Avatar

Rashmitha Acharya

ವ್ಯಾಪಕಗೊಂಡ ಅನಧಿಕೃತ ಮರಳು ಸಾಗಾಟ : ಇತಿಹಾಸದಲ್ಲೇ ಮೊಟ್ಟ ಮೊದಲಾಗಿ ಇಬ್ಬರನ್ನು ಜಾಮೀನು ರಹಿತ ಕೇಸು ದಾಖಲಿಸಿ ಜೈಲಿಗಟ್ಟಿದ ಕುಂಬಳೆ ಪೊಲೀಸರು

ಮಂಜೇಶ್ವರ : ಮಂಜೇಶ್ವರ ಹಾಗೂ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊತ್ತ ಮೊದಲಾಗಿ ಕುಂಬಳೆ ಪೊಲೀಸರು ಮರಳು ಸಾಗಾಟ ಮಾಡುವವರ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಮರಳು ಸಾಗಾಟ ಮಾಡಲು ಉಪಯೋಗಿಸಿದ ಓಮ್ನಿ ವ್ಯಾನ್ ವಶಕ್ಕೆ ತೆಗೆಯಲಾಗಿದೆ. ಅರಿಕ್ಕಾಡಿ ನಿವಾಸಿ ಮನ್ಸೂರ್ ಅಲಿ (31) ಹಾಗೂ ಕುಂಬಳೆ ಪೆರ್ವಾಡ್ ನಿವಾಸಿ ಜುಸೈರ್ (33) ಬಂಧಿತ ಆರೋಪಿಗಳು. ಆರಿಕ್ಕಾಡಿಯಲ್ಲಿ ಅನಧಿಕೃತ ಕಡವಿನಿಂದ ಓಮ್ನಿ ವ್ಯಾನ್ ನಲ್ಲಿ 25 ಗೋಣಿ ಮರಳು…

Read More

ನೇತಾಜಿ ಬೋಸ್ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ರಿಂದ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ರಿಗೆ ಪುಸ್ತಕ ನೀಡಿ ಗೌರವ.

ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಅವರೀಗೆ ನೇತಾಜಿ ಸುಭಾಷ್ ಬೋಸ್ ಇವರ ಮೂರು ಕೃತಿಗಳನ್ನು ಬೋಸ್ ಅವರ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ಪುಸ್ತಕ ಗೌರವ ಪ್ರತಿಗಳನ್ನು ನೀಡಿ ಗೌರವ ಸೂಚಿಸಿದರು. ಲೇಖಕ ಪ್ರೊ. ಕೆ. ಈ. ರಾಧಾಕೃಷ್ಣ ಸರ್ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಿತು.

Read More

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

Read More

ಕೇಂದ್ರ-ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳಿಗೆದುರು ನಿರಂತರ ಹೋರಾಟ- ಕಾಂಗ್ರೆಸ್

ಕೇಂದ್ರದ ಮೋದಿ ಸರಕಾರ ಹಾಗೂ ಕೇರಳದ ಎಡರಂಗ ಸರಕಾರಗಳು ಜನತೆಗೆ ಕಿರುಕುಳ ನೀಡುವಲ್ಲಿ ಪರಸ್ಪರ ಸ್ಪರ್ಧಿಸುತ್ತಿದ್ದು, ಜನರ ಪ್ರತಿಭಟನೆಯ ಹಾದಿ ತಪ್ಪಿಸಲು ಮಹಿಳೆಯರನ್ನು ಮುಂದಿಟ್ಟು ಅಪವಾದ ಪ್ರಚಾರದಲ್ಲಿ ನಿರತವಾಗಿದ್ದು, ಇವುಗಳ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ, ಅದರ ಭಾಗವಾಗಿ ಗೃಹಸಂದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನತೆಯ ಆಶೀರ್ವಾದ ಬಯಸುತ್ತಿದ್ದೇವೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಶ್ರೀ ಅಶ್ರಫ್ ಮುಟ್ಟಂ ಅವರ ನಿವಾಸದಲ್ಲಿ ನಡೆದ…

Read More

ಎಡಬಿಡದೆ ಸುರಿಯುತ್ತಿರುವ ವರುಣಾರ್ಭಟ-ಕಾಸರಗೋಡಿನ ಮಧೂರು ಶ್ರೀ ಸಿದ್ದಿ ವಿನಾಯಕ ಕ್ಷೇತ್ರ ಸಂಪೂರ್ಣ ಜಲಾಮಯ

ಕಾಸರಗೋಡು: ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ವರುಣಾರ್ಭಟಕ್ಕೆ ಕಾಸರಗೋಡಿನ ಮಧೂರು ಶ್ರೀ ಸಿದ್ದಿ ವಿನಾಯಕ ಕ್ಷೇತ್ರ ಸಂಪೂರ್ಣ ಜಲಾಮಯವಾಗಿದೆ . ಈ ಮೂಲಕ ಸತತ ಮೂರನೇ ಬಾರಿಗೆ ಮಳೆಯಿಂದ ಮಧು ವಾಹಿನಿ ನದಿ ಉಕ್ಕೇರಿ ಹರಿದು ದೇವಾಲಯ ಜಲಾಮಯವಾಗಿದೆ . ಮಳೆಯಿಂದಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕೊಂಚ ಮಟ್ಟಿಗೆ ಕಿರಿಕಿರಿಯನ್ನೇ ಉಂಟು ಮಾಡಿದೆ . ಹೀಗಾಗಿ ದೇವಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖ ಕಂಡಿತ್ತು . ಆದ್ರೆ ಇದೀಗ ಮಳೆ ಆರ್ಭಟ ಕಮ್ಮಿಯಾಗಿದ್ದು ದೇವಾಲಯಕ್ಕೆ…

Read More

ಕಣ್ಣೂರು, ಕನ್ನಪುರಂ ಬಾಡಿಗೆ ಮನೆಯಲ್ಲಿ ಬಾಂಬ್ ಸ್ಪೋಟ, ಓರ್ವ ಮೃತ್ಯು

ಕಣ್ಣೂರು: ಕಣ್ಣೂರಿನ ಕನ್ನಪುರಂ ಬಾಡಿಗೆ ಮನೆಯೊಂದರಲ್ಲಿ ಬಾಂಬ್ ಸ್ಪೋಟಗೊಂಡು ವ್ಯತಿಯೋರ್ವನು ಮೃತ ಪಟ್ಟಿರುವಂತಹ ಘಟನೆಯೊಂದು ಮಧ್ಯರಾತ್ರಿ ೨ ಗಂಟೆಯ ಸುಮಾರಿಗೆ ನಡೆದಿದೆ . ಬಾಂಬು ಅಥವಾ ಸ್ಪೋಟಕ ವಸ್ತು ನಿರ್ಮಾಣದ ವೇಳೆ ಸ್ಪೋಟಗೊಂಡಿರಬೇಕು ಎಂದು ಅನುಮಾನವಿದೆ . ಭಾರೀ ಸ್ಪೋಟದ ಶಬ್ದ ಕೇಳಿ ಎಚ್ಚರಗೊಂಡು ಓಡಿ ಬ೦ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ತಂಡ, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ. ಗೋವಿ೦ದನ್ ಎ೦ಬವರ ಮಾಲಕತ್ವದ ಮನೆ ಇದಾಗಿದ್ದು ಅನೂಪ್ ಎಂಬವರಿಗೆ…

Read More

ಸ್ಕೂಟರ್ ಡಿವೈಡರ್ ಗೆ ಡಿಕ್ಕಿ : ಯುವಕನ ದಾರುಣ ಅಂತ್ಯ

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಪಚ್ಚಂಬಳ ದೀನಾರ್ ನಗರದ ಮೊಹಮ್ಮದ್ ಹಾಗೂ ಖೈರುನ್ನಿಸಾ ದಂಪತಿಗಳ ಪುತ್ರ ಈಚು ಯಾನೆ ಯೂಸುಫ್ (20) ಸಾವನ್ನಪ್ಪಿದ ದುರ್ದೈವಿ.ಅಪಘಾತ ನಡೆದ ಕೂಡಲೇ ಯುವಕನನ್ನು ಆಸ್ಪತ್ರೆಗೆ ತಲಪಿಸಿದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ.ಶವ ಶರೀರವನ್ನು ಕುಂಬಳೆ ಸಹಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಶಿರಿಯಾ ಶಾಲೆಯಲ್ಲಿ ಓಣಂ ಹಬ್ಬದಲ್ಲಿ ಪಾಲ್ಗೊಂಡು ಸ್ನೇಹಿತನೊಬ್ಬನನ್ನು ಮೊಗ್ರಾಲಿನಲ್ಲಿ ಇಳಿಸಿ ಪಚ್ಚಂಬಳಕ್ಕೆ ಮರಳುತಿದ್ದ ದಾರಿ ಮಧ್ಯೆ…

Read More

“ಬಂಟರ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ“ -ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.-ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ, ಧಾರ್ಮಿಕ ಸಭೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳೆಯದಾಗಲಿ….

Read More

ಜಿಲ್ಲಾ ನವಜೀವನ ಸಮಿತಿ ವತಿಯಿಂದ “ಕೇಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ

ಕುಂಬಳೆ ಸಮೀಪದ ಕಳತ್ತೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮಂಜೇಶ್ವರ ತಾಲೂಕು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿ.ಸಿ. ಟ್ರಸ್ಟ್(ರಿ) ಮಂಜೇಶ್ವರ ತಾಲೂಕು , ಕಳತ್ತೂರು ಶ್ರೀ ಮಹಾದೇವ ನವಜೀವನ ಸಮಿತಿ ಹಾಗೂ ಜಿಲ್ಲಾ ನವಜೀವನ ಆಶ್ರಯದಲ್ಲಿ ದ್ವಿತೀಯ ವರ್ಷದ ನವಜೀವನೋತ್ಸವದ ಅಂಗವಾಗಿ ಕೇಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮ ಇಚ್ಲಂಪಾಡಿ ಗದ್ದೆಯಲ್ಲಿ ಇತ್ತೀಚೆಗೆ ನಡೆಯಿತ್ತು . ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್…

Read More

ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬಿನ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಮೀಂಜ : ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬ್ ತಿಲಕ್ ನಗರ ಎಲಿಯಾಣ ವತಿಯಿಂದ 4ನೇ ವರ್ಷದ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು.ಬೆಳಗ್ಗೆ 6 ಗಂಟೆಗೆ ಗಣಪತಿ ಪ್ರತಿಷ್ಠೆ ಗಣಪತಿ ಹವನ ನಡೆದು ಶ್ರೀ ಶಾಸ್ತ ಭಜನಾ ಮಂದಿರ ಚಿನಾಲದ ವತಿಯಿಂದ ಭಜನಾ ಸೇವೆ ನಡೆಯಿತು.ನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು.ನಂತರ ಸಭಾ ಕಾರ್ಯಕ್ರಮ ನಡೆಯಿತು. ಉತ್ತಮ ಕೃಷಿ ಕಾರ್ಮಿಕರಿಗೆ ನೀಡುವ ಈ ವರ್ಷದ ‘ ಸ್ಪಂದನ ಗ್ರಾಮೀಣ ಪ್ರಶಸ್ತಿ’ ಕುಂಞಿ ಪೂಜಾರಿ ಹಾಗೂ ಬಾಗಿ ದಂಪತಿಗಳಿಗೆ…

Read More
error: Content is protected !!