ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ದಲಿಯನ ಡೋಲು’ ನಾಟಕ ಯಶಸ್ವಿ ಪ್ರದರ್ಶನ
ಬೆಂಗಳೂರು: ಸೂರ್ಯ ಕಲಾವಿದರು ಬೆಂಗಳೂರು ಆಯೋಜಿಸಿದ ‘ರಂಗಸಂಭ್ರಮ 2026’ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಸಿದ್ಧ ರಂಗಭೂಮಿ ವೇದಿಕೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ದಲಿಯನ ಡೋಲು’ ನಾಟಕ ಯಶಸ್ವಿಯಾಗಿ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಉದಯ ಸಾರಂಗ ರಚಿಸಿ ನಿರ್ದೇಶಿಸಿದ ಈ ನಾಟಕವನ್ನು ಸ್ವರ್ಗ ಭೂಮಿಕಾ ಸಂಡೇ ಥಿಯೇಟರ್ ತಂಡ ಪ್ರದರ್ಶಿಸಿತು. ಗ್ರಾಮೀಣ ರಂಗಭೂಮಿಯನ್ನು ಪೋಷಿಸುತ್ತಿರುವ ಈ ತಂಡದಲ್ಲಿ ವಿವಿಧ ವಲಯಗಳ ಪ್ರತಿಭಾನ್ವಿತ ಕಲಾವಿದರು ಒಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಇದರ ವಿಶೇಷತೆಯಾಗಿದೆ. ಜಾನಪದ ಸೊಗಡಿನ ಸಂಸ್ಕೃತಿ ಹಾಗೂ ಜಾಗತೀಕರಣದ ಮಾಯಾಲೋಕದ ನಡುವೆ…