Avatar

nammamedia24@gmail.com

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು,ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್

ಸ್ವಾರ್ಥ ಹೆಚ್ಚುತ್ತಿರುವ ಮತ್ತು ಮಾನವೀಯತೆ ಮರೆಯಲಾಗುತ್ತಿರುವ ಕಾಲದಲ್ಲಿ, ಶಿಕ್ಷಣ ಬಯಸುವ ಮಗುವಿಗೆ ಶಿಕ್ಷಣ, ಕಂಕಣ ಕೂಡಿ ಬಂದಿರುವ ಮನೆಮಗಳಿಗೆ ಮದುವೆ, ಆರೋಗ್ಯದ ಸಮಸ್ಯೆಗಳನ್ನು ಹೊಂದಿರುವವನಿಗೆ ಚಿಕಿತ್ಸೆ ಇಂತಹ ಅನೇಕ ಮಹತ್ಕಾರ್ಯಗಳನ್ನು ಯಾವುದೇ ಪಲಾಷೇಕ್ಷೆಯಿಲ್ಲದೆ ನಿಸ್ವಾರ್ಥವಾಗಿ ಮಾಡಿಕೊಂದು ಬಂದವರು ಶ್ರೀ ಲಂಚುಲಾಲ್ ಕೆ.ಎಸ್‌. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ಮಾಡುವುದು – ಜನರ ಗಮನ ಸೆಳೆಯಲು ಅಲ್ಲ, ಪ್ರಶಂಸೆಗಾಗಿ ಅಲ್ಲ, ಅದು ಅವರ ಹೃದಯದಿಂದ ಬಂದ ಕಾಳಜಿ.ಅವರು ಮಾಡಿದ…

Read More

ಕವಿ ಕಯ್ಯಾರರು

“ಬೆಂಕಿ ಬಿದ್ದಿದೆ ಮನೆಗೆ ಓಬೇಗ ಬನ್ನಿ “ಎಂದುಕರೆಕೊಟ್ಟ ಮಹಾನ್ ಚೇತನ.ಕನ್ನಡ ಸಾಹಿತ್ಯ ಲೋಕದ ಧೀಮಂತ ನಯನಗಡಿನಾಡ ಹೆಮ್ಮೆಯ ಕವಿಮನ. ಶೈಕ್ಷಣಿಕ ಕ್ಷೇತ್ರದಲ್ಲೂ ಮಹಾನ್ ಕ್ರಾಂತಿನಾಡು-ನುಡಿ, ಐಕ್ಯತೆ-ಪರಂಪರೆಯಲ್ಲೂ ಪ್ರೀತಿನುಡಿದಂತೆ ನಡೆದ ಅಪ್ಪಟ ಕನ್ನಡ ಪ್ರೇಮಿಸಾಧಿಸಿರುವಿರಿ ಕೃಷಿ ಕ್ಷೇತ್ರದಲ್ಲೂ ಪ್ರಗತಿನಿಮ್ಮ ಬದುಕು-ಬರಹಗಳೇ ನಮಗೆ ಸ್ಪೂರ್ತಿ. ಐಕ್ಯತೆಯ ಮಂತ್ರವ ‘ಐಕ್ಯಗಾನ’ದಿ ಪಸರಿಸಿದಿರಿಗಡಿನಾಡಿನ ಕಿಡಿಯಾಗಿ ಪ್ರಜ್ವಲಿಸಿದಿರಿದುಡಿತವೇ ನನ್ನ ದೇವರೆಂದು ಸಾರಿರುವಿರಿಕನ್ನಡಿಗರ ಮನೆ-ಮನದಿ ನೆಲೆಸಿರುವಿರಿ. ✍️ ಸುಜಿತ್.ಕುಮಾರ್, ಬೇಕೂರು.

Read More

ಪರಿಸರ ದಿನ

ಹಚ್ಚ ಹಸುರಿನ ನಡುವೆಮದುಮಗಳ ಸಿಂಗಾರದಂತೆಮಿನುಗುವಳು ಭೂದೇವಿ.ತಾನೂ ಬದುಕುವುದರೊಂದಿಗೆಇತರ ಜೀವಿಗಳಿಗೂಆಶ್ರಯತಾಣವಾಯಿತು ವೃಕ್ಷ. ಸುತ್ತಲಿನ ಪರಿಸರವುಮನುಜನಿಗೆ ವರವುಸ್ವಚ್ಛ ಪರಿಸರವೇಆರೋಗ್ಯದಾಯಕವು.ಪ್ರಕೃತಿಯು ಜೀವಿಗಳಿಗೆಅತಿ ಅಗತ್ಯವುನಾವು ಇಲ್ಲದಿರೆ ಇರುವುದುಪ್ರಕೃತಿಯುಪ್ರಕೃತಿಯು ಇಲ್ಲದಿರೆ ಮನುಜನಿಗೆಇರುವುದೇ ಉಳಿಗಾಲವು?ಇದನರಿತು ನಡೆದರೆಬದುಕು ಸುಂದರ ಪಯಣ.ಉಳಿಸೋಣ ಬೆಳೆಸೋಣಮರಗಿಡ ಬಳ್ಳಿಗಳಒಂದೇ ದಿನಕ್ಕಲ್ಲ ಪರಿಸರ ದಿನಪ್ರತಿದಿನವು ಇರಲಿಪರಿಸರ ಕಾಳಜಿಯು. ✍️..ಸುಜಿತ್ ಕುಮಾರ್ ಬೇಕೂರ್

Read More

ಸ್ನಾನಕ್ಕೆಂದು ಕೆರೆಗೆ ಇಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣ ಸಾವು

ಮಂಜೇಶ್ವರ: ಸ್ನಾನಕ್ಕೆಂದು ಕೆರೆಗೆ ಇಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೊಂದು ಬಾಲಕನನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಸಾವನ್ನಪ್ಪಿದ ಬಾಲಕರು.ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಾಹಿತಿ ಅರಿತು ನಾಗರಿಕರು, ಅಗ್ನಿಶಾಮಕ…

Read More

ಗಡಿಯಲ್ಲಿ ಸೈನಿಕರಿದ್ದಾರೆ ದೇಶದ ಒಳಗಿರುವ ದೇಶದ್ರೋಹಿಗಳನ್ನು ದೇಶಪ್ರೇಮಿಗಳು ನಾಶ ಮಾಡಬೇಕು – ಮಾಜಿ ಸೈನಿಕ ವಿಜಯ್ ಕುಮಾರ್.

ಹೊಸಂಗಡಿ – ಪಾಕಿಸ್ತಾನವನ್ನು ನಾಶ ಮಾಡಲು ಭಾರತಕ್ಕೆ ಒಂದು ದಿನವೂ ಬೇಡ ಆದರೆ ದೇಶದ ಒಳಗಿರುವ ದೇಶದ್ರೋಹಿಗಳನ್ನು ನಿಗ್ರಹ ಮಾಡಬೇಕಾದದ್ದು ದೇಶಪ್ರೇಮಿಗಳ ಕರ್ತವ್ಯ ಎಂದು ನಿವೃತ್ತ ಕಮಂಡರ್ ವಿಜಯ ಕುಮಾರ್ ಕಣ್ವತೀರ್ಥ ಹೇಳಿದರು ಹೊಸಂಗಡಿಯಲ್ಲಿ ಬಿಜೆಪಿ ಮಂಡಲ ಸಮಿತಿ ಹಮ್ಮಿಕೊಂಡ ಭಾರತ್ ಶೌರ್ಯ ತಿರಂಗ ಯಾತ್ರೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ಮಾಜಿ ಜಿಲ್ಲಾ ಪ್ರ ಕಾರ್ಯದರ್ಶಿ ವಿಜಯ್ ರೈ ಉದ್ಘಾಟಿಸಿದರು, ಆಧುನಿಕ ಜಗತ್ತಿನಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತ ಬಲಿಷ್ಠ ಸೈನಿಕ ಶಕ್ತಿಯನ್ನು…

Read More

ಕಣ್ವತೀರ್ಥ ಬೀಚ್ ರಸ್ತೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಕಣ್ವಕಣ್ಣುತೀರ್ಥ ಬೀಚ್ ರಸ್ತೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ಮಂಜೇಶ್ವರ : ಕೇರಳ ಸರಕಾರದ ಅಭಿವೃದ್ಧಿ ಯೋಜನೆಯ ಭಾಗವಾಗಿ ಕಾಸರಗೋಡು ಡೆವಲಪ್ಮೆಂಟ್ ಫಂಡ್ ನಿಂದ ಲಭಿಸಿದ 2 ಕೋಟಿ 37 ಲಕ್ಷ ರೂಪಾಯಿ ಖರ್ಚಿನಲ್ಲಿ ನಿರ್ಮಾಣಗೊಂಡ 1350 ಮೀಟರ್ ಕಣ್ಟತೀರ್ಥ ಬೀಚ್ ರಸ್ತೆಯನ್ನು ಕೇರಳದ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ರಾಜ್ಯದ 14 ಜಿಲ್ಲೆಗಳಲ್ಲಿ 60 ರಸ್ತೆಗಳನ್ನು ಒಂದೇ ದಿನದಲ್ಲಿ ಮುಖ್ಯ ಮಂತ್ರಿಯವರು ಲೋಕಾರ್ಪಣೆಗೊಳಿಸಿದ್ದಾರೆ. ಲೋಕೋಪಯೋಗಿ ಹಾಗೂ ಪ್ರವಾಸೋಧ್ಯಮ ಇಲಾಖೆಯ ಸಚಿವ ಮೊಹಮ್ಮದ್ ರಿಯಾಝ್ ಅಧ್ಯಕ್ಷತೆ ವಹಿಸಿದರು. ಮಂಜೇಶ್ವರದ ಅಭಿವೃದ್ಧಿಯ ರೂವಾರಿ ಎಂದೇ…

Read More

ಮಂಜೇಶ್ವರ :ರಾಷ್ಟ್ರೀಯ ಹೆದ್ದಾರಿ ಪಾದಾಚಾರಿ ಮೇಲ್ಸೇತುವೆ ಕಾಮಗಾರಿ ಗೆ ಚಾಲನೆ.

ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಎರಡೂ ದಿಕ್ಕುಗಳಿಗೆ ದಾಟಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ಪಾದಾಚಾರಿ ಮೇಲ್ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಿತು. ಮೇಲ್ಸೇತುವೆ ನಿರ್ಮಾಣ ಸ್ಥಳದ ಬಗ್ಗೆ ಕೆಲವೊಂದು ಮಂದಿ ರೈಲು ನಿಲ್ದಾಣದ ಸಮೀಪ ಫ್ಲೈಓವರ್ ಬೇಕೆಂಬ ಬೇಡಿಕೆ ಇಟ್ಟಿದ್ದರೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರಿನವರು ಬೇಡಿಕೆ ಇಟ್ಟಿದ್ದ ಸ್ಥಳದಲ್ಲೇ ಇದೀಗ ಕಾಮಗಾರಿ ಆರಂಭಗೊಂಡಿರುವುದನ್ನು ಹೋರಾಟ ಕ್ರಿಯಾ ಸಮಿತಿ ಹಾಗೂ ಊರವರು ಸ್ವಾಗತಿಸಿದ್ದಾರೆ. ಈ ಪಾದಾಚಾರಿ ಮೇಲ್ಸೇತುವೆ ನಿರ್ಮಾಣದಿಂದಾಗಿ…

Read More

ಪೆಟ್ರೋಲ್ ಬಂಕ್ ಟ್ಯಾಂಕ್ ನಿರ್ಮಾಣಕ್ಕೆ ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿ ಪುರುಷ ಶವ ಪತ್ತೆ

ಮಂಜೇಶ್ವರ : ಪೆರಿಯ ನವೋದಯ ನಗರದಲ್ಲಿ ನಿರ್ಮಾಣದಲ್ಲಿರುವ ಪೆಟ್ರೋಲ್ ಬಂಕ್ ನ ಟ್ಯಾಂಕ್ ನಿರ್ಮಿಸಲು ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿರುವ ಪುರುಷನ ಶವವೊಂದು ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿಲ್ಲ. ಗುರುವಾರ ಮಧ್ಯಾಹ್ನದ ಸುಮಾರಿಗೆ ಆಳವಿರುವ ಹೊಂಡದಲ್ಲಿ ಶವ ಮಣ್ಣಿನಲ್ಲಿ ಕೊಳೆತು ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ.ಪೆಟ್ರೋಲ್ ಬಂಕ್ ಪರಿಸರದಲ್ಲಿ ದುರ್ಗಂಧ ಭೀರಿದ ಹಿನ್ನೆಲೆಯಲ್ಲಿ ಪರಿಸರದ ಮನೆಯವರು ಆಗಮಿಸಿ ನಡೆಸಿದ ಶೋಧದಲ್ಲಿ ಶವ ಪತ್ತೆಯಾಗಿದೆ. ಶವ 3 ದಿನ ಹಳೆಯದಾಗಿರಬಹುದಾಗಿ ಶಂಕಿಸಲಾಗಿದೆ. ಮಾಹಿತಿ ಅರಿತು ಊರವರು ಹಾಗೂ ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Read More
error: Content is protected !!