Avatar

NAMMA MEDIA 24X7

ಎಂಸಿಎಫ್‌ ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣಕ್ಕೆ ನಿವೃತ್ತ ನೌಕರರ ಆಕ್ರೋಶ .. !

ಮಂಗಳೂರು:ಪಣಂಬೂರು ಬಳಿಯ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ (ಎಂಸಿಎಫ್‌ ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಗಿದೆ. ಇದಕ್ಕೆ ಅವಕಾಶ ನೀಡದೆ ಅದನ್ನು ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ ಎಂದೇ ಮುಂದುವರಿಸಬೇಕು ಎಂದು ಎಂಸಿಎಫ್‌ ಸಂಸ್ಥೆಯ ನಿವೃತ್ತ ಸದಸ್ಯರು , ಸಮಿತಿಯ ಸದಸ್ಯರಾದ ಮ್ಯಾಕ್ಸಿಮ್ ಅಬ್ರೆಡ್ ಡಿಸೋಜಾ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 1971ರಲ್ಲಿ ರಾಜಯ ಸರಕಾರ, ರಾಜ್ಯದ ಹೂಡಿಕೆದಾರರು ಮತ್ತು ರೈತರ ಪಾಲುದಾರಿಕೆಯೊಂದಿಗೆ ಸ್ಥಾಪನೆಯಾದ…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಎರಡನೇ ವಾರ್ಡ್‌ನಲ್ಲಿ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಭರ್ಜರಿ ಗೆಲುವು

ಮಂಜೇಶ್ವರ:  ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಸಮಾಜ ಸೇವಕ ಹಾಗೂ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಅವರು ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಿದ್ದಾರೆ. ಚುನಾವಣಾ ಅವಧಿಯಲ್ಲಿ ಎದುರಾಳಿಗಳಿಂದ ನಡೆದ ಅಪಪ್ರಚಾರಗಳನ್ನೆಲ್ಲಾ ಜನತೆಯ ಸ್ಪಷ್ಟ ತೀರ್ಪಿನ ಮೂಲಕ ಮಣಿಸಿ ಅವರು ಗಮನಾರ್ಹ ಗೆಲುವು ದಾಖಲಿಸಿದ್ದಾರೆ.ಗೆಲುವಿನ ನಂತರ ಮಾತನಾಡಿದ ಇಲ್ಯಾಸ್ ತೂಮಿನಾಡು ಅವರು, “ಇದು ನನ್ನ ವೈಯಕ್ತಿಕ ಗೆಲುವಲ್ಲ. ಇದು ನನ್ನ ಗ್ರಾಮದ ಜನತೆಯ ಗೆಲುವು. ನನ್ನ ಮೇಲೆ ನಂಬಿಕೆ ಇಟ್ಟು ಮತ…

Read More

“ಧರ್ಮಾವಲೋಕನ ಸಭೆ”ಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ದೋಣಿಂಜೆಗುತ್ತು ಗಡಿ ಪ್ರಧಾನರಾದ ಪ್ರಮೋದ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಯತಿವರ್ಯರ ಮತ್ತು ತಂತ್ರಿವರ್ಯರ ಅನುಗ್ರಹ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಅರಮನೆ, ಬೀಡುಗಳ ಅರಸರು ಹಾಗೂ ಗುತ್ತು ಮನೆತನದ ಗಡಿಕಾರರು ಹಾಗೂ ಯಜಮಾನರುಗಳ ಸಮಕ್ಷಮದಲ್ಲಿ ವಿಶ್ವ ಹಿಂದೂ ಪರಿಷತ್, ಹಿಂದೂ ಯುವಸೇನೆ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸಹಕಾರದೊಂದಿಗೆ ಡಿ.21ರಂದು ನಡೆಯಲಿರುವ ಧರ್ಮಾವಲೋಕನ ಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಸಂಜೆ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ಬಳಿಕ ಮಾತಾಡಿದ ಪ್ರಮೋದ್…

Read More

ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಇದು ಸ್ಪರ್ಧೆ: ಚಿನ್ನದ ಪದಕ ಗೆದ್ದ ಧೃತಿ ಫೆರ್ನಾಂಡಿಸ್

ದೆಹಲಿಯಲ್ಲಿ ಇಂದಿನಿಂದ ಆರಂಭಗೊಂಡ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಈಜು ಸ್ಪರ್ಧೆಯಲ್ಲಿ ಬಾಲಕಿಯರ 19 ವಯೋಮಾನದ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ರಿಯಾನಾ ಧೃತಿ ಫರ್ನಾಂಡಿಸ್ ಇವರು 50ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ 34.84 ಸೆಕೆಂಡ್ ಸಮಯದಲ್ಲಿ ಈಜಿ ಚಿನ್ನದ ಪದಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದಾರೆ. ಇವರು ಮಂಗಳೂರಿನ ಸಂತ ಅಲೋಷಿಯಸ್ ಪದವಿ ಕಾಲೇಜಿನ ಈಜುಕೊಳದಲ್ಲಿ ವೀ ವನ್ ಅಕ್ವಾ ಸೆಂಟರ್ ನಲ್ಲಿ ಮುಖ್ಯ ತರಬೇತುದಾರ ಶ್ರೀ ಲೋಕರಾಜ್…

Read More

ರಿಷಬ್ ತೊಡೆ ಮೇಲೆ ದೈವ ನರ್ತಕ -ದೈವಾರಾಧಕರ ಆಕ್ರೋಶ, ದೈವಸ್ಥಾನದ ಅಡಳಿತ ಮಂಡಳಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ

ಮಂಗಳೂರು : ಮಂಗಳೂರಿನ ಬಾರೆಬೈಲ್ ನಲ್ಲಿರುವ ದೈವಸ್ಥಾನದಲ್ಲಿ ಮಗನ ಹುಟ್ಟು ಹಬ್ಬದ ಹಿನ್ನಲೆ ಕಳೆದ ವರ್ಷವೂ ರಿಷಬ್ ಶೆಟ್ಟಿ ಕುಟುಂಬ ನೇಮೋತ್ಸವ ಸೇವೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಿಯೂ ನಡೆಯದ ಚಮತ್ಕಾರ ಈ ಕ್ಷೇತ್ರದಲ್ಲಿ ಆಗಿದೆ ಎಂದು ರಿಷಬ್ ಹೇಳಿಕೊಂಡಿದ್ದರು. ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ದೈವದ ಅನುಮತಿ ಕೇಳಿ ಹರಕೆ ನೇಮಕ್ಕೆ ಒಪ್ಪಿಗೆ ಪಡೆಯಲಾಗಿದ್ದು, ಪಂಜುರ್ಲಿ ನೇಮ,ಜಾರಾಂದಾಯಗೆ ತುಡರ ಬಲಿ ನೀಡಲು ದೈವ ಒಪ್ಪಿಗೆ ನೀಡಿತ್ತು. ಈ ಸೇವೆ ನೆರವೇರಿದ್ದು, ದೈವಗಳು ಒಳ್ಳೆಯ ರೀತಿ ಸ್ವೀಕಾರ…

Read More

ಅವಧಿ ಮೀರಿದ ಔಷಧ ಪೂರೈಕೆ . ಕಿಡಿ ಕಾರಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು, ಸೇರಿದಂತೆ ವಿವಿಧ ಭಾಗದ…

Read More
error: Content is protected !!