ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರ ಮೇಳ ಉದ್ಘಾಟನಾ ಸಮಾರಂಭ.
ಅಕ್ಟೋಬರ್ 13 14 ರಂದು ನಡೆಯುವ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರ ಮೇಳ ಉದ್ಘಾಟನಾ ಸಮಾರಂಭವು ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೖಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.ಶ್ರೀ ವಾಣಿ ವಿಜಯ ಹೖಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ವಿಜಯಕುಮಾರ್ ಧ್ವಜಾರೋಹಣಗೈದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಯುತ ಜಾರ್ಜ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ವೀಪ ಪ್ರಜ್ವಲಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು ಮಂಜೇಶ್ವರ ಶಾಸಕರಾದ ಶ್ರೀಯುತ ಎ ಕೆ ಎಂ ಅಶ್ರಫ್ ಕಾರ್ಯಕ್ರಮ…