Avatar

Rashmitha Acharya

ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ -ಡಾ.ಭಗವಾನ್ ಬಿ.ಸಿ. ಶ್ಲಾಘನೆ

ಮಂಗಳೂರು : ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಭಗವಾನ್ ಬಿ.ಸಿ. ಶ್ಲಾಘಿಸಿದ್ದಾರೆ.ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಆಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ಆರಂಭಿಸಿರುವ ಹೈ ಪ್ರಿಸಿಶನ್ ಲೇಸರ್ ಆಂಜಿಯೋಪ್ಲಾಸ್ಟಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಯುವ ಜನರಲ್ಲಿ ಹೆಚ್ಚುತ್ತಿದೆ.ಇದಕ್ಕೆ ನಮ್ಮ ಆಹಾರ ಪದ್ಧತಿ, ಜೀವನ ಪದ್ಧತಿ, ವಂಶ ಪಾರಂಪರ್ಯವಾಗಿ ಬಂದಿರುವ ಕೆಲವು ಕಾರಣಗಳಿವೆ….

Read More

ತೀಯಾ ಸಮುದಾಯದ ಅಭಿವೃದ್ಧಿಗಾಗಿ ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡಬೇಕು : ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ

ಮಂಗಳೂರು: ತೀಯಾ ಸಮುದಾಯದ ಅಭಿವೃದ್ಧಿಗಾಗಿ ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡಬೇಕು ಎಂಬುದು ಸೇರಿದಂತೆ ತೀಯಾ ಸಮುದಾಯದ ವಿವಿಧ ಬೇಡಿಕೆಗಳನ್ನು ಡಿ.3ರಂದು ಮಂಗಳೂರು ವಿವಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಗೆ ಸಲ್ಲಿಸಲಾಗುವುದು ಎಂದು ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ ತಿಳಿಸಿದರು. ಅವರು ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ವರ್ಕಳದ ಶಿವಗಿರಿ ಮಠದ ನೇತೃತ್ವದಲ್ಲಿ ಹಾಗೂ ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮಾ ಗಾಂಧಿಜಿ…

Read More

ಮಂಗಳೂರಿನ ಚಿನ್ನದ ವ್ಯಾಪರಿಗೆ ವಂಚಿಸಿದ ಅಂತರ್ ರಾಜ್ಯ ವಂಚಕನ ಬಂಧನ: 240 ಗ್ರಾಂ ಚಿನ್ನ ಜಪ್ತಿ.

ಮಂಗಳೂರು: ದಿನಾಂಕ 21.11.2025 ರಂದು ಸಂಜೆ ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯು, ದಿನಾಂಕ: 22-11-2025 ರಂದು ಬಿಜೈ ಕಾಫಿಕಾಡ್ ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್ ನಲ್ಲಿ ತಾನು ಆಫೀಸ್ ತೆರೆಯಲ್ಲಿದ್ದು ,ಅಲ್ಲಿಗೆ ಬರುವ ಗೆಸ್ಟ್ ಗಳಿಗೆ ಚಿನ್ನದ ಬಿಸ್ಕೆಟ್ ನೀಡಲು ಇದೆ ಆ ಕಾರಣ 10 ಗ್ರಾಂ ತೂಕದ 24 ಚಿನ್ನದ ಬಿಸ್ಕಿಟ್ ಗಳು ಬೇಕು ಎಂದು ಬಿಸ್ಕಿಟ್ ಗಳ ಡಿಸೈಜ್ ಸೆಲೆಕ್ಟ್…

Read More

ಶ್ರೀ ಕೃಷ್ಣ ಶಿವಕೃಪಾ ನೇತೃತ್ವದ ಭಾರತಾಂಭ ತಂಡಕ್ಕೆ ಪ್ರಥಮ ವಾರ್ಷಿಕ- ನಾಳೆ ಮಧೂರಿನಲ್ಲಿ ಸಂಭ್ರಮಾಚರಣೆ

ಮಂಜೇಶ್ವರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗತವೈಭವದ 100 ನೇ ವರ್ಷಾಚರಣೆ ಮಾಡುತ್ತಿರುವ ಸುಸಂದರ್ಭದಲ್ಲಿ “ದೇಶಪ್ರೇಮ, ದೇವ ಭಕ್ತಿಸನಾತನ ಧರ್ಮ” ಎಂಬ ಧೈಯದೊಂದಿಗೆ ಧಾರ್ಮಿಕ ಸಾಮಾಜಿಕ ಮುಂದಾಳು ಶ್ರೀ ಕೃಷ್ಣ ಶಿವಕೃಪಾ ಇವರ ನೇತೃತ್ವದಲ್ಲಿ ಭಾರತಾ೦ಬ ತ೦ಡ ಪ್ರಾರಂಭಿಸಲಾಗಿತ್ತು. ಇದೀಗ ಒಂದನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಹಲವಾರು ತೀರ್ಥ ಕ್ಷೇತ್ರಗಳಲ್ಲಿ ಹರಿನಾಮ ಸಂಕೀರ್ತನೆ ಮಾಡಿದ್ದಲ್ಲದೆ ತಂಡದ ಹೆಸರಿನಲ್ಲಿ ವಿವಿಧ ರೀತಿಯ ಸೇವೆಗಳನ್ನು ನಡೆಸುತ್ತಾ ಬರಲಾಗಿದೆ. ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನ.30ಕ್ಕೆ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ…

Read More

ತಮಿಳುನಾಡು – ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ :ಕೇರಳದಲ್ಲಿ ಮಳೆಯ ಮುನ್ಸೂಚನೆ

ಚೆನ್ನೈ: ತಮಿಳುನಾಡು, ಪುದುಚೇರಿ, ಅಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ಯಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ. ನವೆಂಬರ್ 30ರಂದು ದಿತ್ತಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ದಿತ್ಯಾ ಚಂಡಮಾರುತ ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿದ್ದು ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ…

Read More

ಭಗವದ್ಗೀತೆ ನಮಗೆ ಶಾಂತಿ ಹಾಗೂ ಸತ್ಯ(ಧರ್ಮ)ದ ಸ್ನಾಪನೆಯ ಬಗ್ಗೆ ವಿವರಿಸುವುದಲ್ಲದೆ, ಅತ್ಯಾಚಾರಿಗಳ ಅಂತ್ಯ ಅವಶ್ಯಕ ಎಂದು ಶ್ರೀಕೃಷ್ಣನು ಸಾರಿದ್ದಾನೆ : ಕೃಷ್ಣ ನಗರಿಯಲ್ಲಿ ಪ್ರಧಾನಿ ಮೋದಿ ಅದ್ಬುತ ಮಾತು

ಉಡುಪಿ:ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿ ಭರ್ಜರಿ ರೋಡ್ ಶೋ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಿದರು .ಆದಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ…

Read More

ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸಿದ ಮೂವರು ಲೋಕಾಯುಕ್ತ ಪೊಲೀಸರ ಗಾಳಕ್ಕೆ …. !

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್‌ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಕೃಷ್ಣ ಮೂರ್ತಿ ಸರ್ವೇಯರ್ ರಾಜು ಬಿ.ಕೆ ADLR ಧನಶೇಖರ್ serve Superviouser ತನ್ನ ಬಾಕಿ ಇರುವ ಸಂಬಳದ…

Read More

ಅಕ್ರಮ ಹೊಯ್ಗೆ ಸಾಗಾಟ: ಎಫ್‌ಐಆರ್ ದಾಖಲು

ಮಂಗಳೂರು:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಕಂಕನಾಡಿ ನಗರದ ಠಾಣೆಯ ಪೊಲೀಸರು ಅಡ್ಯಾರ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಮತ್ತಾತನಿಗೆ ಜಯಣ್ಯ ಯಾನ ಶೇಖರ್ ಅಡ್ರ್ರಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುದು ಗ್ರಾಮದ ಅಮ್ಮಮ್ಮಾರ್ ಹೌಸ್ ನಿವಾಸಿ ಮುಹಮ್ಮದ್ ಇಕ್ಯಾಲ್ (48) ಬಂಧಿತ ಚಾಲಕ. ಮರಳು ತರಲು ಸೂಚಿಸಿದ್ದ ಜಯಣ್ಣ ಯಾನ ಶೇಖ‌ರ್ ಅಡ್ಯಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬುಧವಾರ ಬೆಳಗ್ಗೆ, 10ಕ್ಕೆ ಅಡ್ಯಾರ್ ಕಟ್ಟೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರು….

Read More

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ-ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಮಂಗಳೂರು:ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು…

Read More

ಬೆಸ್ತರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು!

ಉಡುಪಿ: ಗಿಲ್‌ನೆಟ್ ಬೆಸ್ತರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ ಉದ್ದದ ಈ ಮೀನು 350 ಕೆಜಿ ತೂಕವನ್ನು ಹೊಂದಿದೆ. ಈ ಮೀನು ಕೆ.ಜಿ.ಗೆ 70ರೂ.ನಂತೆ ಕೇರಳದ ಮೀನು ವ್ಯಾಪಾರಸ್ಥರಿಗೆ ಮಾರಾಟವಾಗಿದೆ. ಮಲೆನಾಡು ಮತ್ತು ಕೇರಳದಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ ಎನ್ನುತ್ತಾರೆ…

Read More
error: Content is protected !!