ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮದಿನಾಚರಣೆ ಪ್ರಯುಕ್ತ 100 ಮಂದಿಗೆ ಕೃತಕ ಕಾಲು ವಿತರಿಸಲು ಸಂಕಲ್ಪ…. !
ಮಂಗಳೂರು: ಪುಟ್ಟಪರ್ತಿಯ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆ (ನವೆಂಬರ್ 23) ಅಂಗವಾಗಿ ಮಂಗಳೂರಿನ ಮಣ್ಣಗುಡ್ಡದ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಹಾಗೂ ಈಶ್ವರಾಂಬಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವರ್ಷಪೂರ್ತಿ ನಾನಾ ರೀತಿಯ ಸೇವಾ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಸಮಾಜದ ಒಳಿಗಾಗಿ ಬದುಕನ್ನೇ ಮೀಸಲಿಟ್ಟು ಸಮಾಜವನ್ನು ಸರಿದಾರಿಗೆ ಕೊಂಡೊಯ್ದ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಉದ್ದೇಶದಿಂದ 100 ಮಂದಿ ಫಲಾನುಭವಿಗಳಿಗೆ ಕೃತಕ ಕಾಲು ಜೋಡಣೆ…