Avatar

Rashmitha Acharya

ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದ …. !

ಮಂಗಳೂರು: ಕನ್ನಡ ಭಾಷೆಯ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಚಿತ್ರದ ನಿರ್ದೇಶಕ ವಿನಾಯಕ್ ಇನ್ಸ್ಟಾಗ್ರಾಮ್ ಮೂಲಕ ನನ್ನನ್ನು ಸಂಪರ್ಕಿಸಿದರು. ಅವರು ಹೇಳಿದ ಕಥೆ ಕೇಳಿ ಖುಷಿಯಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ್ದೇನೆ. ಒರಿಯರ್ದೊರಿ ಅಸಲ್, ಮದಿಮೆ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಟ್ಟು ನನ್ನನ್ನು ಬೆಳೆಸಿರುವ ಹಿರಿಯ ರಂಗಭೂಮಿ ಕಲಾವಿದ ವಿಜಯ್…

Read More

ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿಗಳು ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯ ಭೇಟಿ …. !

ಉಡುಪಿ: ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿಗಳು ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಬಿಲ್ಲವ ಸಮಾಜದ ಹಿರಿಯ ಮುಖಂಡರಾದ ಮಂಜುನಾಥ ಪೂಜಾರಿಯವರನ್ನು ಹೆಬ್ರಿಯಲ್ಲಿ ಭೇಟಿ ಮಾಡಿದರು . ಈ ಸಂದರ್ಭದಲ್ಲಿ ಡಿಸೆಂಬರ್ 7ನೇ ತಾರೀಕು ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಐತಿಹಾಸಿಕ ಪಾದಯಾತ್ರೆಯ ಪೂರ್ವಭಾವಿ ಸಭೆಯ ಕುರಿತು ಚರ್ಚೆಯನ್ನು ನಡೆಸಲಾಯಿತು . ಮಂಜುನಾಥ ಪೂಜಾರಿ ಅವರನ್ನು ಭೇಟಿ ಮಾಡಿ ನಿಗಮದ ಹಲವಾರು ವಿಷಯಗಳ ಬಗ್ಗೆ ಸುಮಾರು 2…

Read More

ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ಭೇಟಿಯಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ …. !

ಕಾರ್ಕಳ: ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ರವರನ್ನು ಕಾರ್ಕಳದಲ್ಲಿ ಶ್ರೀಗಳು ಭೇಟಿಯಾಗಿ ಐತಿಹಾಸಿಕ ಪಾದಯಾತ್ರೆಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಆಹ್ವಾನವನ್ನು ನೀಡಿದರು , ಪಾದಯಾತ್ರೆ ನಡೆಯುವ ಸಂದರ್ಭ ದಲ್ಲಿ ದೊಡ್ಡ ಮಟ್ಟದ ಬಹಿರಂಗ ಸಭೆಯಲ್ಲಿ ಗಂಗಾವತಿ ನಗರದಲ್ಲಿ ಭಾಗವಹಿಸಲು ಶ್ರೀಗಳು ತಿಳಿಸಿದರು. ಈಡಿಗ, ಬಿಲ್ಲವ, ನಾಮಧಾರಿ ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6 ರಂದು ಶಕ್ತಿಪೀಠ ಕರದಾಳದಿಂದ ಬೆಂಗಳೂರು ತನಕ 41 ದಿನಗಳ 700 ಕಿಲೋ ಮೀಟರ್…

Read More

ರಾಜ್ಯಮಟ್ಟದ ಗಣಿತ ಶಾಸ್ತ್ರೋತ್ಸವದಲ್ಲಿ ದ್ವಿತೀಯ ರನ್ನರಪ್ ಪ್ರಶಸ್ತಿ ಮುಡಿಗೇರಿಸಿದ ಎಸ್ ಎ ಟಿ ವಿದ್ಯಾಸಂಸ್ಥೆ

ಮಂಜೇಶ್ವರ: ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಳದ ಶಾಲೆಯ ಪ್ರೌಢ ಶಾಲಾ‌ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಗಣಿತ ಶಾಸ್ತ್ರೋತ್ಸವದಲ್ಲಿ ಭಾಗವಹಿಸಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ರಾಜ್ಯ ಮಟ್ಟದ ಗಣಿತ ಪಝಲ್ ವಿಭಾಗದಲ್ಲಿ ಧನ್ಯ ಸಿ ಐಲ್ ದ್ವಿತೀಯ ಸ್ಥಾನದೊಂದಿಗೆ ಎ ಗ್ರೇಡ್, ನಂಬರ್ ಚಾರ್ಟ್ ವಿಭಾಗದಲ್ಲಿ ಚೈತ್ರಿಕಾ ಎಮ್ ಎ ಗ್ರೇಡ್, ಗ್ರೂಪ್ ಪ್ರೊಜೆಕ್ಟ್ ನಲ್ಲಿ ಅನುಶ್ರೀ ಮತ್ತು ಶೃಷ್ಠಿ ಶೆಟ್ಟಿ ಎ ಗ್ರೇಡ್, ಅದರ್ ಚಾರ್ಟ್ ವಿಭಾಗದಲ್ಲಿ ವರ್ಷ ಜಿ.ಕೆ ಎ ಗ್ರೇಡ್,…

Read More

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ರೀತಿಯಲ್ಲಿ ಪತ್ತೆ-ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆಂಬ ಶಂಕೆ

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ರೀತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನ ಕುಂಪಲ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ದಯಾನಂದ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ಇವ್ರ ಮೃತದೇಹ ಸಿಕ್ಕಿದ್ದು, ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಲ್ಲಿರೋ ಲಾಂಡ್ರಿ ಎದುರಲ್ಲೇ ದಯಾನಂದ್ ಮೇಲೆ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪಕ್ಕದಲ್ಲೇ ಮುಖಕ್ಕೆ ರಕ್ತ ಲೇಪಿಸಿದ್ದ ಬೀದಿ ನಾಯಿಯೊಂದು ಇದ್ದು ಜನರನ್ನು ಕಂಡು ಓಡಿ ಹೋಗಿದೆ. ಸ್ಥಳೀಯರು ಘಟನೆ ಬಗ್ಗೆ ಉಳ್ಳಾಲ ಪೊಲೀಸರಿಗೆ ಮಾಹಿತಿ…

Read More

ಕುಲಾಲ ವೇದಿಕೆ ಮಂಜೇಶ್ವರ-ಉಚಿತ ವೈದ್ಯಕೀಯ, ಶಿಬಿರ ಹೃದಯ ತಪಾಸಣಾ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಮಂಜೇಶ್ವರ: ಕುಲಾಲ ವೇದಿಕೆ ಮಂಜೇಶ್ವರ ಹೊಸಬೆಟ್ಟು ಮಂಜೇಶ್ವರ ಇದರ ವತಿಯಿಂದ ಕುಲಾಲ ವೇದಿಕೆಯ ಹಿರಿಯ ಮಾರ್ಗದರ್ಶಕರಾಗಿದ್ದ ದಿ. ಜಯಂತಮಾಸ್ಟರ್ ಮೀಯಪದವು ಹಾಗೂ ದಿ.ಸೋಮಶೇಖರ ಬಡಾಜೆ ಇವರ ಸ್ಮರಣಾರ್ಥದಲ್ಲಿ ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮಂಗಳೂರು ಹಾಗು ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರ , ಹೃದಯ ತಪಾಸಣಾ ಶಿಬಿರ ಬಿಪಿ , ಶುಗರ್ ಹೃದಯ ತಪಾಸಣೆ, ಇಸಿಜಿ , ಸಾಮಾನ್ಯ ಔಷದಿಯ ವಿಭಾಗ ಅರೋಗ್ಯ ಕಾರ್ಡ್ ಹಾಗು ಬಡ ರೋಗಿಗಳ…

Read More

ಕಾಸರಗೋಡು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ)ಕಾಸರಗೋಡು ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಪರಮ ಪೂಜ್ಯ ಪದ್ಮವಿಭೂಷಣ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತ್ರ ಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಿನ್ನೆ ವನಿತ ಭವನ ಕೂಡ್ಲುನಲ್ಲಿ ನಡೆಯಿತು . ಕೂಡ್ಲು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ರವರು ಪ್ರಗತಿ ನಿಧಿ ಬೇಡಿಕೆ…

Read More

ರಿಕ್ಷಾ, ನಿಲ್ದಾಣಗಳ ನಡವಳಿಯಲ್ಲಿ ಕೆಲವು ಬದಲಾವಣೆಗೆ ಅಗತ್ಯಕ್ಕೆ ಆಟೋ ಯೂನಿಯನ್ ಆಗ್ರಹ

ಉಡುಪಿ: ಜಿಲ್ಲೆ ಮತ್ತು ನಗರದ ಆಟೋ ರಿಕ್ಷಾ ಮತ್ತು ಆಟೋ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಅ.1ರಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಹೊಸ ನಡವಳಿಯಲ್ಲಿ ಕೆಲವು ಬದಲಾವಣೆ ಮಾಡಬೇಕು ಎಂದು ಆಶ್ರಯ ಆಟೋ ಯೂನಿಯನ್ ಆಗ್ರಹಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಯೂನಿಯನ್ ಪ್ರಧಾನ ಕಾರ್ಯದರ್ಶಿ ಶಿವಾನಂದ ಮೂಡುಬೆಟ್ಟು ಅವರು, ವಲಯ-1 ಪರ್ಮಿಟ್ ಅಳವಡಿಸಿಕೊಳ್ಳಲು ಮೂರು ತಿಂಗಳ ಕಾಲಾವಕಾಶ ನೀಡಬೇಕು. ನಗರ ಪರವಾನಿಗೆ ಹೊಂದಿರುವ ಆಟೋ ಚಾಲಕನಿಗೆ ಒಂದು ಆಟೋ ಸ್ಟ್ಯಾಂಡ್ ನಲ್ಲಿ ಮಾತ್ರ ಸದಸ್ಯತ್ವ ನೀಡಬೇಕು. ಎರಡು ಕಡೆ…

Read More

ಅಜ್ಞಾತರಿಂದ ಗಲ್ಫ್ ನಿವಾಸಿಯ ಮನೆಗೆ ಗುಂಡು ಹಾರಾಟ

ಮಂಜೇಶ್ವರ : ಉಪ್ಪಳ ಹಿದಾಯತ್ ಬಜಾರಿನ ಕೊಲ್ಲಿ ಉದ್ಯೋಗಿಯೊಬ್ಬರ ಮನೆಗೆ ಅಜ್ಞಾತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಉಪ್ಪಳ ಹಿದಾಯತ್ ಬಜಾರಿನಲ್ಲಿ ವಾಸವಾಗಿರುವ ಅಬೂಬಕ್ಕರ್ ಎಂಬವರ ಮನೆಗೆ ಗುಂಡು ಹಾರಿಸಿರುವ ಬಗ್ಗೆ ದೂರಲಾಗಿದೆ. ಗುಂಡು ಹಾರಾಟದಿಂದ ಮನೆಯ ಕಿಟಿಕಿಯ ಗಾಜುಗಳು ಪುಡಿಯಾಗಿದೆ. ಅಬೂಬಕ್ಕರ್ ಕತಾರ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಈತನ ಪತ್ನಿ ಹಾಗೂ ಪುತ್ರಿ ಮನೆಯಲ್ಲಿದ್ದರೆಂದು ಹೇಳಲಾಗಿದೆ.ಕಾರಿನಲ್ಲಿ ಆಗಮಿಸಿದ ತಂಡ ಗುಂಡು ಹಾರಿಸಿ ತಕ್ಷಣ ಅಲ್ಲಿಂದ ಪರಾರಿಯಾಗಿರುವುದಾಗಿ ಹೇಳಲಾಗಿದೆ.ಮಾಹಿತಿ…

Read More

ಕಡಬದಲ್ಲಿ 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಡಬ, ನ.6: ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕ ಗಗನ್ (14) ಸ್ಥಳೀಯ ಶಾಲೆಯ ವಿದ್ಯಾರ್ಥಿಯಾಗಿದ್ದು, ಪೋಷಕರಾದ ತಂದೆ-ತಾಯಿ ಹಾಗೂ ಇಬ್ಬರು ಸಹೋದರ-ಸಹೋದರಿಯರೊಂದಿಗೆ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯಲ್ಲಿ ವಾಸವಾಗಿದ್ದನು. ನ.6ರಂದು ಪೋಷಕರು ಶಾಲೆಗೆ ತೆರಳಿ ಮಗನ ವಿದ್ಯಾಭ್ಯಾಸದ ಪ್ರಗತಿ ಕುರಿತು ವಿಚಾರಿಸಿದಾಗ, ಆತನ ಕಲಿಕಾ ಪ್ರಗತಿ ತೃಪ್ತಿಕರವಾಗಿಲ್ಲವೆಂಬ ಮಾಹಿತಿ ದೊರೆತಿತ್ತು. ಸಂಜೆ ಮನೆಗೆ ಮರಳಿದ ಬಾಲಕ ಆಟವಾಡಿ ಬಳಿಕ…

Read More
error: Content is protected !!