Avatar

NAMMA MEDIA 24X7

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ ವಿವಾದ

ಮಂಗಳೂರು: ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪ್ರದರ್ಶನ ಮಾಡದಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಉಚಿತ ಪ್ರದರ್ಶನಕ್ಕಾಗಿ ಮಾಡಿದ್ದ ಬುಕ್ಕಿಂಗ್ ಪೋಸ್ಟರ್‌ನಲ್ಲಿ ಮಹಿಳೆಯರ ಮೊಬೈಲ್ ನಂಬರ್‌ಗಳನ್ನು ಪ್ರಕಟಿಸಲಾಗಿತ್ತು. ಆ ನಂಬರ್‌ಗಳಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.ಮಹಿಳೆಯರಿಗೆ ನೇರವಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಕೆಲ ಕರೆಗಳು ವಿದೇಶದಿಂದಲೇ ಬಂದಿರುವ ಶಂಕೆ ವ್ಯಕ್ತವಾಗಿದೆ.ಇದಲ್ಲದೆ ಸ್ಥಳೀಯ ಮತಾಂಧ ಶಕ್ತಿಗಳಿಂದಲೂ ಬೆದರಿಕೆ…

Read More

ರಾಜ್ಯ ಬಜೆಟ್ ನಲ್ಲಿ ಕರಾವಳಿ ಸಂಪೂರ್ಣ ಕಡೆಗಣನೆಗೆ ಶಾಸಕ ಕಾಮತ್ ಆಕ್ರೋಶ:-

ಕಳೆದ ಬಾರಿ ಬಜೆಟ್ ಮಂಡಿಸುವಾಗ “ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ” ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿನ ಎಷ್ಟು ಘೋಷಣೆಗಳನ್ನು ಕರಾವಳಿ ಭಾಗದಲ್ಲಿ ಸಾಕಾರಗೊಳಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದಾಗ ಮಾತ್ರ ಇವರ ಈಗಿನ ಬಜೆಟ್ ಗೆ ತೂಕ ಬರುತ್ತದೆ. ಇಲ್ಲದಿದ್ದರೆ ಇದು ಕೇವಲ ಬಿಳಿ ಹಾಳೆ ಅಷ್ಟೇ ಆಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಮುಖ್ಯಮಂತ್ರಿಯಾಗಿ ಇದೇ ಅವರ ಕೊನೆಯ ಬಜೆಟ್ ಎಂದು ಕಾಂಗ್ರೆಸ್ ವಲಯದಲ್ಲೇ ವ್ಯಾಪಕವಾಗಿ ಸುದ್ದಿಯಾಗುತ್ತಿದ್ದು, ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ….

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಪಂಚಮ ದಿನ

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಪಂಚಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಎಸ್ ನಾಯಕ್ ಆಂಡ್ ಅಸೋಸಿಯೇಟ್ಸ್ ನ ‘ಪಾಲುದಾರರಾದ ಶ್ರೀ ಎಸ್.ಎಸ್.ನಾಯಕ ಇವರು ಮಹಿಳೆಯೊಬ್ಬಳು ಶಿಕ್ಷಿತಳಾದರೆ ಸಮಾಜವೊಂದು ಉದ್ಧಾರವಾದಂತೆ ನಮ್ಮ ಧರ್ಮ ಪುರಾಣ ಕಾಲದಿಂದಲೂ ಸ್ತ್ರೀಯರಿಗೆ ಉನ್ನತವಾದ ಸ್ಥಾನವನ್ನು ನೀಡಿದೆ. ನಮ್ಮ ಧರ್ಮಗ್ರಂಥಗಳಾದ ಭಗವದ್ಗೀತೆ, ಹದಿನೆಂಟು ಪುರಾಣಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾದುದು ಅವುಗಳನ್ನು ಎಲ್ಲರೂ ಅಭ್ಯಸಿಸಬೇಕು ಸಾಧ್ಯವಿಲ್ಲವಾದರೆ ಅವುಗಳ ತಾತ್ಪರ್ಯದಂತೆ ಪರಪೀಡನೆ…

Read More

ಮಾರ್ಚ್ 8 ರಿಂದ 10 ರವರೆಗೆ ಮಂಗಳೂರಿನಲ್ಲಿ ಚಿನ್ಮಯ ಮಿಷನ್ ಅಮೃತ ಮಹೋತ್ಸವ

ಸ್ವಾಮಿ ಚಿನ್ಮಯಾನಂದ ಅವರ ನೇತೃತ್ವದಲ್ಲಿ, ಚಿನ್ಮಯ ಚಳುವಳಿಯು ಜಗತ್ತನ್ನು ವೇದಾಂತದ ಕಾಲಾತೀತ ಬೆಳಕಿಗೆ ಜಾಗೃತಗೊಳಿಸಿತು. ಚಿನ್ಮಯ ಅಮೃತ ಮಹೋತ್ಸವವು ಈ ನಿರಂತರ ಪರಂಪರೆಯ ಸ್ಮರಣಾರ್ಥವಾಗಿ ಆಚರಿಸುತ್ತಾ ಬಂದಿದ್ದು ಈ ವರ್ಷ ಚಿನ್ಮಯ ಮಿಷನ್ 75 ನೇ ವರ್ಷದ ಚಿನ್ಮಯ ಚಳುವಳಿಯನ್ನು ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಚಿನ್ಮಯ ಅಮೃತ ವಾಹಿನಿ ಮಾರ್ಚ್ 8 ರಿಂದ 10 ರವರೆಗೆ ಮಂಗಳೂರಿನ ಹೊಯಿಗೆ ಬಜಾರ್‌ನಲ್ಲಿರುವ ಆಶ್ರಮದಲ್ಲಿ ಚಿನ್ಮಯ ಅಮೃತ ಮಹೋತ್ಸವ ಆಚರಿಸಲಿದೆ ಎಂದು ಮಂಗಳೂರು ಚಿನ್ಮಯ ಮಿಷನ್ ನ ಪ್ರಮುಖರಾದ ಗಹನಾನಂದ…

Read More

ನಾವೂರ ಗ್ರಾಮದ ಕೂಡಿಬೈಲಿನಲ್ಲಿ 15 ನೇ ವರ್ಷದ ಬಂಟ್ವಾಳ ಕಂಬಳ: ಆಗಮಿಸಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ನಾವೂರ ಗ್ರಾಮದ ಕೂಡಿಬೈಲಿನಲ್ಲಿ ನಡೆಯುವ 15 ನೇ ವರ್ಷದ ಬಂಟ್ವಾಳ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಾವೂರದ ಕಂಬಳದ ವೇದಿಕೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿ.ಎಂ.ಸಿದ್ದರಾಮಯ್ಯ ಅವರು ಮಂಗಳೂರಿಗೆ ಸಂಜೆ ಆಗಮಿಸಿ ಅಲ್ಲಿಂದ ನೇರವಾಗಿ ನಾವೂರದ ಕಂಬಳ ಕೂಟಕ್ಕೆ ಆಗಮಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಲಿದ್ದಾರೆ.ಬಳಿಕ 8.30 ಗಂಟೆಗೆ ಮತ್ತೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ.ಇದು ನಮ್ಮ-…

Read More

“ಟೆಕ್ ಯುವ” ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ಮಾರ್ಚ್ 9 ಹಾಗೂ 10 ರಂದು

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಯು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಉದ್ದೇಶದಿಂದ “ಟೆಕ್ ಯುವ” ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ಮಾರ್ಚ್ 9 ಹಾಗೂ 10 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್.ಹೆಗ್ಡೆ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು…

Read More

ಮಾನವೀಯತೆ ಮೆರೆದ ಮಂಜೇಶ್ವರದ ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳು: ವೆನ್ಲಾಕ್ ಆಸ್ಪತ್ರೆ ರೋಗಿಗಳಿಗೆ ಸಾಂತ್ವನ

ಮಂಜೇಶ್ವರ: ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವ ಇಲ್ಲಿನ ಪೀಸ್ ಕ್ರಿಯೇಟಿವ್ ಶಾಲೆಯ ವಿದ್ಯಾರ್ಥಿಗಳು ಗುರುವಾರದಂದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ​ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕೇವಲ ಭೇಟಿ ನೀಡುವಿಕೆಗೆ ಸೀಮಿತವಾಗದೆ, ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಅವರ ಮೊಗದಲ್ಲಿ ಮಂದಹಾಸ ಮೂಡಿಸುವ ಮೂಲಕ ಈ ಪುಟಾಣಿಗಳು ಸಮಾಜಕ್ಕೆ ಮಾದರಿಯಾದರು. ಆಸ್ಪತ್ರೆಯ…

Read More

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇದ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಘೋಷಣೆ

ಕರ್ನಾಟಕ ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸರಕಾರ ಕೖಗೊಂಡಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಷ್ಯಲ್ ಮೀಡಿಯಾ ಬಳಕೆಯ ಡಿಜಿಟಲ್ ಚಟದ ವ್ಯಸನದಿಂದ ಮಕ್ಕಳ ಮಾನಸಿಕಾರೋಗ್ಯ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರವಾದ ಪರಿಣಾಮಗಳಾಗುತ್ತಿರುವ ವೖದ್ಯಕೀಯ ವರದಿಗಳ. ಆಧಾರದಲ್ಲಿ, ದುಷ್ಪರಿಣಾಮ ತಡೆಗೆ ಈ ಕ್ರಮವನ್ನು ಜ್ಯಾರಿಗೆ ತರಲಾಗುತ್ತದೆಯೆಂದು ಮುಖ್ಯಮಂತ್ರಿಗಳು 2026-27ನೇ ಸಾಲಿನ ಬಜೆಟ್ ಮಂಡನೆ ಸಂದರ್ಭ ಘೋಷಣೆ ಮಾಡಿದರು. ಸಾಮಾಜಿಕ ಜಾಲತಾಣ ಬಳಕೆಯಿಂದಾಗುವ ದುಷ್ಪರಿಣಾಮಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮತ್ತು ಮಕ್ಕಳ…

Read More

ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ಸಿಬ್ಬಂದಿಯ ಸಾಹಸ

ಉಡುಪಿ: ಮನೆಯ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾ ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಉಡುಪಿ ನಗರದ ಸಗ್ರಿ ನಿವಾಸಿ ಜಯಕರ ನಾಯ್ಕ್ (59) ಅವರು ಮನೆಯ ಬಾವಿಯಲ್ಲಿ ಸಿಲುಕಿಕೊಂಡಿದ್ದರು. ಅಪಾರ ಮದ್ಯಪಾನದ ಚಟ ಹೊಂದಿರುವ ಜಯಕರ ನಾಯ್ಕ್ ಅವರು ಕಾಲುಜಾರಿ ಬಾವಿಗೆ ಬಿದ್ದಿರಬಹುದೆಂದು ಅಥವಾ ತಾವೇ ಹಾರಿರುವ ಸಾಧ್ಯತೆಯೂ ಇರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಅರ್ಧ ಗಂಟೆ…

Read More

ಉಳ್ಳಾಲದಲ್ಲಿ ಅರಣ್ಯಾಧಿಕಾರಿಯ ಮನೆಗೆ ಕಳ್ಳತನ: ನಗದು, ಚಿನ್ನ ಸೇರಿದಂತೆ ಬೈಕ್ ದೋಚಿದ ಕಳ್ಳರು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಿಕಾರೋಡ್‌ನ ಕಾಪಿಕಾಡು ಪ್ರದೇಶದಲ್ಲಿರುವ ಅರಣ್ಯಾಧಿಕಾರಿಯೊಬ್ಬರ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು, ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಒಟ್ಟು ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋಟೆಕಾರು ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ (35) ಅವರು ವಾಸವಿದ್ದ ಅಂಬಿಕಾರೋಡ್, ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಈ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೆಹಬೂಬ್ ಸಾಬ್ ಅವರು…

Read More
error: Content is protected !!