Avatar

Rashmitha Acharya

ಪಕ್ಷದ ಕಾರ್ಯಾಲಯ ಕಾರ್ಯಕರ್ತರ ದೇವಾಲಯ-ರವೀಶ ತಂತ್ರಿ ಕುಂಟಾರು

ಸುಂಕದಕಟ್ಟೆ : ಕಾರ್ಯಕರ್ತರ ಶ್ರಮಕ್ಕೆ ಬೆಲೆ ಸಿಗುತ್ತೆ, ಕಾರ್ಯಕರ್ತರು ನಾಯಕರಾಗಿ ಬೆಳೆಯಬೇಕು, ಸಂಘಟನೆ ನೆ ಕಾರ್ಯಕರ್ತರು ಗಳಿಗೆ ಪಕ್ಷದ ಕಾರ್ಯಾಲಯ ದೇವಾಲಯದಂತೆ ಪವಿತ್ರ ವಾದದ್ದು ಎಂದು ವರ್ಕಾಡಿ ಪಂಚಾಯತ್ ಬಿಜೆಪಿ ಪಕ್ಷದ ನೂತನ ಕಾರ್ಯಾಲಯ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶ್ರೀ ರವೀಶ್ ತಂತ್ರಿ ಕುಂಟಾರು ಹೇಳಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಧ್ವಜಾರೋಹಣ ಗೈದರು. ಭಾಸ್ಕರ್ ಪೊಯ್ಯೇ ಅಧ್ಯಕ್ಷತೆ ವಹಿಸಿದ್ದರು.ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ,…

Read More

ಸನಾತನ ಸಂದೇಶ ಯಾತ್ರೆಗೆ ಸ್ವಾಗತ ಸಮಿತಿ ರೂಪಿಕರಣ.

ಅಕ್ಟೋಬರ್ 7 ರಿಂದ 21 ರವರೆಗೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ನಡೆಯಲಿರುವ ಸನಾಧನ ಸಂದೇಶ ಯಾತ್ರೆಗೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲೆಯ ಸ್ವಾಗತ ಸಮಿತಿ ರಚನೆ ಸಭೆಯು ಮಾರ್ಗ ದರ್ಶಕ ಮಂಡಲ ಕೇರಳ ಘಟಕದ ನೇತೃತ್ವದಲ್ಲಿ ವಿವಿಧ ಸಾಮಾಜಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಇತರ ಸಂಸ್ಥೆಗಳ ಸಹಯೋಗದೊಂದಿಗೆ ಚಿನ್ಮಯ ಸಿಬಿಸಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಚಿನ್ಮಯ ಕೇರಳ ಘಟಕದ ಮುಖ್ಯಸ್ಥ ಶ್ರೀ ವಿವಿಕ್ತಾನಂದ ಸರಸ್ವತಿ ಸ್ವಾಮಿ ವಹಿಸಿದ್ದರು ಮತ್ತು ಎಡನೀರು ಮಠಾದಿಶ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ…

Read More

ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ವಾಚನ ಪಕ್ಷಾಚರಣೆ ಸಮಾರೋಪ, ಐ. ವಿ .ದಾಸ್ ಸಂಸ್ಕರಣೆ

ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ನೇತೃತ್ವದಲ್ಲಿ ಯುವಶಕ್ತಿ ಫ್ರೆಂಡ್ಸ್ ಗ್ರಂಥಾಲಯ ಸುಭಾಷ್ ನಗರದ ಸಹಯೋಗದೊಂದಿಗೆ ಜಿ.ಯಚ್. ಎಸ್ .ಎಸ್ ಬೇಕೂರಿನಲ್ಲಿ ತಾಲೂಕು ಮಟ್ಟದ ವಾಚನ ಪಕ್ಷಾಚರಣೆಯ ಸಮಾರೋಪ ಹಾಗೂ ಐವಿ ದಾಸ್ ರ ಸಂಸ್ಕರಣೆಯು ನಡೆಯಿತು. ರಾಜ್ಯ ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿಯಾಗಿದ್ದ ನ್ಯಾಯವಾದಿ ಪಿ ಅಪ್ಪು ಕುಟ್ಟನ್ ರವರು ಉದ್ಘಾಟಿಸಿದರು. ಕೇರಳ ರಾಜ್ಯ ಲೈಬ್ರರಿಯ ಕಾರ್ಯ ಯೋಜನೆಗಳ ಬಗ್ಗೆ ಸವಿವರವಾಗಿ ತಿಳಿಸಿದರು. ರಾಜ್ಯ ಲೈಬ್ರರಿ ಕೌನ್ಸಿಲ್ ಸದಸ್ಯ ಅಹಮ್ಮದ್ ಹುಸೈನ್ ಮಾಸ್ಟರ್ ಸಂಸ್ಕರಣೆ ನಡೆಸಿದರು….

Read More

ಕತ್ತಿಗೆ ಹಗ್ಗ ಸಿಕ್ಕಿಕೊಂಡ ಹಸುವನ್ನು ಪ್ರಾಣ ರಕ್ಷಿಸಿದ -ಅಗ್ನಿಶಾಮಕದಳ ಸಿಬ್ಬಂದಿ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತನ 7ನೇ ವಾರ್ಡ್ ವ್ಯಾಪ್ತಿಯ ಚೌಕಿಯಲ್ಲಿ, ಕಳೆದ ಹತ್ತು ದಿನಗಳಿಂದ ಕತ್ತಿಗೆ ಹಗ್ಗ ಸಿಕ್ಕಿಕೊಂಡು ನೋವನ್ನು ಸಹಿಸಲಾರದೆ ನಾಡಿನ ಜನತೆಯನ್ನು ನಡುಕಿಗೆ ಒಳಪಡಿಸುವಂತಹ ಸ್ಥಿತಿಯಲ್ಲಿ ನರಳುತ್ತಿದ್ದ ಹಸುವನ್ನು, ಸ್ಥಳೀಯರು ಹಾಗೂ ಅಗ್ನಿಶಾಮಕದಳ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಯಿತು. ಕಳೆದ 10 ದಿವಸದಿಂದ ಜೀವನ್ಮರಣದೊಂದಿಗೆ ಹೋರಾಡುತಿದ್ದ ಹಸುವಿನ ಹತ್ತಿರ ಕೂಡಾ ಸುಳಿಯಲು ಸಾಧ್ಯವಾಗದ ಸ್ಥಿತಿ ಎದುರಾಗಿತ್ತು. ನಿರಂತರವಾಗಿ ಸುರಿಯುತಿದ್ದ ಮಳೆಯಲ್ಲಿ ಒದ್ದೆಯಾಗುತ್ತಿರುವುದನ್ನು ನೋಡಿ ಅದನ್ನು ಅಲ್ಲಿಂದ ರಕ್ಷಣೆ ಮಾಡಲು ಮುಂದಾಗುವಾಗ ಹೆದರುತಿದ್ದ ಹಸು…

Read More

ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ಇಬ್ಬರಿಗೆ ಮೂರು ತಿಂಗಳ ಸಜೆ -ತೀರ್ಪು ಪ್ರಕಟಿಸಿದ ನ್ಯಾಯಾಲಯ

ಕಾಸರಗೋಡು : ಡೆಪ್ಯೂಟಿ ತಹಶೀಲ್ದಾರ್ ರನ್ನು ತಡೆದು ಆಕ್ರಮಿಸಿ ಹಲ್ಲೆಗೈದ ಕೇಸಿನಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರ ವಿರುದ್ಧ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷಾ ತೀರ್ಪಿಗೆ ಜಿಲ್ಲಾ ನ್ಯಾಯಾಲಯ ಅನುಮೋದನೆ ನೀಡಿದೆ. ಮೂರು ತಿಂಗಳ ಸಜೆ ಸಹಿತ 20ಸಾವಿರ ರೂ ದಂಡ ವಿಧಿಸಿ ಕಾಸರಗೋಡು ಪ್ರಥಮದರ್ಜೆ ನ್ಯಾಯಾಲಯ ಶಿಕ್ಷೆ ವಿಧಿಸಿತು. ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ಆದೇಶಿಸಲಾಗಿದೆ. ಶಾಸಕ ಎಕೆಎಂ ಅಶ್ರಫ್ ಹೊರತಾಗಿ ಬಶೀರ್ ಅಬ್ದುಲ್ಲ ಕಾಜ, ಕಾಯಿಂಞಿ…

Read More

ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿ-ಅಪಘಾತದಲ್ಲಿ ಇಬ್ಬರು ಗಂಭೀರ

ಮಂಜೇಶ್ವರ : ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕನ ಕೈಗೆ ಕಬ್ಬಿಣದ ರಾಡ್ ತೂರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಗಾಯಗೊಂಡ ಪಳ್ಳಿಕರ ಮೌವ್ವಲೆಯ ಶೆಬಾಬ್ (24), ಫಯಾದ್ (28) ಎಂಬವರನ್ನು ಕುಂಬಳೆ ಜಿಲ್ಲಾ ಸಹಕಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 7.30ರ ಸುಮಾರಿಗೆ ಕುಂಬಳೆ ಜುಮಾ ಮಸೀದಿ ಬಳಿ ಸಂಭವಿಸಿದೆ. ಪಳ್ಳಿಕೆರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್‌ನ ಹೊರಗೆ ಬಂದು ನಿಂತಿದ್ದ…

Read More

‘ತರವಾಡು ‘ತುಳು ಸಿನಿಮಾದ ಟೀಸರ್ ಬಿಡುಗಡೆ

ಮಂಗಳೂರಿನ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಉಮೇಶ್ ಪಡುಬಿದ್ರೆ ನಿರ್ಮಾಣ ದ ಶರತ್ ಶೆಟ್ಟಿ ನಿರ್ದೇಶನ ದಲ್ಲಿ ಶೋಭಾ ಶೆಟ್ಟಿ ಬ್ಯಾನರ್ ಹಾಗೂ ಪ್ರೊಡಕ್ಷನ್ ನಲ್ಲಿ ನಿರ್ಮಾಣ ವಾದ ‘ತರವಾಡು ‘ತುಳು ಸಿನಿಮಾದ ಟೀಸರ್ ಜೂನ್ 29ರಂದು ಮದ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಾಯಿತು. ಇನ್ನು ಈ ಚಿತ್ರದಲ್ಲಿ ಶೋಧನ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇನ್ನು ಈ ಟೀಸರ್ ಬಿಡುಗಡೆಗೆ ಮುಖ್ಯ ಅತಿಥಿಗಳಾಗಿ ಸಂತೋಷ್ ಶೆಟ್ಟಿ,ಡಿ.ಕೆ ಶೆಟ್ಟಿ, ವಿಠ್ಠಲ್ ಶೆಟ್ಟಿ,ವಿಜಯ ಕುಮಾರ್ ಕೊಡಿಯಾಲಬೈಲು,ಪ್ರಕಾಶ್…

Read More

ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ -ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಆಯ್ಕೆ

ಸುರತ್ಕಲ್: ಬಂಟರ ಸಂಘ (ರಿ.) ಸುರತ್ಕಲ್ ಇದರ 2025 – 27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ…

Read More

“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ “

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾಕೇಂದ್ರ ಜಲಿಗುಡ್ಡೆ ಇದರ ಹಾಗೂ ಬಾಲಿಕಾಶ್ರಮ ಕಂಕನಾಡಿ ಇಲ್ಲಿನ ಮಕ್ಕಳಿಗಾಗಿ“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ ” ಎಂಬ ಸಮಯೋಜಿತ ಕಾರ್ಯಕ್ರಮವನ್ನು ತಾ. 22.6.2025 ನೇ ರವಿವಾರಬಾಲಿಕಾಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಥಮಿಕ ಶಾಲಾ ಬಾಲಕಿಯರಿಗಾಗಿ ರಾಮಾಯಣ ಮತ್ತು ಮಹಾಭಾರತ ಅಲ್ಲದೆ ಪುರಾಣಗಳ ಬಗ್ಗೆ ಸುಮಾರು 50 ಕ್ಕೂ ಅಧಿಕ ರಸಪ್ರಶ್ಣೆ ಯನ್ನು ಕೇಳಲಾಗಿ ಸಮರ್ಪಕವಾಗಿ ಮಕ್ಕಳು ಪ್ರಶ್ಣಾನುಸಾರ ಉತ್ತರ ನೀಡಿದರು. 60 ಕ್ಕೂ ಹೆಚ್ಚು ಬಾಲಕಿಯರು ಈ ರಸಪ್ರಶ್ಣೆಯಲ್ಲಿ…

Read More

ಭಾರೀ ಗಾಳಿಗೆ ಭಾರೀ ಗಾತ್ರದ ಮಾವಿನ ಮರ ಧಾರಾಶಾಯಿ

ಐನೂರು ವರ್ಷಗಳ ಇತಿಹಾಸ ಸಾರುವ ಪಾವೂರು ಪೊಯ್ಯ “ಕಟ್ಟೆಜಾತ್ರೆ” (ದೊಂಪದ ಜಾತ್ರೆ) ನಡೆಯುವ ಬೃಹತ್ ‘ಮಾವಿನ ಮರ’ ಮಧ್ಯಾಹ್ನ ಬೀಸಿದ ಭಾರಿ ಗಾಳಿಗೆ ಧಾರಾಶಾಯಿ, ಮಂಜೇಶ್ವರ: “ಕಟ್ಟೆ ಜಾತ್ರೆ” (ದೊಂಪದ ಜಾತ್ರೆ) ನಡೆಯುವ ಇತಿಹಾಸ ಸಾರುವ ಕಟ್ಟೆಯ ಬೃಹತ್ ಮಾವಿನ ಮರವೊಂದು ಇಂದು ಅಪರಾಹ್ನ 3 ಗಂಟೆಗೆ ಬೀಸಿದ ಭಾರಿ ಗಾಳಿಗೆ ಧಾರಾಶಾಯಿಯಾದ ಘಟನೆ ಮಂಜೇಶ್ವರ ಪಾವೂರಿನಲ್ಲಿ ನಡೆದಿದೆ. ಇಲ್ಲಿನ ಪೊಯ್ಯ ಶ್ರೀ ಚಾಮುಂಡಿ ಬಂಟ ಪರಿವಾರ ದೈವಗಳ ಆದಿಸ್ಥಳದ ಕಟ್ಟೆಯಲ್ಲಿರುವ ಬೃಹತ್ ಮಾವಿನ ಮರವೊಂದು ಮಧ್ಯಭಾಗದಿಂದಲೇ…

Read More
error: Content is protected !!