Avatar

NAMMA MEDIA 24X7

ಜೆಎಫ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು ನಗರದ ಬಜಾಲ್ ನಂತೂರಿನ ಜೆ ಎಫ್ ಅಸೋಸಿಯೇಷನ್ ವತಿಯಿಂದ, ಯೆನೆಪೊಯ ಬ್ಲಡ್ ಬ್ಯಾಂಕ್ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ಸಹಯೋಗದೊಂದಿಗೆ ಭಾನುವಾರ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಸಂಸ್ಥೆಯ ಅಧ್ಯಕ್ಷ ನಝೀರ್ ಬಜಾಲ್ ಅವರ ನೇತೃತ್ವದಲ್ಲಿ ನಡೆದ ಶಿಬಿರವನ್ನು ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಅಬ್ದುಲ್ ರವೂಫ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, “ರಕ್ತದಾನವು ಆರೋಗ್ಯವಂತ ವ್ಯಕ್ತಿಯ ಸಾಮಾಜಿಕ ಕರ್ತವ್ಯ. ರಕ್ತದಾನದಿಂದ ರೋಗಿಗಳು ಹಾಗೂ ಅಪಘಾತದಲ್ಲಿ ಗಾಯಗೊಂಡವರ…

Read More

ಕೇರಳ ಸಿಎಂ ಆಯ್ಕೆ ಕುತೂಹಲ: ಯುಡಿಎಫ್ ಭರ್ಜರಿ ಗೆಲುವಿನ ಬಳಿಕವೂ ಕಾಂಗ್ರೆಸ್‌ನಲ್ಲಿ ಮುಂದುವರಿದ ಸಸ್ಪೆನ್ಸ್

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಯುಡಿಎಫ್ ಅಧಿಕಾರಕ್ಕೇರಿದರೂ, ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತ ಕಾಂಗ್ರೆಸ್‌ನ ಅಂತಿಮ ನಿರ್ಧಾರ ಇನ್ನೂ ಪ್ರಕಟವಾಗದೆ ರಾಜಕೀಯ ವಲಯದಲ್ಲಿ ಕುತೂಹಲ ಮುಂದುವರಿದಿದೆ. ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಸಿಎಂ ಘೋಷಣೆಯಲ್ಲಿ ಆಗುತ್ತಿರುವ ವಿಳಂಬ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಿಎಂ…

Read More

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು, ಮೇ 9: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ….

Read More

ಸಂತಡ್ಕ ಮಾಡದಲ್ಲಿ ಜೂನ್ 7ರಂದು ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವ

ಶ್ರೀ ಅರಸು ಸಕಲ ದೈವ ಕ್ಷೇತ್ರ ಸಂತಡ್ಕ ಮಾಡದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಭಕ್ತರ ಅಭೀಷ್ಟಾರ್ಥ ಸಿದ್ಧಿಗಾಗಿ ಹಾಗು ಭೋಜನ ಶಾಲೆಯ ಉದ್ಘಾಟನೆಯ ಅಂಗವಾಗಿ ಜೂನ್ 7ರಂದು ಅತೀ ಮಹತ್ವದ ರುದ್ರಯಾಗ ಹಾಗೂ ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ.ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಡಾ. ಶ್ರೀಧರ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ಷೇತ್ರ ತಂತ್ರಿವರ್ಯರಾದ…

Read More

ತಮಿಳುನಾಡಿನ ಮುಖ್ಯಮಂತ್ರಿ ಆಗಿ ವಿಜಯ್ ಪ್ರಮಾಣವಚನ; ಡಿಎಂಕೆ-ಎಐಎಡಿಎಂಕೆ ರಾಜಕೀಯಕ್ಕೆ ಹೊಸ ಸವಾಲು

ಸಿ. ಜೋಸೆಫ್ ವಿಜಯ್ ಅವರು ಭಾನುವಾರ ತಮಿಳುನಾಡಿನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದರು. ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್‌ಲೆಕರ್ ಅವರು ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. “ತಳಪತಿ” ಎಂದೇ ಅಭಿಮಾನಿಗಳಿಂದ ಕರೆಯಲ್ಪಡುವ ವಿಜಯ್ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಸಂಭ್ರಮಿಸಿದರು. ಕೆಲ ಅಭಿಮಾನಿಗಳು ಭಾವುಕರಾಗಿ ಕಣ್ಣೀರಿಟ್ಟ ದೃಶ್ಯಗಳೂ ಕಂಡುಬಂದವು. ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಪ್ಪು…

Read More

ಕೇರಳದಲ್ಲೇ ವಿಶಿಷ್ಟ ಸಂಪ್ರದಾಯಕ್ಕೆ ಸಾಕ್ಷಿಯಾದ ಕಾಸರಗೋಡಿನ ಬಾರಿಕ್ಕಾಡು ಮಹಿಷಮರ್ಧಿನಿ ಕ್ಷೇತ್ರದಲ್ಲಿ ವಾರ್ಷಿಕ ಪಂಚಮೂರ್ತಿ ಭೂತಬಲಿ

ಕಾಸರಗೋಡು: ದೇವರ ಸ್ವಂತ ನಾಡು ಕೇರಳದಲ್ಲಿ ಧಾರ್ಮಿಕ ಮೌಲ್ಯಗಳ ಆಚಾರ ವಿಚಾರಗಳಿಗೆ ಅದರದ್ದೇ ಆದ ಮಹತ್ವವಿದೆ. ತಲತಲಾಂತರದಿಂದ ಬಳುವಳಿಯಾಗಿ ಬಂದ ಸಂಪ್ರದಾಯವನ್ನು ಇಂದಿಗೂ ಉಳಿಸಿಕೊಂಡು ಹೋಗುತ್ತಾ ಇದ್ದಾರೆ. ಕೇರಳ ಎಂದಾಕ್ಷಣ ನೆನಪಿಗೆ ಬರುವುದು ಹಸಿರ ಐಸಿರಿಯ ನಡುವೆ ದೇವಾಲಯದ ಭವ್ಯತೆ – ಅದರ ಘನತೆಯನ್ನು ಸಾರುವ ಕೆಲವು ಅಪರೂಪದ ಆಚರಣೆ . ಕೇರಳಂ ರಾಜ್ಯದ ಮತ್ಯಾವುದೇ ಕ್ಷೇತ್ರದಲ್ಲಿ ಕಾಣ ಸಿಗದ ಪಂಚದೇವರ ಉತ್ಸವ ಮೂರ್ತಿಗಳ ಭೂತ ಬಲಿಯು ಈ ಸನ್ನಿಧಿಯಲ್ಲಿ ಮಾತ್ರವೇ ನೋಡಬಹುದಾಗಿದೆ . ತಾಳ ಮೇಳಗಳ…

Read More

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಡಿ. ಸುಧಾಕರ್ ನಿಧನ

ಬೆಂಗಳೂರು : ಕರ್ನಾಟಕ ಸರ್ಕಾರದ ಯೋಜನೆ ಮತ್ತು ಅಂಕಿಅಂಶ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಇಂದು ಮುಂಜಾನೆ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು ಮತ್ತು ಕಳೆದ ಎರಡು ತಿಂಗಳಿನಿಂದ ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಅವರ ಸಾವು ರಾಜ್ಯದ ರಾಜಕೀಯ ವಲಯದಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದೆ. ಬೆಂಗಳೂರಿನ ಕೃಷ್ಣ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ ಪ್ರಕಾರ, ಸಚಿವ ಸುಧಾಕರ್ ಭಾನುವಾರ ಬೆಳಗಿನ ಜಾವ 3:15 ಕ್ಕೆ…

Read More

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಎಸ್.ಎನ್. ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ವೃಷಭ ಹಾಗೂ ಕಾನ್ಸ್ಟೇಬಲ್ ಚರಣ್ ರಾಜ್ ಅವರು ಮೈಸೂರು ಜಿಲ್ಲೆಯ ಸರಗೂರು ಸಮೀಪದ ಹೆಚ್.ಡಿ.ಕೋಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಉಪ್ಪಿನಂಗಡಿಯಲ್ಲಿ ಭೀಕರ ದುರಂತ; ರೋಡ್ ರೋಲರ್ ಹರಿದು ಕಾರ್ಮಿಕ ಸಾವು

ಉಪ್ಪಿನಂಗಡಿ ಸಮೀಪದ ಗಾಂಧಿಪಾರ್ಕ್ ಬಳಿ ರಸ್ತೆ ಕಾಮಗಾರಿಯ ವೇಳೆ ರೋಡ್ ರೋಲರ್‌ನಡಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ, ಮೃತ ವ್ಯಕ್ತಿ ರಸ್ತೆ ಬದಿಯಲ್ಲಿ ಮಲಗಿದ್ದ ವೇಳೆ ರೋಡ್ ರೋಲರ್ ಆತನ ಮೇಲಿಂದ ಚಲಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಉತ್ತರ ಭಾರತದ ಮೂಲದ…

Read More

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು: ಮೇ 10ರಂದು ‘ಸಂಗೀತ ಸುಧೆ 2026’ ಕಾರ್ಯಕ್ರಮ

ಮಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ “ಡಾ. ರಾಜ್ ಸೇವಿನೆನಪು ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಸಂಗೀತ ಸುಧೆ 2026” ಕಾರ್ಯಕ್ರಮವು ಮೇ 10ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಡಾ ರಾಜ್ ಕುಮಾರ್ ಅಭಿಮಾನಿಗಳ ವೇದಿಕೆಯ ಅಧ್ಯಕ್ಷರು ನಾಗೇಂದ್ರ ಎನ್ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. “ಆಮಂತ್ರಣ ಪತ್ರಿಕೆ” ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದ್ದು, ಕನ್ನಡಾಭಿಮಾನಿಗಳಿಗಾಗಿ ವಿಶೇಷ ಸಂಗೀತ ರಸಮಂಜಲಿ ಆಯೋಜಿಸಲಾಗಿದೆ….

Read More
error: Content is protected !!