Avatar

Rashmitha Acharya

ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಪ್ರೀತಿಯನ್ನು ಪಾಲಕರು ಬೆಳೆಸಿದರೆ ಮಾತ್ರ ಕನ್ನಡದ ಉಳಿವು ಸಾಧ್ಯ : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಮಂಗಳೂರು:ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು . ಅವರು ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ ,ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು….

Read More

ನವೆಂಬರ್ 16ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ- ಡಾ.ಎಂ.ಎನ್‌. ರಾಜೇಂದ್ರ ಕುಮಾರ್ ಹೇಳಿಕೆ

ಮಂಗಳೂರು: “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಧ್ಯೇಯದೊಂದಿಗೆ ನವೆಂಬರ್ 16ರಂದು ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು. ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, “ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು…

Read More

ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಪವಿತ್ರ ಮಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಅ. 29ರಂದು ನಡೆದಿದೆ. ಮಂಚಿ ಕುಕ್ಕಾಜೆ ಸೂತ್ರಬೈಲ್ ನಿವಾಸಿ ಯೂಸುಫ್ (62) ಮೃತಪಟ್ಟವರು. ಅವರು ಕಳೆದ ಕೆಲವು ದಿನಗಳ ಹಿಂದೆ ತಂಡವಾಗಿ ಪತ್ನಿಯ ಜತೆಗೆ ಉಮ್ರಾ ಯಾತ್ರೆಗೆ ತೆರಳಿದ್ದರು. ಇಂದು ಮಕ್ಕಾದಲ್ಲೀ ಅವರ ಧಪನ ಕಾರ್ಯ ನಡೆಯಲಿದೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ.

Read More

ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನದ ಉದ್ಘಾಟನೆ

ಮಂಜೇಶ್ವರ: ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನವನ್ನು ಗೌರವಾನ್ವಿತ ಕೃಷಿ ಸಚಿವರಾದ ಶ್ರೀ ಪಿ. ಪ್ರಸಾದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮಂಜೇಶ್ವರ ಶಾಸಕ ಶ್ರೀ ಎ. ಕೆ. ಎಂ. ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. “ರೈತರ ದ್ವಿತೀಯ ಮನೆಯಾಗಿರುವುದು ಕೃಷಿ ಭವನ. ರೈತರಿಗೆ ಉತ್ತಮ ಸೇವೆಗಳು ನೀಡುವ ಉದ್ದೇಶದಿಂದ ಈ ಕೃಷಿ ಭವನದಲ್ಲಿ ಪ್ಲಾಂಟ್ ಹೆಲ್ತ್ ಕ್ಲಿನಿಕ್ (ಸಸ್ಯ ಆರೋಗ್ಯ ಕೇಂದ್ರ) ಕೂಡ…

Read More

ಮಂಗಳೂರು : ವೀಸಾ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ

ಮಂಗಳೂರು, ಅ. 30ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋ.ರೂ. ಗೂ…

Read More

ನಗರದ ಪ್ರಮುಖ ರಸ್ತೆಯ ನಾಮ ಫಲಕದ ನಾಮವೇ ಕಾಣೆ ….. !

ಸ್ಟಾರ್ಟ್ ಸಿಟಿಯೆಂದು ಕರೆಸಿಕೊಳ್ಳುವ ಮಂಗಳೂರಿನ ರಸ್ತೆಗಳ ಅವ್ಯವಸ್ಥೆಗಳ ವ್ಯಥೆಯ ಕಥೆ ಒಂದೆಡೆಯಾದರೆ , ಸ್ಥಳ ನಾಮ ಫಲಕಗಳ ಅಕ್ಷರಗಳು ಅಳಿಸಿಹೋದರು ಅದನ್ನು ಮತ್ತೆ ಸರಿ ಮಾಡುವ ಪ್ರಯತ್ನವೇ ಅಲ್ಲಿ ನಡೆದಿರುವುದಿಲ್ಲ . ನಗರದ ಹಂಪನ್ ಕಟ್ಟೆಯ ಸಿಗ್ನಲ್ ಬಳಿಗೊಂದು ನಾಮ ಫಲಕದ ಇದ್ದು ಅದರ ನಾಮವೇ ಮಾಯವಾಗಿದೆ . ದಿನನಿತ್ಯ ಈ ಹಾದಿಯಾಗಿ ಹೊಸಬರು ಸಂಚಾರವನ್ನು ನಡೆಸುತ್ತಾರೆ. ಅಂಥವರಿಗೆ ಈ ಅಸ್ಪಷ್ಟವಾಗಿ ಗೋಚರಿಸುವ ನಾಮ ಫಲಕವು ಸ್ಪಷ್ಟವಾದ ಮಾಹಿತಿ ಎಷ್ಟರ ಮಟ್ಟಿಗೆ ನೀಡುತ್ತೆ ಎನ್ನುವ ಗೊಂದಲವಿದೆ ….

Read More

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್…

Read More

ಇಂದಿರಾನಗರ ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು……!

ಉಡುಪಿ: ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಸಂಭವಿಸಿದೆ. ಕಾರ್ಕಳ ಬೈಲೂರಿನ ನಿವಾಸಿ 55 ವರ್ಷದ ಪ್ರಭಾಕರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೂಲ್ಕಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಜೀವ ರಕ್ಷಕ ತಂಡದ ದಾವೂದ್, ಪ್ರಸಾದ್ ಹಾಗೂ ಮಹೇಶ್ ತಕ್ಷಣ ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಜೀವ ರಕ್ಷಕ ಆಂಬುಲೆನ್ಸ್ ಮೂಲಕ ಮೂಲ್ಕಿ ಶವಾಗಾರಕ್ಕೆ…

Read More

ಕೀನ್ಯಾ: ಲಘು ವಿಮಾನ ಪತನ; 12 ಮಂದಿ ಮೃತ್ಯು

ಕೀನ್ಯಾದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಪ್ರದೇಶವಾದ ಕ್ವಾಲೆ ಕೌಂಟಿಯ (Kenya’s Kwale County) ಸಿಂಬಾ ಗೋಲಿನಿ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ವಿಮಾನ ಪತನಗೊಂಡಿದೆ. ವಿಮಾನವು 0530Z ನಲ್ಲಿ ಡಯಾನಿಯಿಂದ ಹೊರಟು ಕಿಚ್ವಾ ಟೆಂಬೊಗೆ (Diani to Kichwa Tembo) ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ. ಇಂದು ಬೆಳಗ್ಗೆ 8:30 ರ ಸುಮಾರಿಗೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಡಯಾನಿ ವಾಯುನೆಲೆಯಿಂದ ಸುಮಾರು 40 ಕಿಲೋಮೀಟರ್…

Read More

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಹಾಗೂ ಡೆವಲಪ್ ಮೆಂಟ್ ಎಜುಕೇಶನ್ ಸರ್ವಿಸ್ ಮಂಗಳೂರು ವತಿಯಿಂದ ಹಿರಿಯ ನಾಗರಿಕರಿಗೆ ಆರೈಕೆದಾರರಾಗಲು ಇಚ್ಛಿಸುವ ಆಸಕ್ತರಿಗೆ ಸರ್ಟಿಫಿಕೇಟ್ ಕೋರ್ಸ್

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಹಾಗೂ ಡೆವಲಪ್ ಮೆಂಟ್ ಎಜುಕೇಶನ್ ಸರ್ವಿಸ್ (ಡೀಡ್ಸ್ ), ಮಂಗಳೂರು ಜಂಟಿ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಆರೈಕೆದಾರರಾಗಲು ಇಚ್ಛಿಸುವ ಆಸಕ್ತರಿಗೆ ಸರ್ಟಿಫಿಕೇಟ್ ಕೋರ್ಸ್ ಒಂದನ್ನು ಆಯೋಜಿಸುತ್ತಿದೆ. ಈ ಕೋರ್ಸಲ್ಲಿ ತರಬೇತಿ ಹೊಂದಿದ ಅಭ್ಯರ್ಥಿಗಳು ಹಿರಿಯ ನಾಗರಿಕರ ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುವ ವಿವಿಧ ಬಗೆಯ ಕೌಶಲ್ಯವನ್ನು, ಪಡೆದು ಉನ್ನತ ಮಟ್ಟದ ಸೇವೆಯನ್ನು ನೀಡಲು ಪರಿಣತಿಯನ್ನು ಹೊಂದುತ್ತಾರೆ, ಈ ತರಬೇತಿಯಲ್ಲಿ ಉತ್ತೀರ್ಣರಾಗುವ ಯಾವುದೇ ಅಭ್ಯರ್ಥಿ ತನ್ನ ಸ್ವಗೃಹದಲ್ಲಿ, ನೆರೆಹೊರೆಯಲ್ಲಿ, ಆಸ್ಪತ್ರೆಗಳಲ್ಲಿ, ವಯೋವೃದ್ಧರ…

Read More
error: Content is protected !!