Avatar

Rashmitha Acharya

ಧರ್ಮಸ್ಥಳ ಕೇಸ್: ಮಹತ್ವದ ಹಂತಕ್ಕೆ ತನಿಖೆ; ನಾಲ್ವರಿಗೆ ನೋಟೀಸ್

ಧರ್ಮಸ್ಥಳ : ಮಹತ್ವದ ಹಂತಕ್ಕೆ ತನಿಖೆ; ನಾಲ್ವರಿಗೆ ನೋಟೀಸ್ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಕೇಸ್ ನ ತನಿಖೆ ಚುರುಕಾಗಿದ್ದು ಮಹತ್ವದ ಹಂತ ತಲುಪಿದೆ. ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.ದೂರುದಾರ ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದೆ. ಇದರಲ್ಲಿ ಮುಂದೆ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದೆ ಎನ್ನಲಾಗಿದೆ. ಈ ವಿಚಾರದಲ್ಲಿ ಎಸ್.ಐ.ಟಿ ಕಚೇರಿಯಲ್ಲಿ…

Read More

ಭಾರತೀಯ ನರ್ಸ್‌ಗೆ ಸಿಂಗಾಪುರದಲ್ಲಿ ಜೈಲು ಶಿಕ್ಷೆ

ಸಿಂಗಾಪುರ: ಡೆಹ್ರಾಡೂನ್ ಮೂಲದ 39 ವರ್ಷದ ಭಾರತೀಯ ನರ್ಸ್, ಇಲಿಪಿ ಶಿವ ನಾಗು, ಸಿಂಗಾಪುರದ ಪ್ರತಿಷ್ಠಿತ ರಾಫೆಲ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈತನಿಗೆ ಒಂದು ವರ್ಷ, ಎರಡು ತಿಂಗಳು ಜೈಲು ಶಿಕ್ಷೆ ನೀಡಲಾಗಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, ಈ ಘಟನೆ ಕಳೆದ ಜೂನ್ 18 ರಂದು ನಾರ್ತ್ ಬ್ರಿಡ್ಜ್ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂತ್ರಸ್ತ ವ್ಯಕ್ತಿ ತನ್ನ ಅಜ್ಜನನ್ನು ಭೇಟಿಗಾಗಿ ಆಸ್ಪತ್ರೆಗೆ ಬಂದಿದ್ದಾಗ,…

Read More

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ

ಬೆಂಗಳೂರು: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ ಜೋಡಿಗೆ ಅಭಿನಂದನೆ ತಿಳಿಸಲಾಗಿದೆ….

Read More

GST ಕಡಿತ ಜನತೆಗೆ ಖುಷಿ ನೀಡಿದ್ರೆ ಐವನ್, ಪದ್ಮರಾಜ್ ಗೆ ಏಕೆ ಹೊಟ್ಟೆಕಿಚ್ಚು ? ಅರುಣ್ ಶೇಟ್ ಪ್ರಶ್ನೆ

ಮಂಗಳೂರು:”ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿ’ಸೋಜಾ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ,” ಎಂದು ಅರುಣ್ ಶೇಟ್ ವ್ಯಂಗ್ಯವಾಡಿದರು. ಅವರು ಜಿಲ್ಲಾ ಬಿಜಿಪಿ ಕಚೇರಿಯಲ್ಲಿ ಕರೆದ…

Read More

ಉದ್ಯಮಿ, ಪೂಂಜಾ ಟ್ರಾವಲ್ಸ್ ನ ಮಾಲೀಕ ಸಂಜಯ್ ಶೆಟ್ಟಿ ನಿಧನ

ಉಡುಪಿ: ಹೋಟೆಲ್ ಉದ್ಯಮಿ, ಪೂಂಜಾ ಟ್ರಾವಲ್ಸ್ ನ ಮಾಲೀಕ ಸಂಜಯ್ ಶೆಟ್ಟಿ ಕೊರಂಗ್ರಪಾಡಿ (65) ಅವರು ಅಲ್ಪಕಾಲದ ಅಸ್ವೌಖ್ಯದಿಂದ ಗುರುವಾರ (ಅ.23) ನಿಧನ ಹೊಂದಿದರು‌. ಕೊರಂಗ್ರಪಾಡಿ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಹಾಗೂ ಬೈಲೂರು ಮಹಿಷಮರ್ದಿನಿ ಶಾಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಅಲ್ಲದೆ, ಮಾರ್ಪಳ್ಳಿ, ಕೊರಂಗ್ರಪಾಡಿ, ಬೈಲೂರು ಪ್ರದೇಶದಲ್ಲಿ ಸಾಮಾಜಿಕ ಕಾರ್ಯಗಳ ಹೆಸರುವಾಸಿಯಾಗಿದ್ದರು. ಅವರು ಒರ್ವ ಪುತ್ರ, ಪತ್ನಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Read More

ಅಮೃತ ಪ್ರಕಾಶ ಪತ್ರಿಕೆ 45ನೇ ಸರಣಿ ಕೃತಿ ಬಿಡುಗಡೆ

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ಸ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರ ಕಥಾ ಪುಸ್ತಕ ಕನ್ನಡ, ಇಂಗ್ಲೀಷ್, ಅರೆಭಾಷೆ ಮತ್ತು ತಮಿಳು…

Read More

ಕೇಸ್ ಇದ್ದವರ ಜತೆ ತಿರುಗಾಡಿದ್ರೆ ನಿಮಗೆ ತೊಂದರೆ: ಮಂಗಳೂರು ಪೊಲೀಸ್‌ ಕಮಿಷನ‌ರ್ ಸುಧೀರ್ ರೆಡ್ಡಿಯವರಿಂದ ಎಚ್ಚರಿಕೆ……!

ಮಂಗಳೂರು: ಈಗಾಗಲೇ ಪ್ರಕರಣದಲ್ಲಿ ಭಾಗಿಯಾದವರ ಜತೆ ಯಾವುದೇ ಪ್ರಕರಣ ಇಲ್ಲದವರು ತಿರುಗಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ. ಸರಿಯಾಗಿ ಕೇಳಿಸಿದಂತೆ ಕಾಣುತ್ತಿಲ್ಲ. ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಜತೆ ತಿರುಗಾಡುವವರಿಗೂ ತೊಂದರೆ ಆಗಲಿದೆ. ಇಲ್ಲ ನಾವು ತಿರುಗುತ್ತೇವೆ. ನಮ್ಮ ಇಷ್ಟ ಎಂದು ನೀವು ಬಯಸಿದರೆ ನಮಗೆ ಸಮಸ್ಯೆ ಇಲ್ಲ. ನೀವು ಮಾಡುವುದು ನೀವು ಮಾಡಿ, ನಾವು ಮಾಡುವುದು ನಾವು ಮಾಡುತ್ತೇವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀ‌ರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Read More

ನವಂಬರ್ 4ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು “ಗೋ-ಕುಟೀರ”ದ ಭೂಮಿ ಪೂಜೆಗೆ ಗೋ-ಸಂಕಲ್ಪದ ಸಂಭ್ರಮ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ- ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಸಂಜೆ ಗಂಟೆ 4:00ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾಸರಗೋಡು ಗೋ- ಕುಟೀರದ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ. ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನೋತ್ಸವವನ್ನು…

Read More

ಶಬರಿಮಲೆಯ ಅಯ್ಯಪನ ದರ್ಶನ ಪಡೆದ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು

ತಿರುವನಂತಪುರಂ, ಅ. 22  ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರದಿಂದ ಸಂಜೆ 6:20ರ ಸುಮಾರಿಗೆ ತಿರುವನಂತಪುರಂಕ್ಕೆ ಆಗಮಿಸಿದ ಮುರ್ಮು ಅವರಿಂದು ಹೆಲಿಕಾಪ್ಟರ್ ಮೂಲಕ ಕೇರಳದ ಪ್ರಮಾಡಂ ಇನ್‌ಡೋರ್ ಸ್ಟೇಡಿಯಂಗೆ ಬಂದಿಳಿದರು…

Read More

ಶೌರ್ಯ ವಿಪತ್ತು ನಿರ್ವಾಹಣಾ ಘಟಕದ ಸದಸ್ಯರಿಂದ -ಮುರತ್ತಣೆ ಮಸಣ ಹಾಗೂ ಸುತ್ತು ಮುತ್ತಲಿನ ಸ್ಥಳದ ಸ್ವಚ್ಛತಾ ಕಾರ್ಯ

ಮಂಜೇಶ್ವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ. ಸಿ. ಟ್ರಸ್ಟ್ (ರಿ )ಮಂಜೇಶ್ವರ ಸುಂಕದಕಟ್ಟೆ ವಲಯದ ಶೌರ್ಯ ವಿಪತ್ತು ನಿರ್ವಾಹಣಾ ಘಟಕದ ಸದಸ್ಯರಿಂದ ಮುರತ್ತಣೆ ಮಸಾಣ ಹಾಗೂ ಸುತ್ತು ಮುತ್ತಲಿನ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಿದರು.

Read More
error: Content is protected !!