ಸುಖಾಂತ್ಯ ಕಂಡ ಐಕಳ ಮತ್ತು ಕನ್ಯಾನರ ಮನಸ್ತಾಪಗಳು
ಮುಂಬೈ: *ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರು ಮನ ನೊಂದು ಇನ್ನು ಮುಂದೆ ಸಮಾಜ ಸೇವೆಗೆ ತನ್ನ ಯಾವುದೇ ಕೊಡುಗೆ ಇಲ್ಲವೆಂದು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕವಾಗಿ ಪರ ವಿರೋಧ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಮಾಜಿ ಸಂಸದರಾದ ಗೋಪಾಲ್ ಶೆಟ್ಟಿ, ಬರೋಡ ಶಶಿಧರ ಶೆಟ್ಟಿ, ಮಹೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ , ಪಟ್ಲ ಸತೀಶ್ ಶೆಟ್ಟಿ, ಕೆ. ಕೆ. ಶೆಟ್ಟಿ ಅಹ್ಮದ್ ನಗರ, ಅಶೋಕ್ ಶೆಟ್ಟಿ ಬೆಳ್ಳಾಡಿ,…
ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ಕ್ರಿಸ್ಮಸ್ ಸಂಭ್ರಮಾಚರಣೆ ಮತ್ತು ಕ್ಯಾರಲ್ ಸಂಗೀತ ಸ್ಪರ್ಧೆ
ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರು ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ ಹಬ್ಬ, ಕ್ರಿಸ್ಮಸ್ ಸಂಭ್ರಮಾಚರಣೆ ಹಾಗೂ ರಂಜಾನ್ ಹಬ್ಬವನ್ನು ಮಂಗಳೂರಿನ ಹಲವು ಕಡೆಗಳಲ್ಲಿ ಸರ್ವಧರ್ಮಿಯರು ಸೇರಿಕೊಂಡು ಆಚರಿಸುತ್ತಾ ಬರುತ್ತಿದ್ದಾರೆ. ಈ ಭಾರಿ 11ನೇ ವರ್ಷದ ಕ್ರಿಸ್ಮಸ್ ಹಬ್ಬದ ಆಚರಣೆಯನ್ನು ಡಿ 22 ರಂದು ನಗರದ ಜೆಪ್ಪು ಸಂತ ಅಂತೋನಿ ಆಶ್ರಮದ ತೆರೆದ ಮೈದಾನದಲ್ಲಿ ಸಂಜೆ 3:30 ರಿಂದ ರಾತ್ರಿ 8:00ರ ವರೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ಜೆ…
ಕಾಲುವೆಯಲ್ಲಿ ನೀರಿನ ಹರಿವಿಗೆ ಸಿಲುಕಿ ಆರನೇ ತರಗತಿ ವಿದ್ಯಾರ್ಥಿಯ ದಾರುಣ ಅಂತ್ಯ
ಕಾಸರಗೋಡು : ಚೆರ್ಕಳ ಪಾಡಿಯಲ್ಲಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನ ಹರಿವಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮುಟ್ಟತ್ತೋಡಿ ಗ್ರಾಮದ ಕಲ್ಲಕಟ್ಟ ಬೆಳ್ಳೂರಡ್ಕ ನಿವಾಸಿ ಹಸೈನಾರ್ ಎಂಬವರ ಪುತ್ರ ಮಿತ್ಲಾಜ್ (11) ಸಾವನ್ನಪ್ಪಿದ ದುರ್ದೈವಿ.ಈತ ಆಲಂಪಾಡಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿ.ಶನಿವಾರ ಸಂಜೆ ಶಾಲೆಯ ಸಹಪಾಠಿಗಳೊಂದಿಗೆ ಕಾಲುವೆಯಲ್ಲಿ ಸ್ನಾನಕ್ಕೆ ಹೋಗಿರುವುದಾಗಿ ಪ್ರಾಥಮಿಕ ಮಾಹಿತಿ. ಈ ಸಂದರ್ಭ ನೀರಿನ ಹರಿವಿಗೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.ವಿದ್ಯಾನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲಕನ ಶವ ಶರೀರವನ್ನು ಪತ್ತೆ…
ಮಂಗಳೂರು ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ರಕ್ಷಾಬಂಧನ
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಸಲಾಯಿತು. ನಿವೃತ್ತ ಸೈನಿಕರಿಗೆ ಆರತಿ ಬೆಳಗಿ, ಸಿಂಧೂರ ತಿಲಕವಿಟ್ಟು ಪೆಹಲ್ಗಮ್ ಉಗ್ರರ ದಾಳಿಯಲ್ಲಿ ಸಿಂಧೂರವನ್ನು ಕಳಕೊಂಡ ತಾಯಂದಿರ ನೋವಿಗೆ ಆಪರೇಷನ್ ಸಿಂಧೂರದ ಮೂಲಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆಗೆ ಮಹಿಳಾ ಮೋರ್ಚಾದಿಂದ ಧನ್ಯವಾದ ಸಮರ್ಪಿಸಲಾಯಿತು. ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ,…
ಮರಳು ಮಾಫಿಯಾಗಳ ನೀಡುತಿದ್ದ ಕಂತು ಕಂತು ನೋಟುಗಳಿಗಾಗಿ ನಿಯಮವನ್ನು ಗಾಳಿಗೆ ತೂರಿದ ಆ(ರಕ್ಷ)ಕರು
ಮರಳು ಮಾಫಿಯಾಗಳೊಂದಿಗೆ ಪೊಲೀಸರ ನಂಟಿನ ವಿಷಯದಲ್ಲಿ ಎಳೆ ಎಳೆಯಾಗಿ ಒಂದೊಂದು ಮಾಹಿತಿ ಬಹಿರಂಗಗೊಳ್ಳುತ್ತಿದೆ. ಆರಂಭದಲ್ಲಿ ಕುಂಬಳೆ ಠಾಣೆಯ ಎಸ್ಸೈ ಯನ್ನು ಬಲೆಗೆ ಹಾಕುವ ಯತ್ನ ವಿಫಲವಾದ ಹಿನ್ನೆಲೆಯಲ್ಲಿ ಕೆಲವೊಂದು ಪೊಲೀಸರ ಒಡನಾಟದೊಂದಿಗೆ ಮರಳು ಮಾಫಿಯಾಗಳು ಸಂಪಾದಿಸಿದ್ದು ಕೋಟಿಗಟ್ಟಲೆ. ಶ್ರಿಜೇಶ್ ಕುಂಬಳೆ ಎಸ್ಸೈ ಆಗಿ ಅಧಿಕಾರ ವಹಿಸಿದ್ದು ಒಂದೂವರೆ ವರ್ಷಕ್ಕೆ ಮೊದಲು. ಮರಳು ಮಾಫಿಯಾ ಹಾಗೂ ಮಾದಕ ದಂಧೆಕೋರರಿಗೆ ಸಿಂಹ ಸ್ವಪ್ನವಾಗಿದ್ದ ಶ್ರಿಜೇಶ್ ಮುಖ ನೋಡದೆ ಯಾವುದೇ ರಾಜಕೀಯ ಪುಡಾರಿಗಳ ಒತ್ತಾಸೆಗೂ ಬಗ್ಗದೆ ಕಟ್ಟು ನಿಟ್ಟಿನ ಕ್ರಮ ತೆಗದುಕೊಳ್ಳುವ…
ಮರಳು ಮಾಫಿಯಾಗಳೊಂದಿಗೆ ನಂಟು : ಕುಂಬಳೆ ಠಾಣೆಯ ಆರು ಪೊಲೀಸರ ಅಮಾನತು
ಮಂಜೇಶ್ವರ : ಮರಳು ಮಾಫಿಯಾಗಳೊಂದಿಗೆ ನಂಟು ಬೆಳೆಸಿ ಕೊಂಡು ಪೊಲೀಸಿನ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವುದನ್ನು ಪತ್ತೆ ಹಚ್ಚಿ ಕುಂಬಳೆ ಪೊಲೀಸ್ ಠಾಣೆಯ ಐದು ಪೊಲೀಸರನ್ನು ಹಾಗೂ ಇಲ್ಲಿಂದ ವರ್ಗಾವಣೆಗೊಂಡ ಒಂದು ಪೊಲೀಸನನ್ನು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರ ನಿರ್ದೇಶದಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕುಂಬಳೆ ಠಾಣೆಯ ಸೀನಿಯರ್ ಸಿವಿಲ್ ಪೊಲೀಸ್ ಅಧಿಕಾರಿ ಅಬ್ದುಲ್ ಸಲಾಂ, ಮನು, ಲಿನೇಶ್, ಅನೂಪ್, ಚಾಲಕ ಕೃಷ್ಣ ಪ್ರಸಾದ್ ಹಾಗೂ ಕುಂಬಳೆ ಠಾಣೆಯಿಂದ ಇತ್ತೀಚೆಗೆ ವರ್ಗಾವಣೆಗೊಂಡ ವಿನೋದ್ ಕುಮಾರ್ ಎಂಬಿವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ….
ಇಹಲೋಕ ತ್ಯಜಿಸಿದ ಬಾಕ್ರಬೈಲಿನ ಮಹಾನ್ ಚೇತನ
ಭಜನೆಯ ಗುರಿಕಾರ…ಕಂಬಳದ ನೇಕಾರ.. ಕೃಷಿಯ ಹರಿಕಾರ…RSS ಹಾಗೂ ಬಿಜೆಪಿ ನೇತಾರ…ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿ ಮಾಜಿ ಅಧ್ಯಕ್ಷರು, ಪ್ರಗತಿಪರ ಕೃಷಿಕ, ಸಂಘಟನಾ ಚತುರ… ಎಲ್ಲಾ ಕ್ಷೇತ್ರಗಳ ಸಾಹುಕಾರ… ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಂದೇ ಹುಟ್ಟಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ವಸಂತ ಭಂಡಾರಿ ಕಯ್ಯ (78) ವಿಧಿವಶ . ಸಣ್ಣ ಪ್ರಾಯದಿಂದಲೇ ಎಲ್ಲರೊಂದಿಗೆ ಬೆರೆತು ಮುಂದೆ ಬಾಕ್ರಬೈಲಿನಲ್ಲಿ ಎಲ್ಲರನ್ನೂ ಸಂಘಟಿಸುವ ಜೊತೆಗೆ ಪ್ರಗತಿಪರ ಕೃಷಿಕರಾಗಿ ಹಾಗೂ ಕಂಬಳ ಕೋಣದ ಮಾಲಕರು ಮತ್ತು ಓಟಗಾರ, ಕೂಡ ಪ್ರಸಿದ್ದಿಯನ್ನು ಪಡೆದ ಪ್ರಗತಿಪರ…
ವರ್ಕಾಡಿಯಲ್ಲಿ ನಡೆದ ಭೀಬತ್ಸ ಘಟನೆ :ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ, ನೆರೆಮನೆಯ ಮಹಿಳೆಗೂ ಗಂಭೀರ
ರಾತ್ರಿ ಹೊತ್ತು ಮನೆಯಲ್ಲಿ ಮಲಗಿದೆ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ತಾಯಿ ಸಾವನ್ನಪ್ಪಿದ್ದಾರೆ ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯವೆಸಗಿಧ್ಧಾನೆ. ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಜೂನ್ 26 ಗುರುವಾರ ಮುಂಜಾನೆ ಈ ಘಟನೆ…