ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ: ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ ಬ್ರಿಜೇಶ್ ಚೌಟ
ಮಂಗಳೂರು: ಉಳ್ಳಾಲ–ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯ ಬಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯ ನಿಯಮ 377ರಡಿ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ, ಅಂದರೆ ಶೇ.48.40ರಷ್ಟು ಭಾಗ ಕಡಲ್ಕೊರೆತಕ್ಕೆ ಒಳಗಾಗುತ್ತಿದೆ ಎಂದು ತಿಳಿಸಿದ್ದಾರೆ. ಇದು ಕರ್ನಾಟಕ ರಾಜ್ಯದ ಸರಾಸರಿ ಶೇ.24 ಮತ್ತು ರಾಷ್ಟ್ರೀಯ ಸರಾಸರಿ ಶೇ.33.6ಕ್ಕಿಂತಲೂ ಹೆಚ್ಚು ಎನ್ನುವುದನ್ನು…