ಬೆದ್ರಂಪಳ್ಳ ಬನ ಪಾಟ್ಲದಳ ರಸ್ತೆ ಅಭಿವೃದ್ಧಿಯಲ್ಲಿ ಕಳಪೆ ಕಾಮಗಾರಿ : ನಾಗರಿಕರಿಂದ ತಡೆ
ಪೆರ್ಲ : ಎಣ್ಮಕಜೆ ಪಂಚಾಯತಿನ 16ನೇ ವಾರ್ಡಿನ ಬೆದ್ರಂಪಳ್ಳ ಬನ -ಬಲ್ತಕಲ್ಲು- ಪಾಟ್ಲದಳ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು ಗುತ್ತಿಗೆದಾರನ ಅವ್ಯವಹಾರ ಆರೋಪಿಸಿ ನಾಗರಿಕರು ಕಾಮಗಾರಿಗೆ ತಡೆಯೊಡ್ಡಿದರು. ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ 2023-24 ರರಾಜ್ಯ ಸರಕಾರದ ಬಜೆಟ್ ನಲ್ಲಿ ಸುಮಾರು 70 ಲಕ್ಷ ರೂ ಯೋಜನೆ ಮೀಸಲಿರಿಸಿ ಉತ್ತಮ ರಸ್ತೆ ನಿರ್ಮಾಣಕ್ಕೆ ಹಸೈನಾರ್ ಪೆರ್ಲ ಎಂಬವರ ಮಾಲಕತ್ವದ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲಾಗಿತ್ತು. ಇದೀಗ ಕಳಪೆ ಮಟ್ಟದ ಡಾಮರು, ಜಲ್ಲಿ ಕಲ್ಲುಗಳನ್ನು ಉಪಯೋಗಿಸಿ ಯೋಜನೆಯಲ್ಲಿ…