ತೊಕ್ಕೊಟ್ಟುವಿನ ಕಲ್ಲಾಪು ಸೇವಂತಿಗುತ್ತು ಬಳಿ ನಿರ್ಮಾಣ ಕಾರ್ಯದ ಸಮಯದಲ್ಲಿ ಗುಡ್ಡ ಕುಸಿದು ಕಾರ್ಮಿಕನೊಬ್ಬನ ದುರ್ಮರಣ… !
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟುವಿನ ಕಲ್ಲಾಪು ಸೇವಂತಿಗುತ್ತು ಬಳಿ ನಿರ್ಮಾಣ ಕಾರ್ಯದ ಸಮಯದಲ್ಲಿ ಗುಡ್ಡ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ . ಮೃತರನ್ನು ಹುನಗುಂದ ತಾಲೂಕಿನ ನಿವಾಸಿ ಬಾಳಪ್ಪ (45) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ತಿಯಲ್ಲಿ ಐವರು ಕಾರ್ಮಿಕರು ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ. ಕೆಲಸದ ಸಮಯದಲ್ಲಿ, ದಿಬ್ಬವನ್ನು ಅಗೆಯಲು ಜೆಸಿಬಿ ಬಳಸುತ್ತಿದ್ದಾಗ ಅದು ಇದ್ದಕ್ಕಿದ್ದಂತೆ ಕುಸಿದಿದೆ. ಸ್ಥಳದಲ್ಲಿ ಗಾರೆ ಹಿಡಿದು ಕೆಲಸ ನಿರ್ವಹಿಸುತ್ತಿದ್ದ ಬಾಳಪ್ಪ ದಿಡೀರ್ ಕುಸಿತಗೊಂಡ ಮಣ್ಣಿನಡಿಯಲ್ಲಿ ಹೂತುಹೋದರು. ಅವರು ತೀವ್ರವಾಗಿ…