆ ಕೇರಳದ ಪ್ರಮುಖ ಜಿಲ್ಲೆಗಳ ಮೂಲಕ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ. ಇದು ಕೋವಿಲ್‌ಪಟ್ಟಿ, ಸತ್ತೂರು,…

Read More

ಪೈವಳಿಕೆ–ಲಾಲ್ ಬಾಗ್–ಚಿಪ್ಪಾರ್–ಕುರುಡಪದವು ರಸ್ತೆ ಕಾಮಗಾರಿ ವಿಳಂಬ: ಬಿಜೆಪಿಪ್ರತಿಭಟನೆಗೆಸಿದ್ದ, ಎಂಎಲ್ಅಶ್ವಿನಿ

ಪೈವಳಿಕೆ: ಪೈವಳಿಕೆ–ಲಾಲ್ ಬಾಗ್–ಚಿಪ್ಪಾರ್–ಕುರುಡಪದವು ಸಂಪರ್ಕಿಸುವ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ವಾಹನ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಸುಮಾರು ಮೂರು ವರ್ಷಗಳ ಹಿಂದೆ ಈ ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದರೂ ಬಳಿಕ ಬಂಡವಾಳ ಕೊರತೆ ಕಾರಣ ನೀಡಿ ಪುನಃ ಟೆಂಡರ್ ಪಾಸ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ…

Read More

ಎಂ ಎ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದ ದೀಕ್ಷಾ.ಟಿ …. !

ಮಂಗಳೂರು: ಪ್ರಸ್ತುತ 2023-2025 ನೇ ಸಾಲಿನ ಎಂ ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಟಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಇವರು ತಚ್ಚಮ್ಮೆ ಮನೆ,ಪೆರುವಾಯಿ ಗ್ರಾಮದವರಾಗಿದ್ದು ಶ್ರೀ ರಾಜೇಶ್ ಮಣಿಯಾಣಿ ಮತ್ತು ಶ್ರೀಮತಿ ಸುಮಿತ್ರ ದಂಪತಿಗಳ ಪುತ್ರಿಯಾಗಿದ್ದಾರೆ . ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿದ್ದಾರೆ .

Read More

ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ : ವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ

ಮಂಗಳೂರು: ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿಕೆಯನ್ನು ಅವರ ಪರವಾಗಿ ವೈಶ್ಯ ಎಜುಕೇಶನ್ ಸೊಸೈಟಿಯ ಸಂತೋಷ್ ಚಂದ್ರ ಹೇಳಿದರು . ನಗರದ ಪ್ರೆಸ್ ಕ್ಲಬ್ ನಲ್ಲಿ ಸರೋಜಿನಿ ಎಂ. ಕುಶೆ ಅವರ ಅಭಿಪ್ರಾಯವನ್ನು ತಿಳಿಸುತ್ತಾ , ‘ನಮ್ಮ ಜೊತೆಯಲ್ಲಿದ್ದು, ಲೆಕ್ಕಪತ್ರ ನೋಡಿಕೊಳ್ಳುತ್ತಿದ್ದ ಕೆಲ ವ್ಯಕ್ತಿಗಳು ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿ ಕಬಳಿಸುವ ದುರುದ್ದೇಶದಿಂದ ಕೃಷ್ಣದತ್ತ ಎಂಬ…

Read More
error: Content is protected !!