ಗಣಪತಿಯ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುವರ ಪರ ಸರ್ಕಾರ ನಿಲ್ಲುತ್ತದೆ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ಮಂಗಳೂರು : ಗಣಪತಿಯ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುವರ ಪರ ಸರ್ಕಾರ ನಿಲ್ಲುತ್ತದೆ. ತಲ್ವಾರ್ ಗಳು ಪ್ರದರ್ಶನ ಮಾಡುವವರ ಮೇಲೆ ಕ್ರಮ ಇಲ್ಲ. ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸರಕಾರದ ವಿರುದ್ಧ ಗುಡುಗಿದರು. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕರ್ನಾಟಕದಲ್ಲಿ 65 ಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆಯಾಗಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಯಾದಗಿರಿ…