Avatar

Rashmitha Acharya

ಕುಡ್ತಮುಗೇರು: ಕಾರು ಡಿಕ್ಕಿ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ

ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ‌ ಗಾಯಗೊಂಡ ಘಟನೆ ಆ.೮ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ‌ವಾಹನದ‌ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು‌ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು…

Read More

ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಇನ್ನಿಲ್ಲ

ಉಡುಪಿ: ಕಾಂತಾರ ಚಿತ್ರದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು.ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, ‘ಕಾಂತಾರ’ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ ಪ್ರಸಿದ್ದರಾಗಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರು ಎರಡು ದಿನಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಮುಸುಕುದಾರಿಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣದ ದೂರುದಾರ ತನಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣದ ಬೆನ್ನಲ್ಲೇ ದೂರುದಾರ ತನ್ನ ಮೇಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ತನಗೆ ಗನ್ ಮ್ಯಾನ್ ಭದ್ರತೆ ಒದಗಿಸುವಂತೆ ಮನವಿ ಮಾಡಿದದಗಿ ದೂರುದಾರ ಪರ ವಕೀಲರು ಎಸ್ ಐಟಿ ತಂಡಕ್ಕೆ ಲಿಖಿತ ಮನವಿ ಮಾಡಿದ್ದಾರೆ.ಶೋಧಕಾರ್ಯ ಮುಕ್ತಾಯವಾದ ಬಳಿಕವೂ ತನಗೆ ಗನ್ ಮ್ಯಾನ್ ಭದ್ರತೆ ಕಲ್ಪಿಸುವಂತೆ ಎಸ್ ಐಟಿ ಎಸ್‌ ಪಿ ಜಿತೇಂದ್ರ ದಯಾಮ್…

Read More

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ಹಿಂದೂ ರುದ್ರಭೂಮಿಗಳ ನವೀಕರಣ, ಸ್ತ್ರೀ ಸಬಲೀಕರಣ,…

Read More

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ

ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…

Read More

ಆ. 9ರಂದು ಉಡುಪಿಯಲ್ಲಿ “ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ನವತಿ ಜನ್ಮವರ್ಧಂತಿ ಉತ್ಸವ”

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್ ಮಾಹಿತಿ ಉಡುಪಿ: ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಡಾ. ಎಚ್ ಪ್ರಭಾಕರರಿಗೆ ಅಭಿನಂದನ ಸನ್ಮಾನ ಸಮಾರಂಭ ನಡೆಯಿತು.ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹೆಲ್ತ್ ಕೇರ್ ಎಕ್ಸೆಲೆನ್ ಸ್ ಪ್ರಶಸ್ತಿ ಸ್ವೀಕರಿಸಿದ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ…

Read More

ನಿಟ್ಟೆ ಗ್ರಾಮದಲ್ಲಿ ಶ್ರೀ ಗಂಧದ ಮರ ಕಳವು ಪ್ರಕರಣ – ಸೊತ್ತು ಸಹಿತ ಮೂವರ ಅಂಧರ್

ಕಾರ್ಕಳ : ಜೂನ್ 16ರಂದು ರಾತ್ರಿ ಸಮಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ತೋಟದಲ್ಲಿದ್ದ ಶ್ರೀಗಂಧದ ಮರವನ್ನು ಕಳವು ಮಾಡಿರುವ ಕೇಸ್ ಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹೇನೊಟ್ಟುವಿನ ದಿನೇಶ್ ಶೆಟ್ಟಿಗಾರ್ ಎಂಬುವವರಿಗೆ ಸೇರಿದ್ದ 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಗೈದಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂ.17ರಂದು ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್. ಮತ್ತು…

Read More

ಮಂಜೇಶ್ವರವನ್ನು ತ್ಯಾಜ್ಯ ಮುಕ್ತಗೊಳಿಸುವ ನಡುವೆ ವಿಕೃತ ಮೆರೆಯುವಕೆಲವು ಅವಿವೇಕಿಗಳ ದುಸ್ಸಾಹಸಕ್ಕೆ ತ್ಯಾಜ್ಯವು ಅಸಹ್ಯಪಡುವಂತಾಗಿದೆ

ಮಂಜೇಶ್ವರ : ಮಂಜೇಶ್ವರವನ್ನು ಸಂಪೂರ್ಣವಾಗಿ ತ್ಯಾಜ್ಯ ಮುಕ್ತವನ್ನಾಗಿಸಲು ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ನಾಗರಿಕರು ಹರ ಸಾಹಸ ಪಡುತ್ತಿರುವ ಮಧ್ಯೆ ಕೆಲವು ವಿಕೃತ ಮನಸ್ಸುಗಳು ಸಾರ್ವಜನಿಕ ವಲಯದಲ್ಲಿ ತ್ಯಾಜ್ಯಗಳನ್ನು ಬಿಸಾಡುತ್ತಿರುವ ಕೃತ್ಯವನ್ನು ಮುಂದುವರಿಸುತ್ತಲೇ ಇದೆ.ಸಾರ್ವಜನಿಕ ವಲಯಗಳಲ್ಲಿ ನಿಯಮ ವಿರೋಧಿಯಾಗಿ ತ್ಯಾಜ್ಯ ಬಿಸಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅದರಲ್ಲಿ ಹೊಸದಾಗಿ ಉದ್ಯಾವರ-ಮಾಡ ಅಂಗನವಾಡಿ ಪ್ರದೇಶದ ಘಟನೆಯೊಂದು ಖಂಡನಾರ್ಹ ಬೆಳವಣಿಗೆಯಾಗಿದೆ. ಇದೀಗ ಉದ್ಯಾವರ ಮಾಡ ಅಂಗನವಾಡಿ ಪರಿಸರದಲ್ಲಿ ಅಗೋಸ್ಟ್ 3 ರಂದು ಸಂಜೆ 5 ಗಂಟೆಯ ಸುಮಾರಿಗೆ ಕಾರಿನ ನಂಬ್ರ ಪ್ಲೇಟಿಗೆ…

Read More

ಬದಿಯಡ್ಕ : ಲೈಂಗಿಕ ಸಂಬಂಧ ಬೆಳೆಸಿ ಅಪ್ರಾಪ್ತೆಗೆ ಹುಟ್ಟಿದ ಮಗುವನ್ನು ಅನಾಥ ಮಂದಿರಕ್ಕೆ ಹಸ್ತಾಂತರಿಸುವ ಯತ್ನದ ನಡುವೆ-ಆರೋಪಿಯ ಬಂಧನ

ಬದಿಯಡ್ಕ : ಲೈಂಗಿಕ ಸಂಬಂಧ ಬೆಳೆಸಿ 17ರ ಹರೆಯದ ಅಪ್ರಾಪ್ತೆಗೆ ಹುಟ್ಟಿದ ಮಗುವನ್ನು ಅನಾಥ ಮಂದಿರಕ್ಕೆ ಹಸ್ತಾಂಂತರಿಸುವ ಯತ್ನದ ನಡುವೆ ಆರೋಪಿಯನ್ನು ಬಂಧಿಸಲಾಗಿದೆ. ಯುವತಿ ಮತ್ತು ಯುವಕ ಇಬ್ಬರೂ ಬದಿಯಡ್ಕ ಠಾಣಾ ವ್ಯಾಪ್ತಿಗೆ ಸೇರಿದವರಾಗಿದ್ದಾರೆ. ಪ್ಲಸ್ ಟು ಶಿಕ್ಷಣ ಪಡೆದ ಬಳಿಕ ಮನೆಯಲ್ಲೇ ಇದ್ದ ಯುವತಿಯನ್ನು ತಾಯಿಯ ಸಂಬಂಧಿಕನೇ ಆದ ಮೂರು ಮಕ್ಕಳ ತಂದೆಯಾದ 40ರ ವ್ಯಕ್ತಿ ನಿರಂತರ ದೌರ್ಜನ್ಯ ನಡೆಸಿ ಗರ್ಭಿಣಿಯನ್ನಾಗಿಸಿದನೆನ್ನಲಾಗಿದೆ.ಯುವತಿ ಗರ್ಭಿಣಿ ಯಾದ ಬಳಿಕ ಶಂಕೆ ಬಾರದಿರಲು ಸುಳ್ಳು ಹೇಳಿ ಆಸ್ಪತ್ರೆ ಬದಲಾಯಿಸುತ್ತಾ ಚಿಕಿತ್ಸೆ…

Read More

ಕಾಸರಗೋಡು ಜಿಲ್ಲೆಗೆ ಬುಧವಾರ ರೆಡ್ ಅಲರ್ಟ್ – ಎಲ್ಲಾ ಶೈಕ್ಷಣಿಕ ಸಂಸ್ಥೆಗೂ ರಜೆ ಘೋಷಣೆ

ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಬಬುಧವಾರ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ಶಾಲಾ ಕಾಲೇಜು ಸಹಿತ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಕೇಂದ್ರ ಹವಾಮಾನ ಇಲಾಖೆ ಬಬುಧವಾರ ಕಾಸರಗೋಡು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯಾಗಲೀ ರಜೆ ಪ್ರಕಟಿಸಿದರು. ಸಾರ್ವಜನಿಕ ಸುರಕ್ಷೆಯ ಮುನ್ನೆಚ್ಚರಿಕೆ ವಹಿಸಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಪ್ರಕಟಿಸಲಾಗಿದೆ. ಇದರಂತೆ ಕೇಂದ್ರೀಯ ವಿದ್ಯಾಲಯ, ಮದ್ರಸ, ಟ್ಯೂಷನ್ ಸೆಂಟರ್ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಇದು ಅನ್ವಯವಾಗಿದೆ. ಈ ಹಿಂದೆ ಘೋಷಿಸಲ್ಪಟ್ಟ…

Read More
error: Content is protected !!