Avatar

Rashmitha Acharya

11 ತಿಂಗಳ ಮಗು ನೀರಿನ ಟಬ್ ಗೆ ಬಿದ್ದು ಸಾವು !

ಬೆಂಗಳೂರು: ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಬಾಲಕಿಯನ್ನು ಖುಷಿ ಎಂದು ಗುರುತಿಸಲಾಗಿದೆ. ಚನ್ನಪಟ್ಟಣದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಶಂಷಾದ್ ಕೆಲಸ ಮುಗಿಸಿಕೊಂಡು ಮನೆಗೆ ಬಂದ ನಂತರ ತೀವ್ರ ಬಾಯಾರಿಕೆಯಿಂದ ಪತ್ನಿ ಮುಸ್ಕಾನ್ ಅವರ ಬಳಿ ಕುಡಿಯಲು ನೀರು ಕೇಳಿದ್ದರು. ಪತಿಗಾಗಿ ನೀರು ತರಲು ಮುಸ್ಕಾನ ಅಡುಗೆ ಮನೆಗೆ ತೆರಳಿದ್ದಾಗ, ಮನೆಯೊಳಗೆ ಆಟವಾಡುತ್ತಿದ್ದ ಮಗು ಖುಷಿ ಟಬ್‌ನಲ್ಲಿದ್ದ ನೀರಿನೊಳಗೆ ಬಿದ್ದಿದೆ….

Read More

ಕಾರ್ಕಳ: ಯುವಕನ ಆತ್ಮಹತ್ಯೆ ಪ್ರಕರಣ; ವಿಧಿವಿಜ್ಞಾನ ವಿಶ್ಲೇಷಣೆಗೆ ಮೊಬೈಲ್ ಫೋನ್ ರವಾನೆ

ಉಡುಪಿ, ಅ. 21 : ಕಾರ್ಕಳದ ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ನಡೆದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತನ ಮೊಬೈಲ್ ಫೋನ್ ಅನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. “ತನಿಖಾ ತಂಡವು ಫೋನ್ ದತ್ತಾಂಶ, ಬ್ಯಾಂಕ್ ವಹಿವಾಟುಗಳು ಮತ್ತು ಚಾಟ್ ದಾಖಲೆಗಳ ಆಧಾರದ ಮೇಲೆ ಆರೋಪಿಯನ್ನು ಪ್ರಶ್ನಿಸಿದೆ. ಆರೋಪಿಯ ಡಿಜಿಟಲ್ ಸಾಧನಗಳನ್ನು ಸಹ ಪರಿಶೀಲಿಸಲಾಗಿದೆ. ಇದರ ಜೊತೆಗೆ, ಮೃತನ ಸ್ನೇಹಿತರು, ಸಂಬಂಧಿಕರು ಮತ್ತು ಆಪ್ತರನ್ನೂ ವಿಚಾರಣೆ…

Read More

ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ ನಿಂದ ಹಿರಿಯರ ಅನಾಥಶ್ರಮದಲ್ಲಿ ದೀಪಾವಳಿ ಸಂಭ್ರಮ

ಮಂಗಳೂರು 20: ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ , ದಕ್ಷಿಣ ಕನ್ನಡ ಜಿಲ್ಲೆ – ಉಡುಪಿ ಜಿಲ್ಲೆ, ಮಂಗಳೂರು ವಲಯದ ವತಿಯಿಂದರಜತ ಸಂಭ್ರಮ 2025-26 ಅಂಗವಾಗಿ ಲಲಿತಾ ಗೀತಾ ಅನಾಥಶ್ರಮದಲ್ಲಿ ಹಿರಿಯರ ಜೊತೆ ದೀಪಾವಳಿ ಹಬ್ಬದ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಿಕರ್ಣಕಟ್ಟೆಯ ಬಳಿಯ ಲಲಿತಾ ಗೀತಾ ಅನಾಥಶ್ರಮ ಸಂಸ್ಥೆಯು ಸುಮಾರು 4 ವರ್ಷಗಳಿಂದ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಈ ಸಂಸ್ಥೆಯ ಮುಖ್ಯಸ್ಥೆಯಾದ ಗೀತಾ ಅವರು ಮೂರು ನಿರಾಶ್ರಿತರಿಂದ ಸರಿಪಳ್ಳ ಪರಿಸರದಲ್ಲಿ ಆರಂಭ ಮಾಡಿದ ಈ ಅನಾಥಶ್ರಮ, ಈಗ…

Read More

ಗೂಡುದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಮೃತ ಪಟ್ಟ ಕುಂಬಳೆಯ ಯುವಕ

ಕುಂಬಳೆ: ದೀಪಾವಳಿ ಅಂಗವಾಗಿ ಮನೆಯ ಚಾವಡಿಯಲ್ಲಿ ಗೂಡು ದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ, ಯುವಕನೋರ್ವ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾದ ಘಟನೆ ನಿನ್ನೆ ರಾತ್ರಿ ಕುಂಬಳೆ ಬಳಿಯ ಪುತ್ತಿಗೆಯಲ್ಲಿ ನಡೆದಿದೆ. ಪುತ್ತಿಗೆ ನಿವಾಸಿ ಬಡಗಿ ವೃತ್ತಿ ಮಾಡುತ್ತಿರುವ ನಾಗೇಶ್ ಆಚಾರ್ಯ – ಹೇಮಲತಾ ದಂಪತಿ ಪುತ್ರ ರಾಜೇಶ್ ಆಚಾರ್ಯ (37) ಮೃತಪಟ್ಟ ಯುವಕನಾಗಿದ್ದಾನೆ. ಮರದ ಕೆತ್ತನೆ ಕೆಲಸ ಮಾಡುತ್ತಿರುವ ರಾಜೇಶ್ ಆಚಾರ್ಯರು ದೀಪಾವಳಿ ಅಂಗವಾಗಿ ಕೆಲಸ ಮುಗಿಸಿ ಮನೆಗೆ…

Read More

ಆಟೋ ಚಾಲಕನ ಮೇಲೆ ಹಲ್ಲೆ: ಇಬ್ಬರು ಸಂಚಾರಿ ಪೊಲೀಸರ ಅಮಾನತು

ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಸಂಚಾರ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಎಂಬವರು ಸಮವಸ್ತ್ರ ಧರಿಸದೆ ಆಟೋ ಚಲಾಯಿಸುತ್ತಿದ್ದಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಠಾಣೆಯ ಎಎಸ್ಐ ಚಿದಾನಂದ ರೈ ಹಾಗೂ ಸಿಪಿಸಿ ಶೈಲ ಎಂ.ಕೆ. ಅವರು ಕೈಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರು. ಆದರೆ ಚಾಲಕ ಆಟೋ ನಿಲ್ಲಿಸದೇ ವೇಗವಾಗಿ ಚಲಾಯಿಸಿದ ಕಾರಣ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆಯಾಗಿದೆ. ಈ ವೇಳೆ ಪೊಲೀಸರಿಬ್ಬರೂ ಆತನನ್ನು ಹಿಂಬಾಲಿಸಿ…

Read More

‘ಮಹಾಭಾರತ ಧಾರಾವಾಹಿ ಖ್ಯಾತಿಯ ಕರ್ಣನ ಪಾತ್ರಧಾರಿ ನಟ ಪಂಕಜ್ ಧೀರ್ ಇನಿಲ್ಲ

ಮುಂಬೈ: ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಧಾರಾವಾಹಿಯಲ್ಲಿ ಯೋಧ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15 ರಂದು ನಿಧನರಾದರು. ಅವರ ಹಳೆಯ ಸ್ನೇಹಿತ, ಸಹೋದ್ಯೋಗಿ ಮತ್ತು ಸಿನ್ಮಾ ಸದಸ್ಯ ಅಮಿತ್ ಬೆಕ್ಸ್ ಈ ಸುದ್ದಿಯನ್ನು ದೃಢಪಡಿಸಿದರು.ಮೂಲಗಳ ಪ್ರಕಾರ, ಪಂಕಜ್ ಕೆಲವು ಸಮಯದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಎಂದು ವರದಿಯಾಗಿದೆ. ಕೆಲವು ತಿಂಗಳ ಹಿಂದೆ ಆ ಕಾಯಿಲೆ ಮತ್ತೆ ಕಾಣಿಸಿಕೊಂಡಿತು, ಇದರಿಂದಾಗಿ ಅವರು ತೀವು ಅಸ್ವಸ್ಥರಾದರು. ಅವರು ಪ್ರಮುಖ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.

Read More

ಬೇರೆ ಎಲ್ಲಾ ಕೊಡುಗೆಗಳಿಂದಲೂ ನನಗೆ ತೃಪ್ತಿ ತಂದ ಕಾರ್ಯ ಮದ್ಯವರ್ಜನಾ ಶಿಬಿರಗಳು. ಇದರಿಂದ ಲಕ್ಷಾಂತರ ಮಂದಿ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಇದು ಸಮಾಜಕ್ಕೆ ಪ್ರೇರಣೆ ನೀಡುವ ಕೆಲಸವಾಗಿದೆ- ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪುತ್ತೂರಿನಲ್ಲಿ ಹೇಳಿಕೆ

ಪುತ್ತೂರು; ಪಂಚೇಂದ್ರಿಯನ್ನು ಹತೋಟಿಯಲ್ಲಿ ಇಡುವ ಕಾರ್ಯ ಮಾಡಬೇಕಾಗಿದ್ದು, ತರಬೇತಿ ಮೂಲಕ ಇದನ್ನು ಯಶಸ್ವಿಯಾಗಿಸಬಹುದು. ಮದ್ಯ ವ್ಯಸನ ಮುಕ್ತವಾಗುವುದರಿಂದ ಸಂಸಾರಕ್ಕೆ ನೆಮ್ಮದಿ ನೀಡುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು….

Read More

ಮಿಂಚಿಪದವು ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಸಂಭ್ರಮ

ಮಂಗಳೂರು: ಕಾಸರಗೋಡು ಜಿಲ್ಲೆಯ ಮಿಂಚಿಪದವು ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಹೊಂದಿಕೊಂಡಿರುವಂತೆ ಪೂರ್ವ ದಿಕ್ಕಿನಲ್ಲಿ ನೈಸರ್ಗಿಕವಾಗಿ ಗುಹಾದ್ವಾರದ ಮೂಲಕ ನಿರಂತರವಾಗಿ ಪ್ರವಹಿಸುವ ಮಾತೃ ಸ್ವರೂಪಿಣಿಯಾದ ಮಾತೆಯ ಸನ್ನಿಧಾನವೇ ಕಾವೇರಿಯಮ್ಮನ ಪುಷ್ಕರಿಣಿ. ಇಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದಿನಾಂಕ ಅಕ್ಟೋಬರ್ 17 ರ ತುಲಾ ಸಂಕ್ರಮಣದಂದು ಅಪರಾಹ್ನ 1.46 ರ ಶುಭ ವೇಳೆಯಲ್ಲಿ ಕಾವೇರಿ ತೀರ್ಥೋದ್ಭವ ಸಂಭ್ರಮ ನಡೆಯಲಿದೆ ಎಂದು ಕಾವೇರಿಯಮ್ಮ ಬ್ರಹ್ಮಕಲಶ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಮಧುಸೂಧನ್ ಆಯರ್ ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ…

Read More

ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕ ಚಿತ್ರಕಲಾ ಶಿಕ್ಷಕರು ಕಲಾನಿಧಿ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ವಿಶೇಷ ಸಾಧನೆಗೈದ ಸಾಧಕರನ್ನು ಸಮಾಜದಲ್ಲಿ ಗುರುತಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯು “ಕಲಾನಿಧಿ” ಪ್ರಶಸ್ತಿಯನ್ನು ಪ್ರಕಟಿಸುತ್ತಾ ಬಂದಿದ್ದು ಈ ಭಾರಿ ಮೂವರು ಸಾಧಕ ಚಿತ್ರಕಲಾ ಶಿಕ್ಷಕರನ್ನು ಆಯ್ಕೆ ಮಾಡಿದ್ದು ಪ್ರಶಸ್ತಿ ಪುರಸ್ಕಾರವು ಅಕ್ಟೋಬರ್ ೧೮ ರಂದು ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಗಣೇಶ್ ಸೋಮಯಾಜಿ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು : ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ

ನವದೆಹಲಿ :ವೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಸತತ ಸರಣಿ ಗೆಲುವುಗಳೊಂದಿಗೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವರ್ಲ್ಡ್ ರೆಕಾರ್ಡ್ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿದೆ. ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. 2002 ರಿಂದ ಶುರುವಾದ ಈ ಟೆಸ್ಟ್ ಸರಣಿ ಗೆಲುವಿನ ನಾಗಾಲೋಟದೊಂದಿಗೆ ಭಾರತ ತಂಡವು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ…

Read More
error: Content is protected !!