ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಪ್ರೀತಿಯನ್ನು ಪಾಲಕರು ಬೆಳೆಸಿದರೆ ಮಾತ್ರ ಕನ್ನಡದ ಉಳಿವು ಸಾಧ್ಯ : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್
ಮಂಗಳೂರು:ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು . ಅವರು ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ ,ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು….