ಹಿರಿಯರ ಕನಸುಗಳಿಗೆ ತಣ್ಣೀರೆರಚಿದ ಛಿದ್ರ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಹೋರಾಟ- ರಮಾನಾಥ ರೈ
ಕಾಸರಗೋಡು: ವಿದೇಶಿ ಗುಲಾಮಗಿರಿಯಿಂದ ದೇಶವನ್ನು ಸ್ವತಂತ್ರಗೊಳಿಸಿದ ತ್ಯಾಗಮಯಿ ಕಾಂಗ್ರೆಸ್ ನಾಯಕರು ಕಂಡ ಶಾಂತ ಸುಂದರ ಭಾರತದ ಕನಸನ್ನು ಭಗ್ನಗೊಳಿಸಿದ ಮತೀಯ ಶಕ್ತಿಗಳ ವಿರುದ್ಧ ನೈಜ ದೇಶಪ್ರೇಮಿಗಳಾದ ಕಾಂಗ್ರೆಸಿಗರು ಸಂಧಿಯಿಲ್ಲದ ಹೋರಾಟ ನಡೆಸುವ ಮೂಲಕ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಗೊಳಿಸಲು ಶ್ರಮಿಸಬೇಕಿದೆ. ಇದರ ಜೊತೆಗೆ ಮಾದಕ ದ್ರವ್ಯ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ಧವೂ ಹೋರಾಟ ಚಾಲ್ತಿಯಲ್ಲಿಡಬೇಕು ಎಂದು ಕರ್ನಾಟಕದ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ.ರಮಾನಾಥ ರೈಯವರು ಕರೆ ನೀಡಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಕಾಂಗ್ರೆಸ್…