Avatar

Rashmitha Acharya

‘ಭಾರತ ಯಾರ ಮುಂದೆಯೂ ಅವಮಾನಕ್ಕೊಳಗಾಗಲು ಬಿಡಲ್ಲ’- ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ, ಅ. 03: ಭಾರತ ಯಾರ ಮುಂದೆಯೂ ಅವಮಾನಕ್ಕೊಳಗಾಗಲು ರಷ್ಯಾ ಬಿಡುವುದಿಲ್ಲ ಎಂದು ಅಮೆರಿಕಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟಾಂಗ್ ನೀಡಿದ್ದಾರೆ. ಸೋಚಿಯಲ್ಲಿ ನಡೆದ ವಾಲ್ಡೈ ಚರ್ಚಾ ಕ್ಲಬ್‌ನ ಸಮಗ್ರ ಅಧಿವೇಶನದಲ್ಲಿ ಮಾತನಾಡಿದ ಪುಟಿನ್, “ಪ್ರಧಾನಿ ನರೇಂದ್ರ ಮೋದಿ ಅವರು ಸಮತೋಲಿತ ಮತ್ತು ಬುದ್ಧಿವಂತ ನಾಯಕ. ಭಾರತವು ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೆ. ಇಲ್ಲಿ ಯಾವುದೇ ರಾಜಕೀಯ ಅಂಶವಿಲ್ಲ. ಭಾರತ ನಮ್ಮ ಇಂಧನ ಪೂರೈಕೆಗಳನ್ನು ನಿರಾಕರಿಸಿದರೆ, ಅದು ಕೆಲವು ನಷ್ಟಗಳನ್ನು ಅನುಭವಿಸುತ್ತದೆ. ಅಂದಾಜುಗಳು…

Read More

ಕಡಲ ನಗರಿಯಲ್ಲಿ ನವರಾತ್ರಿ ಸಮಾಪ್ತಿಗೆ ಕ್ಷಣಗಣೆಯ ರಾತ್ರಿ ….!!!

ಮಂಗಳೂರು: ಕರಾವಳಿಯಲ್ಲಿ ನವರಾತ್ರಿ ಸಂಭ್ರಮ ಇಂದು ರಾತ್ರಿ ಸಮಾರೋಪಗೊಳ್ಳುತ್ತಿದೆ. ನವರಾತ್ರಿ ಹಬ್ಬ, ಕುದ್ರೋಳಿ ದಸರಾ ಮತ್ತು ಉಚ್ಚಿಲ ದಸರಾಗಳು ಕರಾವಳಿಗೆ ಬಹು ಸಂಖ್ಯೆಯಲ್ಲಿ ಭಕ್ತರು, ಯಾತ್ರಿಕರನ್ನು ಆಕರ್ಷಿಸಿವೆ. ಉಡುಪಿಯ ಕೊಲ್ಲೂರು, ಮಂಗಳೂರಿನ‌ ಮಂಗಳಾದೇವಿ ಕ್ಷೇತ್ರ ಸೇರಿದಂತೆ ಸಾಂಪ್ರದಾಯಿಕ ನವರಾತ್ರಿ ಆಚರಣೆ ಜಾರಿಯಲ್ಲಿರುವ ಕ್ಷೇತ್ರಗಳಲ್ಲಿಯೂ ಭಕ್ತ ಸಂದಣಿ ಹೆಚ್ಚಾಗಿತ್ತು.ನವರಾತ್ರಿ ದೀಪಾಲಂಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಶೇಷ ಆಕರ್ಷಣೆಯಾಗಿತ್ತು. ನವರಾತ್ರಿಯಲ್ಲಿ ಶಾರದಾ ಪ್ರತಿಷ್ಟಾಪನೆ ಮಾಡಿದ ವಿವಿಧ ಮಂಡಳಿಗಳು ಶಾರದಾ ಮಾತೆ ವಿಸರ್ಜನೆಗೆ ತಯಾರಾಗಿವೆ. ಕುದ್ರೋಳಿಯಲ್ಲಿ ಲಕ್ಷಾಂತರ ಭಕ್ತರನ್ನು…

Read More

ಖಂಬದಕೋಣೆ; ಸೇತುವೆಗೆ ಡಿಕ್ಕಿ ಹೊಡೆದ ಕಂಟೈನ‌ರ್; ತಪ್ಪಿದ ಬಾರಿ ಅನಾಹುತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಸೇತುವೆಗೆ ಕಂಟೈನರ್‌ವೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.ಕಂಟೈನರ್ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಪಾರಾಗಿದೆ.ಕಂಟೈನರ್ ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದು, ಕಂಟೈನರ್‌ನಲ್ಲಿದ್ದ ಚಾಲಕ ಹಾಗೂ ಕೀನ‌ರ್ ಅಪಾಯದಿಂದ ಪಾರಾಗಿದ್ದಾರೆ.

Read More

ದಸರಾ ಹಬ್ಬದ ಸಂಭ್ರಮವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಸಮೀಕ್ಷೆಯಿಂದ ನುಂಗಿ ನೀರು ಕುಡಿದಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ದಸರಾ ಹಬ್ಬದ ಸಂಭ್ರಮವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಸಮೀಕ್ಷೆಯಿಂದ ನುಂಗಿ ನೀರು ಕುಡಿದಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಾಜ್ಯದಲ್ಲಿ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಈ ದಸರಾ ಸಂಭ್ರಮದ ಸಮಯದಲ್ಲಿ ಆರಂಭಿಸಿದ್ದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಗುಡುಗಿದರು.ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಹಬ್ಬದ ಹಿಂದೆ ಈ ಸಮೀಕ್ಷೆಯನ್ನು ನಡೆಸುವುದರ ಹಿಂದೆ ದೊಡ್ಡ ಷಡ್ಯಂತರ ಇದೆ ಎಂದರು. ಹಬ್ಬದ ಹಿನ್ನಲೆಯಲ್ಲಿ ಶಿಕ್ಷಕರಿಗೆ…

Read More

ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ 158ನೇ ಗಾಂಧೀಜಿ ಜಯಂತಿ ಆಚರಣೆ

ಮಂಜೇಶ್ವರ :ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ 158ನೇ ಗಾಂಧಿಜಿ ಜಯಂತಿಯನ್ನು ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಗಾಂಧೀ ಅಧ್ಯಕ್ಷರಾದ ಪುರುಷೋತ್ತಮ ಅರಿಬೈಲ್ ವಹಿಸಿದ್ದರು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಣೇಶ್ ಪಾವೂರು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು ಉಮ್ಮರ್ ಕುಂಹಿ ಗಾಂಧೀಜಿ ಬಗ್ಗೆ ವಿವರಣೆ ನೀಡಿದರು. S. J. ದಿವಾಕರ.ಮಹಮ್ಮದ್ ಮಜಲ್.ಸಾಂತ ರ್ ನಾಯ್ಕ್ ಕುಂಹಿ ಮೋನು. ಶಾಫಿಯ.ಜಮೀಳಾ.ವಿಕ್ಟರ್ ವೇಗಸ್.ಅಫ್ರೋಸ್ ಗಾಂಧಿ ನಗರ. ಪ್ರಾಂನ್ಸಿಸ್ ಡಿ ಸೋಜ. ಉಮ್ಮರ್ ಪಾಳಂಗಿರಿ.ಮಹ್ಮದ್…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಕರ್ನಾಟಕ ಉಪಮುಖ್ಯಮಂತ್ರಿ ಭೇಟಿ-ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು…

Read More

ಗಾಂಧೀಜಿಯವರ ತತ್ವ, ಆದರ್ಶ ಮನುಷ್ಯನಲ್ಲಿ ಮುಖ್ಯವಾಗಿ ಬೇಕು ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮಂಗಳೂರು ಮಹಾನಗರ ಪಾಲಿಕೆ , ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ಭಾರತ ಸೇವಾದಳದ ನೇತ್ರಿತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬ ಗಾಂಧಿ ಜಯಂತಿಯನ್ನು ನಗರದ ರಾಜಾಜಿ ಪಾರ್ಕ್ನನಲ್ಲಿ ಗಣ್ಯರ ಸಮ್ಮುಖದಲ್ಲಿ ಆಚರಿಸಲಾಯಿತು . ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಿ ಮಾತನಾಡಿ, ಗಾಂಧೀಜಿಯವರ ತತ್ವ, ಆದರ್ಶ…

Read More

ಉಡುಪಿ: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್, ಮಣಿಪಾಲ್, ಮತ್ತು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್ 317ಸಿ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಪ್ತಾಹದಲ್ಲಿ ಮಕ್ಕಳು, ಮಹಿಳೆಯರು, ವಯಸ್ಕರು, ಉದ್ಯೋಗಿಗಳು ಹಾಗೂ ಹಿರಿಯ ನಾಗರಿಕರನ್ನು ಎಲ್ಲರ…

Read More

ಕುದ್ರೋಳಿ ದಸರಾ ಅದ್ದೂರಿ ಶಾರದಾ ಮೆರವಣಿಗೆ ಅಕ್ಟೋಬರ್ ೨ ಕ್ಕೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ಅದ್ದೂರಿಯಾಗಿ ನಡೆಯಲಿದೆ . ಈಗಾಗಲೇ ಶೋಭಾಯಾತ್ರೆ ಗೆ ಪೂರ್ವ ಸಿದ್ದತೆಗಳು ನಡೆಸಲಾಗಿದೆ ಎನ್ನಲಾಗಿದೆ . ಸಂಜೆ 4ರಿಂದ ಶ್ರೀ ಶಾರದಾಂಬೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ನಗರದಲ್ಲಿ ಸಾಗಿಬರಲಿದೆ. ಕುದ್ರೋಳಿ ಕ್ಷೇತ್ರದಿಂದ ಹೊರಟು ಕಂಬಾರ…

Read More

ರಾಹುಲ್ ಗಾಂಧಿ ವಿರುದ್ಧ ಕೊಲೆ ಬೆದರಿಕೆ-ರಣಹೇಡಿ ಬಿಜೆಪಿ – ಸಿಪಿಎಂ ಸಖ್ಯ ಬಹಿರಂಗ – ಕಾಂಗ್ರೆಸ್

ಮಂಜೇಶ್ವರ: ಲೋಕಸಭೆಯ ವಿಪಕ್ಷ ನಾಯಕ ಶ್ರೀ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹಾರಿಸುವುದಾಗಿ ಚಾನೆಲ್ ಚರ್ಚೆಯಲ್ಲಿ ಬಹಿರಂಗ ಬೆದರಿಕೆಯೊಡ್ಡಿದ ಬಿಜೆಪಿಯ ಕೇರಳ ವಕ್ತಾರನ ವಿರುದ್ಧ ಪಿಣರಾಯಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಿಣರಾಯಿ ವಿಜಯನ್ ಹಾಗೂ ಕುಟುಂಬದ ಸಹಸ್ರ ಭಾನಗಡಿಗಳನ್ನು ಮುಚ್ಚಿ ಹಾಕಲು ಕೇಂದ್ರದ ಮೋದಿ ಸರ್ಕಾರ ಕೈ ಜೋಡಿಸಿದ ಕಾರಣ ಇಲ್ಲಿ ಪಿಣರಾಯಿ ಗೃಹ ಇಲಾಖೆಯನ್ನು ಸಂಘಿಗಳ ಕೈಗೊಪ್ಪಿಸಿದ್ದಾರೆ.ರಾಹುಲ್ ಗಾಂಧಿಯವರ ನಿರ್ಭೀತ ಹೋರಾಟಗಳು ಬಿಜೆಪಿಯ ನಿದ್ದೆಗೆಡಿಸಿವೆ. ಚಾನೆಲ್ ಚರ್ಚೆಯಲ್ಲಿ ಬಿಜೆಪಿ ವಕ್ತಾರ ಪಿಂಟು ಮಹಾದೇವ ಎಂಬ…

Read More
error: Content is protected !!