Avatar

Rashmitha Acharya

272 .16 ಲೀಟರ್ ವಿದೇಶಿ ಮದ್ಯ ವಶ ಪಡಿಸಿದ ಅಬಕಾರಿ ಇಲಾಖೆ ಪರಾರಿಯಾದ ಆರೋಪಿಗಳು

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 272.16 ಲೀಟರ್ ಕರ್ನಾಟಕ ನಿರ್ಮಿತ ವಿದೇಶ ಮದ್ಯವನ್ನು ಕಾಸರಗೋಡು ಚೌಕಿ, ಸಿಪಿ.ಸಿ.ಆ‌ರ್.ಐ. ಪರಿಸರದಿಂದ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಕ್ಸೆಸ್ ಎನ್ಫೋರ್ಸ್ ಮೆಂಟ್ & ಆಂಟಿ ನರ್ಕೋಟಿಕ್ ಸ್ಪೆಶಲ್ ತಂಡ ಹಾಗೂ ಎಕ್ಸೆಸ್ ಸರ್ಕಲ್ ಆಫೀಸ್ ತಂಡದ ನೇತೃತ್ವದಲ್ಲಿ ಕುಂಬಳೆ ಆರಿಕ್ಕಾಡಿ ಬಳಿ ವಾಹನ ತಪಾಸಣೆ ನಡೆಸುವ ವೇಳೆ ಕಾರೊಂದು ನಿಲ್ಲಿಸದೆ ಪರಾರಿಯಾಗಿತ್ತು. ಈ ಕಾರನ್ನು ಬೆನ್ನಟ್ಟಿ ಚೌಕಿ ಪರಿಸರದಿಂದ ಹಿಡಿದಾಗ ಕರ್ಣಾಟಕ ನಿರ್ಮಿತ ವಿದೇಶ ಮದ್ಯ ವಶಪಡಿಸಲಾಗಿದೆ. ಕಾರಿನಲ್ಲಿದ್ದವರು ಓಡಿ ಪರಾರಿಯಾದರು. ಅಸಿಸ್ಟೆಂಟ್…

Read More

ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿ

ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿಯನ್ನು ಶನಿವಾರ ನಡೆಸಿತು.ಧರಣಿಯನ್ನು ದೇಶೀಯ ಅಧ್ಯಾಪಕ ಪರಿಷತ್ ನ ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಕೆ ರಾಜೇಶ್ ಉದ್ಘಾಟಿಸಿ ಸರಕಾರ ಅಧ್ಯಾಪಕ ವರ್ಗವನ್ನು ಕಡೆಗಣಿಸುತ್ತಿದೆ. ನ್ಯಾಯವಾಗಿ ಸಿಗಬೇಕಾದ ಸವಲತ್ತುಗಳನ್ನು ಕೊಡದೆ ಶೋಷಣೆ ಮಾಡುತ್ತಿದೆ. ಅಧ್ಯಾಪಕರ ಬದುಕಿಗೆ ಭದ್ರತೆಯೇ ಇಲ್ಲದಾಗಿದೆ. ಸಾರ್ವಜನಿಕ ಶಿಕ್ಷಣ ರಂಗವನ್ನು ಅಧಃಪತನಗೊಳಿಸಿದ ಎಡರಂಗ ಸರಕಾರದ ಕಾರ್ಯವೈಖರಿಯ ವಿರುದ್ಧ ಹೋರಾಡುವ ಸಂದರ್ಭ ಒದಗಿ ಬಂದಿದೆ ಎಂದರು.ಸಾರ್ವಜನಿಕ…

Read More

ಕುಲವನ್ ಐತಿಹ್ಯ

ಉತ್ತರ ಕೇರಳ ಭಾಗವು ಕಲೆ, ಸಂಸ್ಕೃತಿ, ಧಾರ್ಮಿಕ ಆಚಾರ ವಿಚಾರಗಳಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬರುವ ತಾಣವಾಗಿದೆ . ತಲತಲಾಂತರದ ಕಾಲದ ಹಿಂದಿನಿಂದಲೂ ಇಲ್ಲಿ ಆಚಾರಗಳು ಶ್ರೀಮಂತವಾಗಿತ್ತು , ಸಂಪ್ರದಾಯಗಳು ಹಾಸುಹೊಕ್ಕಾಗಿತ್ತು , ಧಾರ್ಮಿಕತೆಯ ಸಾರವು ಅಗಾಧವಾಗಿ ಬೇರೂರಿತ್ತು . ಮಲಬಾರ್ ಭಾಗ ಎಂದ ಕೂಡಲೇ ತಟ್ಟನೆ ನೆನಪಿಗೆ ಬರುವುದು ದೈವಾರಾಧನೆ . ಕರಾವಳಿಯದಾದಂತ್ಯ ಗುಡಿ , ದೈವಸ್ಥಾನ , ಕುಲಂ , ಕಳಗಂ , ಕಾವು ಈ ರೀತಿಯ ನಾನಾ ಕಡೆಗಳಲ್ಲಿ ದೈವಗಳು ತನ್ನ…

Read More

ಮಧೂರು ಶ್ರೀ ಕ್ಷೇತ್ರ ವಿಶೇಷ

ತುಳುನಾಡ ನೆಲೆಯಲ್ಲಿ ನೆಲೆಯಾಗಿರುವ , ಸಪ್ತ ಭಾಷಾ ಸಂಗಮ ಭುವಿಯಲ್ಲಿ ಸಿಂಗರಿಸುವ , ಮದರಿಗೆ ಒಲಿದು ಎಲ್ಲರ ಸತ್ಕರಿಸುವ , ಮಧುವಾಹಿನಿ ದಿವ್ಯ ತಟದಿ ವಿರಾಜಮಾನವಾಗಿರುವ , ಭವ್ಯ ವಾಸ್ತು ಶೈಲಿಯಲ್ಲಿ ದಿವ್ಯತೆಯ ಅನುಭೂತಿಯಿಂದ ಪಸರಿಸುವ , ಕುಂಬಳೆ ಅರಸರ ಆಡಳಿತ ಕಾಲದಿ ಜೀರ್ಣೋದ್ಧಾರಗೊಂಡಿರುವ , ಮುದದಿಂದ ಒಲಿಯುವ ಮದವೂರ ವಿಘ್ನೇಶನು ನೆಲೆಸಿರುವ , ಕಾರ್ಣಿಕದ ಪರಮೇಶ್ವರನು ಪಾಪವ ಕಳೆಯುತ್ತಿರುವ, ಭಕ್ತರ ನೆಚ್ಚಿನ ತಾಣ, ಸಾಹಿತ್ಯ ತಿರುಳಲ್ಲಿದೆ ಕ್ಷೇತ್ರ ಪುರಾಣ , ಜಯಸಿಂಹನ ಇತಿಹಾಸ ಭವ್ಯ ಕಿರಣ…

Read More

ನಟನೆಯ ಬದುಕೇಕೆ……..!?

ಮೂಗರನ್ನು ಪ್ರೀತಿಸಬಹುದು ಆದರೆ ಮೂಗರ ತರ ನಟನೆ ಮಾಡುವವರನ್ನು ಪ್ರೀತಿಸಿದರೆ ವ್ಯರ್ಥ, ಅಂಧರನ್ನು ಪ್ರೀತಿಸ ಬಹುದು ಆದ್ರೆ ಅಂಧಕಾರದಲ್ಲಿ ತೇಲಾಡುವವರು ಮೋಹಿಸಿದರೆ ಕಷ್ಟ, ಕಿವುಡರನ್ನು ಸ್ನೇಹಿಸಬಹುದು ಆದರೆ ನಾವಾಡುವ ಮಾತಿಗೆ ಕಿವಿಯಾಗದವರನ್ನು ಇಷ್ಟಪಟ್ಟು ಫಲ ಇಲ್ಲ. ಹೌದು ಸ್ನೇಹಿತರೆ ನಾವು ಒಬ್ಬರನ್ನು ಇಷ್ಟಪಡಲು ಶುರು ಮಾಡುತ್ತೇವೆ . ಅವರ ಜೊತೆ ಬಾಳಿನಲ್ಲಿ ಹೆಜ್ಜೆ ಹಾಕಬೇಕೆಂಬ ಕನಸು ಕಾಣ್ತಾ ಇರ್ತೇವೆ . ಆದರೆ ನಮ್ಮ ಕನಸುಗಳು ಕನಸಾಗಿ ಉಳಿಯುವ ಕಾಲ ದೂರವೇನು ಉಳಿದಿರುವುದಿಲ್ಲ. ಎಷ್ಟೇ ಕಷ್ಟ ಬಂದರೂ ಸ್ನೇಹವನ್ನು…

Read More

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು

ಮಂಗಳೂರು : ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ.ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಶ್ರೀ ಬೃಜೇಶ್…

Read More

ಅನಾಹುತಕ್ಕೆ ಆಹ್ವಾನಿಸುತ್ತಿರುವ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ ಪಾತ್

ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು ಪಾದಚಾರಿಗಳ ಅನಾಹುತಕ್ಕೆ ಆಸ್ಪದವನ್ನು ನೀಡುವಂತಿದೆ. ದಿನವೂ ಕಿಕ್ಕಿರಿದು ನೆರೆದು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯವನ್ನು ಹೆಚ್ಚಿಸುತ್ತಿದೆ . ಸ್ಥಳೀಯರು ಹೇಳುವಂತೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೆಲವೇ ದಿನಗಳ ಹಿಂದೆ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ದರೂ ಅಧಿಕಾರಿಗಳು ಯಾವುದೇ ಕ್ರಮವನ್ನು…

Read More

ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷಚೇತನರ ಸಮಸ್ಯೆ ಪರಿಹಾರಕ್ಕೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ!

ಕುಂದಾಪುರ: ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ವಿಶೇಷಚೇತನರ ಪ್ರಮಾಣಪತ್ರ ಮಾಡಿಸಲು ಕುಂದಾಪುರ ಮತ್ತು ಬೈಂದೂರಿನ ಬೇರೆ ಬೇರೆ ಕಡೆಗಳಿಂದ ಬಂದಿದ್ದ ವಿಶೇಷಚೇತನರು ಪ್ರಮುಖ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯವಾಗದ ಕಾರಣ ಪ್ರಮಾಣಪತ್ರ ಸಿಗದೆ ನಿರಾಶರಾಗಿ ವಾಪಸ್ ಆದ ಘಟನೆ ಇತ್ತೀಚಿಗೆ ನಡೆದಿದ್ದು ಕೂಡಲೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರನ್ನು ನೇಮಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರಮುಖೇನ ಒತ್ತಾಯಿಸಿದ್ದಾರೆ….

Read More

ಪೊಲೀಸರ ಮಿಂಚಿನ ಕಾರ್ಯಕ್ಕೆ ತಗಲು ಹಾಕಿಕೊಂಡ ಮಾಸ್ಟರ್ ಮೈಂಡ್ ರೋಹನ್ ಸಾಲ್ಡಾನ ಬಂಧನ

ಮಂಗಳೂರು: ಸಾಲ ಕೊಡುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳಿಂದ 200 ಕೋಟಿಗೂ ಅಧಿಕ ಹಣವನ್ನು ವಂಚಿಸಿದ ಆರೋಪಿ ರೋಹನ್ ಸಲ್ಡಾನಾ (45) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ತನ್ನ ಐಷಾರಾಮಿ ಬಂಗಲೆಯಲ್ಲಿ ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಂಗಲೆಯಲ್ಲಿ ಗುಪ್ತ ಕೊಠಡಿ (ಹೈಡ್ ಔಟ್ ರೂಮ್) ಇರುವುದು ಕೂಡ ಪತ್ತೆಯಾಗಿದೆ. ರೋಹನ್ ಸಲ್ಡಾನಾ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು, ಭೂ ವ್ಯವಹಾರ ಮತ್ತು ಉದ್ಯಮದಲ್ಲಿ…

Read More

ಕುಂಜತ್ತೂರು ವಿದ್ಯಾನಿಕೇತನ ಶಾಲೆಯಲ್ಲಿ ಗುರು ಪೂಜೆ

ಮಂಜೇಶ್ವರ : ಕುಂಜತ್ತೂರು ವಿದ್ಯಾನಿಕೇತನ ಶಾಲೆಯಲ್ಲಿ ಗುರು ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಾಲ ಗೋಕುಲದ ಮಕ್ಕಳಿಂದ ಗುರು ಪೂರ್ಣಿಮೆ ಪ್ರಯುಕ್ತ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ನಿರಂಜನ್ ತುಮಿನಾಡು ಭೌದಿಕ್ ನೀಡಿದರು. ಮುಖ್ಯ ಅತಿಥಿಗಳಾಗಿ ಸರಸ್ವತಿ ಟೀಚರ್, ವಿಶ್ವನಾಥ ಶೆಟ್ಟಿ ಹಾಗೂ ಸುರೇಶ್ ಶೆಟ್ಟಿ ಭಾಗವಹಿಸಿದರು. ಸ್ವಾತಿ ನಿತಿನ್ ರೈ ಅಧ್ಯಕ್ಷತೆ ವಹಿಸಿದ್ದರು.

Read More
error: Content is protected !!