Avatar

Rashmitha Acharya

ಸ್ಕೂಟರಿನ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರಿನಿಂದ ಬಿದ್ದು ಗಂಭೀರ ಗಾಯ

ಮಂಗಳೂರು : ಸ್ಕೂಟರಿನ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರಿನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಬಳಿ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಕಾನಾ ಬಳಿ ಈ ಘಟನೆ ನಡೆದಿದೆ. ಸ್ಕೂಟರಿನಿಂದ ಮಹಿಳೆ ಬೀಳುವ ದೃಶ್ಯ ಹಿಂದೆ ಇದ್ದ ಬಸ್ಸಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬಸ್ಸನ್ನು ನಿಲ್ಲಿಸಿ ಸ್ಕೂಟರಿನಿಂದ ಬಿದ್ದ ಮಹಿಳೆಯನ್ನ ಬಸ್ ಚಾಲಕ ಆಸ್ಪತ್ರೆಗೆ ಕೊಂಡೊಯ್ದರು.ಮೊಯಿದೆ ಎಂಬವರು ಮಾನವೀಯತೆ ಮೆರೆದ ಬಸ್ಸಿನ ಚಾಲಕ.ಕಾನಾ ಬಳಿ ಮಗ ಮತ್ತು ಅಮ್ಮ ಸ್ಕೂಟರಿನಲ್ಲಿ ಹೋಗುವ ಸಂದರ್ಭ ಈ ಘಟನೆ…

Read More

ರೋಲ್ಡ್ ಗೋಲ್ಡ್ ಗ್ಯಾಂಗ್ ಅಂಧರ್ …. !

ಮಂಗಳೂರು :ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಓರ್ವ ತಲೆಮರೆಸಿಕೊಂಡಿದ್ದಾನೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್ ಮತ್ತು ಮಿಸ್ಟಾ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ಮಿಯಾಝ್, ಮಂಚಿಲದ ಝಹೀಮ್ ಅಹ್ಮದ್ ರನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಹೆಜಮಾಡಿಯ ನೌಫಾಲ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ತೊಕ್ಕೊಟ್ಟು ಕೇಂದ್ರ…

Read More

ಪ್ರಧಾನಿ ಮೋದಿ ಸ್ವಾಗತಕ್ಕೆ ಉಡುಪಿ ಶ್ರೀಕೃಷ್ಣ ಮಠ ಸಂಪೂರ್ಣ ಸಿದ್ದ ; ಪುತ್ತಿಗೆ‌ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ಧತೆ ಪೂರ್ಣಗೊಂಡಿದೆ ಎಂದು ಉಡುಪಿ ಪರ್ಯಾಯ ಪುತ್ತಿಗೆ‌ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.ಉಡುಪಿ ಶ್ರೀಕೃಷ್ಣ ಮಠಕ್ಕೆ ನಾಳೆ, ಶುಕ್ರವಾರ ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ‘ಮಧ್ಯಾಹ್ನ 12 ಗಂಟೆಗೆ ಪ್ರಧಾನಿಯವರು ಕೃಷ್ಣಮಠಕ್ಕೆ ಬರಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು ಬಳಿಕ ಕನಕನ…

Read More

ನ.30ರಂದು ರೋಟರಿ ಮಂಗಳೂರು ಸೆಂಟ್ರಲ್ನಿಂದ ರೋಟರಿ ಚಿಣ್ಣರ ಉತ್ಸವ , ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ

ಮಂಗಳೂರು:ರೋಟರಿಯ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ರೋಟರಿ ಮಂಗಳೂರು ಸೆಂಟ್ರಲ್, ರೋಟರ್ಯಾಕ್ಟ್, ಮಂಗಳೂರು ಸಿಟಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ’25ನೇ ವಾರ್ಷಿಕ ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ನ.30ರಂದು ಬೆಳಗ್ಗೆ 9:00 ಗಂಟೆಗೆ ನಗರದ ಉರ್ವದ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರೋಟರಿ ಸಭಾಪತಿ ಡಾ.ಬಿ.ದೇವದಾಸ ರೈ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಒಂದು ದಿನದ ಕ್ರೀಡಾ ಸ್ಪರ್ಧಾಕೂಟ ಮತ್ತು ಮನೋರಂಜನಾ ಉತ್ಸವದಲ್ಲಿ ಜಿಲ್ಲೆಯ ವಿವಿಧ…

Read More

ಸಾರಿಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ -ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲು

ಮಂಜೇಶ್ವರ : ಸಾರಿಗೆ ಬಸ್ಸಿನಲ್ಲಿ ಸಂಚರಿಸುತಿದ್ದ ವಿದ್ಯಾರ್ಥಿನಿಗೆ ನಿರ್ವಾಹಕ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯನ್ನು ಇತರ ಪ್ರಯಾಣಿಕರ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದಾರಿ ಮಧ್ಯೆ ಕೆಳಗಿಳಿಸಿರುವುದಾಗಿ ವಿದ್ಯಾರ್ಥಿನಿ ದೂರಿದ್ದಾಳೆ. ಮಂಗಳವಾರ ಬೆಳಿಗ್ಗೆ ಬಂದ್ಯೋಡ್ ನಲ್ಲಿ ಈ ಘಟನೆ ನಡೆದಿದೆ.ಗಡಿ ಪ್ರದೇಶದಲ್ಲಿರುವ ಕಾಲೇಜೊಂದರಲ್ಲಿ ಅಂತಿಮ ಬಿ ಸಿ ಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಬಂದ್ಯೋಡ್ ನಿಂದ ಕರ್ನಾಟಕ ಸಾರಿಗೆ ಬಸ್ಸು ನೋಂದಣಿ ಸಂಖ್ಯೆ ಕೆ ಎ 19 ಎಫ್ 3421 ಬಸ್ಸಿಗೆ ಹತ್ತಿದ್ದಾಳೆ. ಇಂತಹ ಪ್ರಯಾಣದ…

Read More

ನ.28 ಕ್ಕೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ತನಕ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ‌ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ…

Read More

ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ಅನಾರೋಗ್ಯ ಪೀಡಿತ ಯುವತಿ ಆತ್ಮಹತ್ಯೆ

ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ ಮೃತಳ ಅಕ್ಕ ಗೀತಾ ಪಿ. ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡ್ಡಪ್ಪ ರೈ ಅವರು 20 ವರ್ಷಗಳ ಹಿಂದೆ ಕುಟುಂಬದಿಂದ ದೂರವಾಗಿದ್ದು,…

Read More

ಪಶುಗಳ ಆಕೃತಿಯನ್ನು ಹೋಲುವ ಎರಡು ಆದಿ ಕಾಲದ ಶಿಲಾ ವರ್ಣಚಿತ್ರಗಳ ಪತ್ತೆ….. !

ಕಾಸರಗೋಡು: ಎರಿಕ್ಕುಲಂ ವಲಿಯ ಪಾರಾದಲ್ಲಿ ಪೂರಕ ಶಿಲಾ ಅಧ್ಯಯನದ ವೇಳೆ, 20 ಚದರ ಮೀಟರ್ ಪ್ರದೇಶದಲ್ಲಿರುವ ‘ಕರಿಂಪರಾ’ ಬಂಡೆಯಲ್ಲಿ ಇನ್ನೂ ಎರಡು ಹೊಸ ಶಿಲಾ ವರ್ಣಚಿತ್ರಗಳು ಪತ್ತೆಯಾಗಿವೆ ಕೇರಳ ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ವೇಳೆ ಈ ಪತ್ತೆ ನಡೆದಿದೆ.ಹೊಸವಾಗಿ ಕಂಡುಬಂದಿರುವ ಚಿತ್ರಗಳು ಎಂಟುಕುಡುಕ ಮತ್ತು ಅರಿಯಟ್ಟ ಪಾರಾ ಪ್ರದೇಶಗಳಲ್ಲಿ ಕಂಡುಬರುವ ದನಗಳ ಆಕೃತಿಗಳನ್ನು ಹೋಲುತ್ತವೆ ಪ್ರಾಣಿಗಳ ಚಿತ್ರಗಳು ನೈಋತ್ಯ ದಿಕ್ಕಿಗೆ ಸಾಗುವ ರೀತಿಯಲ್ಲಿ ಕತ್ತಲ್ಪಟ್ಟಿರುವುದು ಗಮನಾರ್ಹ. ಶತಮಾನಗಳ ಹಿಂದೆ ಮಹಾರಾಷ್ಟ್ರದ ರತ್ನಗಿರಿಯಿಂದ ವಯನಾಡಿನವರಗಿನ ಕೆಂಪು…

Read More

ಸುದೀರ್ಘ 12,000 ವರ್ಷಗಳ ಬಳಿಕ ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಮುನ್ನುಗುತ್ತಿರುವ ಬೃಹತ್ ದೂದ್ ಮೋಡಗಳ ಸಾಲು !

ನವದೆಹಲಿ: ಸುಮಾರು 12,000 ವರ್ಷಗಳ ಬಳಿಕ ಇಥಿಯೋಪಿಯಾದ ಉತ್ತರ ಅಫಾರ್ ಪ್ರದೇಶದ ಹೈಲಿ ಗುಬ್ಬಿ, ಹ್ಯಾಲಾಮುಖಿ ಭಾನುವಾರ ಸ್ಫೋಟಗೊಂಡಿದ್ದು ಅದರ ಬೂದಿ ಮೋಡಗಳು ಗಂಟೆಗೆ 100-120 ಕಿಮೀ ವೇಗದಿಂದ ಭಾರತ ಸೇರಿದಂತೆ ಅನೇಕ ದೇಶಗಳತ್ತ ಸಾಗುತ್ತಿದೆ ಎಂದು ಹವಾಮಾನ ಸಂಸ್ಥೆಗಳು ಎಚ್ಚರಿಸಿಕ ನೀಡಿದೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಪೋಟದ ಪರಿಣಾಮವಾಗಿ ಉಂಟಾದ ದಪ್ಪ ಬೂದಿ ಮೋಡಗಳು ಮೊದಲು ಗುಜರಾತ್ ಪ್ರದೇಶವನ್ನು ಪ್ರವೇಶಿಸಿ ನಂತರ ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್ ಕಡೆಗೆ ಚಲಿಸಿವೆ. ಈಗಾಗಲೇ ವಿಷಕಾರಿ ಗಾಳಿಯಿಂದ…

Read More

ಸತ್ಯಸಾಯಿ ಬಾಬಾ ರ ಶತಾಬ್ದಿ ಮತ್ತು ನವಚೇತನ ಕೇರ್ ಸೆಂಟರ್ ಲೋಕಾರ್ಪಣೆ

ದೈಗೋಳಿ : ಶ್ರೀ ಸಾಯಿ ನಿಕೇತನ ಸೇವಾಶ್ರಮ ದೈಗೋಳಿಯಲ್ಲಿ ಸತ್ಯ ಸಾಯಿ ಬಾಬಾರವರ ಶತಾಬ್ದಿ ಉತ್ಸವ ಮತ್ತು ನೂತನವಾಗಿ ನಿರ್ಮಿಸಲಾದ ನವಚೇತನ ಸೆಂಟರ್ ನ ಲೋಕಾರ್ಪಣೆಯು ತಾ. 23 ಭಾನುವಾರದಂದು ನಡೆಯಿತು. ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾ ಸ್ವಾಮಿಗಳು ಕೇರ್ ಸೆಂಟರ್ ನ್ನು ಲೋಕಾರ್ಪಣೆ ಗೈದರು. ಬೆಳಗ್ಗೆ 9 ರಿಂದ ಧನ್ವಂತರಿ ಪೂಜೆ ನಡೆದು ನಂತರ ಬೃಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಮಣಿಪಾಲ…

Read More
error: Content is protected !!