Avatar

Rashmitha Acharya

ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮದಿನಾಚರಣೆ ಪ್ರಯುಕ್ತ 100 ಮಂದಿಗೆ ಕೃತಕ ಕಾಲು ವಿತರಿಸಲು ಸಂಕಲ್ಪ…. !

ಮಂಗಳೂರು: ಪುಟ್ಟಪರ್ತಿಯ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆ (ನವೆಂಬರ್ 23) ಅಂಗವಾಗಿ ಮಂಗಳೂರಿನ ಮಣ್ಣಗುಡ್ಡದ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಹಾಗೂ ಈಶ್ವರಾಂಬಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವರ್ಷಪೂರ್ತಿ ನಾನಾ ರೀತಿಯ ಸೇವಾ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಸಮಾಜದ ಒಳಿಗಾಗಿ ಬದುಕನ್ನೇ ಮೀಸಲಿಟ್ಟು ಸಮಾಜವನ್ನು ಸರಿದಾರಿಗೆ ಕೊಂಡೊಯ್ದ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಉದ್ದೇಶದಿಂದ 100 ಮಂದಿ ಫಲಾನುಭವಿಗಳಿಗೆ ಕೃತಕ ಕಾಲು ಜೋಡಣೆ…

Read More

ಕೃಷ್ಣ ನಗರಿಯಲ್ಲಿ 32 ಪ್ರಬೇಧಗಳ ಬಾನಕ್ಕಿ ವೀಕ್ಷಣೆ…… !

ಉಡುಪಿ: ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಹೇರೂರಿನಲ್ಲಿ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದು ಗಂಟೆಗಳ ಕಾಲ ಸುತ್ತಮುತ್ತಲಿನ ಪರಿಸರದಲ್ಲಿ ಕಾಲ್ನಡಿಗೆಯ ಮೂಲಕ ತೆರಳಿ ಪರಿಸರ ಆಸಕ್ತರು 32 ಪ್ರಬೇಧಗಳ 65 ಹಕ್ಕಿಗಳನ್ನು ಪಟ್ಟಿ ಮಾಡಿದರು. ಏಷಿಯನ್ ಪಾಮ್ ಸ್ವಿಫ್ಟ್, ರೆಡ್ ವ್ಯಾಟ್ಲಡ್ ಲ್ಯಾಪ್ವಿಂಗ್, ಏಷಿಯನ್ ಓಪನ್ ಬಿಲ್, ಪ್ಲಮ್ ಹೆಡೆಡ್ ಪ್ಯಾರಾಕೀಟ್, ವರ್ನಲ್ ಹ್ಯಾಂಗಿಂಗ್ ಪ್ಯಾರಟ್, ಬ್ಲಾಕ್ ಹೂಡೆಡ್ ಓರಿಯೋಲ್, ಇಂಡಿಯನ್ ಪ್ಯಾರಾಡೈಸ್ ಫ್ಲೈ ಕ್ಯಾಚರ್, ಗೋಲ್ಡನ್ ಫ್ರಾಂಟೆಡ್ ಲೀಫ್ ಬರ್ಡ್…

Read More

ಮಹಿಳೆಯರಿಗೆ ಪ್ರತಿ ಮಾಸ 2,500 ರೂ., 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ : ಮಹಾಘಟಬಂಧನ್ ಗ್ಯಾರಂಟಿ ಘೋಷಣೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಭರ್ಜರಿ ಕಾರ್ಯತಂತ್ರವನ್ನು ರೂಪಿಸಿದೆ. ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿ ಬಿಹಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮುಂದಾಗಿದೆ. ಪಾಟ್ನಾದಲ್ಲಿ ಪ್ರಣಾಳಿಕೆ ಬಿಡುಗಡೆಗೆ ಮುನ್ನ, ಕಾಂಗ್ರೆಸ್ ನಾಯಕ ಕೃಷ್ಣ ಅಲ್ಲವರು ಬಿಹಾರ ಜನತೆಗೆ ಮಹಾಘಟಬಂಧನ್‌ ಪ್ರಮುಖ ಭರವಸೆಗಳ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಭೂರಹಿತ ಕುಟುಂಬಗಳಿಗೆ ಭೂಮಿ ನೀಡಲಾಗುವುದು ಎಂದು ತಿಳಿಸಿದ್ದಾರೆ. 243 ಸದಸ್ಯರ…

Read More

ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ “ಸಪ್ತಾಚೆ ಸಾಂತ್” ಶಾಸಕ ಕಾಮತ್ ಉದ್ಘಾಟನೆ

ಮಂಗಳೂರು: ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಆಶ್ರಯದಲ್ಲಿ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಸಹಕಾರದಲ್ಲಿ ದೇವಳದ ಸನಿಹವಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಪ್ತಾಚೆ ಸಾಂತ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಸಪ್ತಾಚೆ ಸಾಂತ್ ಮೂಲಕ ಅಖಂಡ ಭಜನಾ…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ ಮತ್ತು ಕಳೆದ 5 ವರ್ಷಗಳಲ್ಲಿ ಪಂಚಾಯತಿನಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ವೀಡಿಯೋ ಬಿಡುಗಡೆ ಹಾಗೂ ಲೈಫ್ ಭವನ ಪದ್ಧತಿಯ ನೂತನ ಫಲಾನುಭವಿಗಳಿಗೆ ಮಾಹಿತಿ ಕಾರ್ಯಕ್ರಮ ಮಂಜೇಶ್ವರ ಗೋವಿಂದ ಪೈ ಗಿಳಿವಿಂಡುನಲ್ಲಿ ಅದ್ದೂರಿಯಾಗಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತಾತ್ಮಕ ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಸೇವಾ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ…

Read More

ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಕೂಟ -2025 ಸಂಭ್ರಮ

ಮಂಗಳೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಇಸ್ಲಾಹಿ ಆಂಗ್ಲ ಮಾಧ್ಯಮಶಾಲೆ ಉಳ್ಳಾಲ ವತಿಯಿಂದ ಉಳ್ಳಾಲ ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ -2025 ಮಂಗಳಾ ಕ್ರೀಡಾಂಗಣದಲ್ಲಿ ಬುಧವಾರ ನಡೆಯಿತು. ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ ಜ್ಞಾನೇಶ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಯ ಉದ್ದೇಶ ನಮ್ಮ ದೇಹವನ್ನು ಬಲಿಷ್ಠಗೊಳಿಸುವುದು, ದೇಹ ಬಲಿಷ್ಟ…

Read More

ಸ್ವಾತಂತ್ರ ಕಿಚ್ಚು ಭಾರತದಲ್ಲಿ ಕಾವೇರಿದಾಗ ಆರ್ ಎಸ್ ಎಸ್ ಸಂಘವು ಕಬಡ್ಡಿ ಆಡ್ತಾ ಇತ್ತು : ಕೆಪಿಸಿಸಿ ರಾಜ್ಯ ವಕ್ತಾರರಾದ ಎಂ.ಜಿ ಹೆಗ್ಡೆ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕಟ್ಟಡಗಳಲ್ಲಿ ಆರ್ ಎಸ್ ಎಸ್ ಸಂಘಟನೆಯು ಸರಕಾರದಿಂದ ಅನುಮತಿ ಪಡೆಯಲು ಹಿಂದೇಟು ಹಾಕುವುದು ಏಕೆ ಎಂದು ಕೆಪಿಸಿಸಿ ರಾಜ್ಯ ವಕ್ತಾರರಾದ ಎಂ.ಜಿ ಹೆಗ್ಡೆ ಪ್ರಶ್ನೆ ಮಾಡಿದರು. ಅವರು ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ರಿಟಿಷ್ ಆಡಳಿತದ್ದಾಗ 1940 ರಲ್ಲಿ ಯಾವುದೇ ಸಂಘಟನೆಗಳು, ಪ್ಯಾರಾ ಮಿಲಿಟರಿ ಸಮವಸ್ತ್ರ ಬಳಕೆ, ಮಿಲಿಟರಿ ಕವಾಯಿತು. ಮಾಡುವುದನ್ನು ನಿರ್ಬಂಧ ಮಾಡಿ, ಆ ರೀತಿ ಚಟುವಟಿಕೆ ಮಾಡಲು ಲೈಸನ್ಸ್ ಪಡೆಯ ಬೇಕು ಎಂದು ಆದೇಶ ಮಾಡಿತ್ತು…

Read More

ಋತುಚಕ್ರ ರಜೆ ಘೋಷಣೆ ಹಿನ್ನೆಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ ಮಹಿಳಾ ನೌಕರರ ಸಂಘ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು. ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ತೀರ್ಮಾನ…

Read More

ಅಕ್ಟೋಬರ್ 31 ರಿಂದ ನವೆಂಬರ್ 2, 2025 ರವರೆಗೆ ಮಂಗಳೂರಿನಲ್ಲಿ ನಡೆಯಲಿರುವ ರೇಡಿಯೋಗ್ರಾಫರ್‌ಗಳು ಮತ್ತು ಇಮೇಜಿಂಗ್ ತಂತ್ರಜ್ಞರ ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜುಕೇಶನ್ (MAHE) ಅಡಿಯಲ್ಲಿ ಬರುವ ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ಅಕ್ಟೋಬರ್ 31 ರಿಂದ ನವೆಂಬರ್ 2, 2025 ರವರೆಗೆ ಮಂಗಳೂರಿನ ಡಾ. ಟಿ.ಎಂ.ಎ. ಪೈ ಯಲ್ಲಿ IMAGINE 2025 23 ನೇ ರಾಷ್ಟ್ರೀಯ ರೇಡಿಯೋಗ್ರಾಫರ್‌ಗಳು ಮತ್ತು ಇಮೇಜಿಂಗ್ ತಂತ್ರಜ್ಞರ ಸಮ್ಮೇಳನವನ್ನು ಆಯೋಜಿಸಲಿದೆ. ಕೆಎಂಸಿ ಮಂಗಳೂರಿನ ರೇಡಿಯೋ ಡಯಾಗೋಸಿಸ್ ಮತ್ತು ಇಮೇಜಿಂಗ್ ವಿಭಾಗವು ರಾಷ್ಟ್ರೀಯ ಭಾರತೀಯ ರೇಡಿಯೋಗ್ರಾಫರ್‌ಗಳ ಸಂಘ (SIR) ಸಹಯೋಗದೊಂದಿಗೆ ಆಯೋಜಿಸಿರುವ ಈ ಸಮ್ಮೇಳನವು ಭಾರತದಾದ್ಯಂತದ 700…

Read More

ಕಾಸರಗೋಡು ಜಿಲ್ಲಾ ವಿಜ್ಞಾನೋತ್ಸವ : ಮಂಜೇಶ್ವರದ ಇಬ್ರಾಹಿಂ ಶಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜೇಶ್ವರ: ಮಂಜೇಶ್ವರ ಸಿರಾಜುಲ್ ಹುದಾ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಇಬ್ರಾಹಿಂ ಶಾಹಿದ್ ಎಚ್ 2025–26 ಶೈಕ್ಷಣಿಕ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ವೆಬ್‌ಪೇಜ್ ಡಿಸೈನಿಂಗ್ ವಿಭಾಗದಲ್ಲಿ ವಿಜಯ ಸಾಧಿಸಿ. ಇದೀಗ ಈ ಪೋರ ಕೇರಳ ರಾಜ್ಯ ಮಟ್ಟದ ಐಟಿ ಫೇರ್ ಗೆ ಆಯ್ಕೆಗೊಂಡಿದ್ದಾನೆ. ಮಂಜೇಶ್ವರ ಚೌಕಿ ನಿವಾಸಿ, ಸಮಾಜ ಸೇವಕ ಹಾಗೂ ದೃಶ್ಯ ಮಾಧ್ಯಮ ಕ್ಯಾಮರಾಮ್ಯಾನ್ ಮೊಹಮ್ಮದ್ ಹನೀಫ್ ಶಾರ್ಜಾ ಹಾಗೂ ಕದೀಜಾ ದಂಪತಿಗಳ ಪುತ್ರನಾದ ಇಬ್ರಾಹಿಂ ಶಾಹಿದ್, ಬಾಲ್ಯದಿಂದಲೇ ತಾಂತ್ರಿಕ ಕ್ಷೇತ್ರದ ಮೇಲೆ…

Read More
error: Content is protected !!