Avatar

Rashmitha Acharya

ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ 13ನೇ ಆರೋಪಿ ಬಂಧನ …. ! ?

ಬಂಟ್ವಾಳ, : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬಾತನ ಮೇಲಿನ ಹಲ್ಲೆ ಕರಾವಳಿಯ ಶಾಂತಿಯನ್ನೇ ಕದಡಿತ್ತು . ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13ನೇ ಆರೋಪಿಯನ್ನು ಬಂಧಿಸಿದ್ದಾರೆ.ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ…

Read More

ಸುಳ್ಯ : ಮನೆ ಮನೆಗೆ ಚುನಾವಣಾ ಪ್ರಚಾರ ಅಭಿಮಾನ

ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ನ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6ರ ಚುನಾವಣೆಯ ಪ್ರಚಾರದಲ್ಲಿ ಬಾಗಿಯಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕರಾದ ಭಾಗಿರತಿ ಮುರುಳ್ಯ, ವಾರ್ಡ್ ನಂಬರ್ 5ರ ಅಭ್ಯರ್ಥಿ ಮತ್ತು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಎನ್ ಕೆ, ವಿದ್ಯಾನಗರ…

Read More

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣಕ್ಕೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಬಳಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಭೂಮಿ ಪೂಜೆಯು…

Read More

ಉಪ್ಪಳದ ಖ್ಯಾತ ಉದ್ಯಮಿ, ಧಾರ್ಮಿಕ ಮುಂದಾಳು ಕಯ್ಯಾರು ನಿವಾಸಿ ಹರಿಶ್ಚಂದ್ರ ಹೊಳ್ಳ ನಿಧನ

ಉಪ್ಪಳ: ಕಯ್ಯಾರು ನಿವಾಸಿ ಉಪ್ಪಳದಲ್ಲಿ ಖ್ಯಾತ ಉದ್ಯಮಿ, ಧಾರ್ಮಿಕ ಮುಂದಾಳು  ಹರಿಶ್ಚಂದ್ರ ಹೊಳ್ಳ[83]  ನಿಧನರಾದರು ಶುಕ್ರವಾರ ಮಧ್ಯಾಹ್ನ ಇವರಿಗೆ ಮನೆಯಲ್ಲಿ ಹೃದಯಘಾತ ಉಂಟಾಗಿದ್ದು, ಉಪ್ಪಳದ ಖಾಸಾಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು.  ಇವರು  ಉಪ್ಪಳದಲ್ಲಿ ದೀರ್ಘಕಾಲದಿಂದ ಪೂರ್ಣಿಮಾ  ಇಂಡಸ್ತ್ರೀ ಸ್ ಇದರ ಮಾಲಕರಾಗಿದ್ದರು. ಉಪ್ಪಳ  ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರಾಗಿದ್ದರು. ಕೂಟ ಮಹಾಜಗತ್ತು ಮಂಗಲ್ಪಾಡಿ ಅಂಗಸoಸ್ಥೆಗೆ ಬೆನ್ನೆಲುಬಾಗಿದ್ದರು.  ಅಲ್ಲದೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಸಂಘ ಸಂಸ್ಥೆಗಳಿಗೆ ಉದಾರವಾಗಿ ಧನ ಸಹಾಯವನ್ನು ನೀಡುತಿದ್ದರು. ಮೃತರು ಪತ್ನಿ ಲಲಿತ, ಮಕ್ಕಳಾದ…

Read More

ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ಭಾರೀ ಮೊತ್ತದ ನಗದು ವಶ ಪಡಿಸಿದ ಮಂಜೇಶ್ವರ ಅಬಕಾರಿ

ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 20 ಲಕ್ಷದ 80ಸಾವಿರ ರೂ ನಗದನ್ನು ವಶ ಪಡಿಸಿ ಓರ್ವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಯಶೀಲ ಪುಟ್ಟಣ್ಣ ಶೆಟ್ಟಿ (52) ಎಂಬ ವ್ಯಕ್ತಿ ಬಂಧಿತ ಆರೋಪಿಯೆಂದು ಹೆಸರಿಸಲಾಗಿದೆ. ಶುಕ್ರವಾರ ಸಂಜೆ ಮಂಜೇಶ್ವರ ಅಬಕಾರಿ ಚೆಕೋಸ್ಟಿನಲ್ಲಿ ಅಬಕಾರಿ ಸರ್ಕಲ್ ಇನ್ಸೆಕ್ಟರ್ ಷಿಜಿಲ್ ಕುಮಾ‌ರ್ ನೇತೃತ್ವದಲ್ಲಿ ನಡೆಸಿದ ಬಸ್‌ ತಪಾಸಣೆಯಲ್ಲಿ ದಾಖಲೆ ರಹಿತ ನಗದು ವಶಪಡಿಸಲಾಯಿತು. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಈ…

Read More

ಜನರ ಅನುಕೂಲಕ್ಕಾಗಿ ಮೇಲ್ಸೇತುವೆ ನಿರ್ಮಿಸಿದ್ದರೂಅಪಾಯಕ್ಕೆ ಹೆದೆಗೊಟ್ಟು ಸಾಗುತ್ತಿರುವ ಪಾದಚಾರಿಗಳು

ಮಂಜೇಶ್ವರ: ನೂತನವಾಗಿ ನಿರ್ಮಾಣಗೊಂಡ ಮಂಜೇಶ್ವರದ ರಾಗಂ ಜಂಕ್ಷನ್ ರಾಷ್ಟ್ರೀಯ ಷಟ್ಪಥ ರಸ್ತೆ ಹೆದ್ದಾರಿಗಳು ದಿನದಿಂದ ದಿನಕ್ಕೆ ಅಪಾಯಕರವಾಗುತ್ತಿದೆ ಈ ರಸ್ತೆಯಲ್ಲಿ ಕಂಡುಬರುತ್ತಿರುವ ಕೆಲವ್ಲೆಂದು ದೃಶ್ಯಗಳು ಜನರಲ್ಲಿ ಆತಂಕ ಹಾಗೂ ಭಯವನ್ನು ಮೂಡಿಸುತ್ತಿವೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಮೇಲ್ಸೇತುವೆ (ಫ್ಲೈಓವರ್) ನಿರ್ಮಿಸಲಾಗಿದ್ದರೂ, ವಿದ್ಯಾರ್ಥಿಗಳು ಸುರಕ್ಷಿತವಾಗಿ ಅದನ್ನು ಬಳಸದೆ ಅಪಾಯಕರವಾದ ರೀತಿಯಲ್ಲಿ ತಡೆಗೋಡೆಗಳ ಮೇಲಿಂದ ಹಾರಿ ರಸ್ತೆ ದಾಟುತ್ತಿರುವುದು ನಿತ್ಯ ದರ್ಶನವಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ಬಳಿಯ ರೈಲ್ವೇ ನಿಲ್ದಾಣಕ್ಕೆ ತಲುಪಲು ಮಂಜೇಶ್ವರ ಗೋವಿಂದ ಪೈ ಕಾಲೇಜು ಹಾಗೂ…

Read More

ತಂಡಗಳ ಮಧ್ಯೆ ಮಾರಾಮಾರಿ: 17 ಮಂದಿ ವಿರುದ್ಧ ಕೇಸು ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯ ಉದ್ಯಾವರ ಮಾಡ ಎಂಬಲ್ಲಿ ಗುರುವಾರ ಎರಡು ತಂಡಗಳ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿ 17 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಗುರುವಾರದಂದು ಉದ್ಯಾವರ ಮಾಡ ಪರಿಸರದಲ್ಲಿ ಎರಡು ತಂಡಗಳ ಮಧ್ಯ ಪರಸ್ಪರ ಘರ್ಷಣೆ ನಡೆದಿದೆ. ಇದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿದ ತಂಡಗಳನ್ನು ಚದುರಿಸಿದ್ದಾರೆ. ಈ ಸಂದರ್ಭ ಉದ್ಯಾವರ ಬಿ.ಎಸ್‌.ನಗರ ನಿವಾಸಿ ಮೊಹಮ್ಮದ್ ಬಿಲಾಲ್…

Read More

ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ,ದ್ವಿಚಕ್ರ ವಾಹನಕ್ಕೆ ಡಿಕ್ಕಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದು,ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.‌ಕಲ್ಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂಬಾತನಿಗೆ ಲಾರಿ ಡಿಕ್ಕಿಯಾಗಿದೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್ .ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಚಾಲಕ ಅಬ್ದುಲ್‌ ನೂರ್ ಖಾಜಿ ಎಂಬಾತ ನೆಹರುನಗರದಲ್ಲಿರುವ ಅನಧಿಕೃತ ‌ಕ್ರಾಸ್ ನಲ್ಲಿ ಬಂದಿದ್ದಲ್ಲದೆ ರಾಂಗ್ ಸೈಡ್ ನಲ್ಲಿ ಚಲಾಯಿಸಿಕೊಂಡು…

Read More

ತಿರೂರಂಗಾಡಿ ನಿವಾಸಿ ಮೆಟ್ರೋ ರೈಲು ಸೇತುವೆಯಿಂದ ಜಿಗಿದು ಸಾವು

ಕೊಚ್ಚಿ: ಮೆಟ್ರೋ ರೈಲು ಸೇತುವೆಯ ಮೇಲಿಂದ ಜಿಗಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತಪಟ್ಟವರು ತಿರೂರಂಗಾಡಿ ಚುಳ್ಳಿಪ್ಪಾರ ವೀರಾಶೇರಿ ಕುಂಞಿಮೊಯ್ದೀನ್ ಅವರ ಪುತ್ರ ನಿಸಾರ್. ಈ ಘಟನೆ ತ್ರಿಪ್ಪುಣಿತುರ ವಡಕ್ಕೇಕೋಟ-ಎಸ್.ಎನ್. ಜಂಕ್ಷನ್ ಮೆಟ್ರೋ ನಿಲ್ದಾಣಗಳ ನಡುವೆ ನಡೆದಿದೆ. ಆತನನ್ನು ತೀವ್ರ ಗಾಯಗಳೊಂದಿಗೆ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹವನ್ನು ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ವಡಕ್ಕೇಕೋಟದಿಂದ ತ್ರಿಪ್ಪುಣಿತುರಾಗೆ ಟಿಕೆಟ್ ಪಡೆದ ನಂತರ ನಿಸಾರ್ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿದ್ದ. ನಂತರ ಆತ ಪ್ಲಾಟ್‌ಫಾರ್ಮ್‌ನಿಂದ ಹೊರಗೆ ಓಡಿ ಹೋಗಿದ್ದಾನೆ. ಇದನ್ನು…

Read More

ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ ಜೀಪನ್ನು ಹತ್ತಿಸಲು ಪ್ರಯತ್ನಿಸಿದಾಗ…

Read More
error: Content is protected !!