VJ SHARATH BEKUR

VJ SHARATH BEKUR

ಮಂಜೇಶ್ವರ ಕೃಷಿಭವನ ಹಾಗೂ ಕಾಸರಗೋಡು ಸಿಪಿಸಿಆರ್‌ಐ (CPCRI) ಸಂಯುಕ್ತಾಶ್ರಯದಲ್ಲಿ ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ್’ ಕಾರ್ಷಿಕ ಸೆಮಿನಾರ್

ಮಂಜೇಶ್ವರ ಕೃಷಿಭವನ ಹಾಗೂ ಕಾಸರಗೋಡು ಸಿಪಿಸಿಆರ್‌ಐ (CPCRI)ಯ ಸಂಯುಕ್ತಾಶ್ರಯದಲ್ಲಿ ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ್’ ಎಂಬ ಹೆಸರಿನಲ್ಲಿ ಕಾರ್ಷಿಕ ಸೆಮಿನಾರ್ ನಡೆಯಿತು. ಈ ಕಾರ್ಯಕ್ರಮವು ಮಂಜೇಶ್ವರ ಬ್ಲಾಕ್ ಕಚೇರಿಯಲ್ಲಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೆನಾ ಮೊಂತೇರೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರ ಕೃಷಿ ಸಹಾಯಕ ನಿರ್ದೇಶಕಿ ಶ್ರೀಮತಿ ಸುಜಿತಾ ಪಿ ಎಸ್ ಮತ್ತು ಕೃಷಿ ಅಧಿಕಾರಿಯಾದ ಶ್ರೀ ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಕಾರ್ಯಕ್ರಮದಲ್ಲಿ ಕಾಸರಗೋಡು ಸಿಪಿಸಿಆರ್‌ಐನ ವಿಜ್ಞಾನಿಗಳು ಶ್ರೀಮತಿ…

Read More

ಕಾಸರಗೋಡಿನಲ್ಲಿ ಜೂನ್ 15 ಕ್ಕೆ ಭಜನಾ ಕಮ್ಮಟಕ್ಕೆ ಸಿದ್ಧತೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ವತಿಯಿಂದ ಕಾಸರಗೋಡಿನಲ್ಲಿ ಮೊಟ್ಟಮೊದಲ ಬಾರಿಗೆ ಭಜನಾ ಕಮ್ಮಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಬಗ್ಗೆ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿಸಿದ್ದತಾ ಸಭೆ ಜರಗಿತು. ಭಜನಾ ಪರಿಷತ್ ಅಧ್ಯಕ್ಷರಾದ ಡಾ. ಕೆ. ಎನ್ ವೆಂಕಟ್ರಮಣ ಹೊಳ್ಳ ಭಜನಾ ಕಮ್ಮಟದ ರೂಪು ರೇಖೆಯನ್ನು ತಯಾರಿಸಿ ಸದಸ್ಯರು ಮಾಡ ಬೇಕಾದ ಕೆಲಸಗಳ ಬಗ್ಗೆ ವಿವರಿಸಿದರು.ಜಿಲ್ಲಾ ಸಮನ್ವಯ ಅಧಿಕಾರಿ ಶ್ರೀ ಸಂತೋಷ್. ಪಿ. ಅಳಿಯೂರು ಇವರು ಮೊದಲ ಬಾರಿಗೆ ಕಾಸರಗೋಡಿನಲ್ಲಿ ನಡೆಯುವ ಈ…

Read More

ಪುತ್ತಿಗೆ ಶ್ರೀ ಧೂಮಾವತೀ ಕೋಮರಾಯ ಚಾಮುಂಡೇಶ್ವರಿ ಸಪರಿವಾರ ದೈವಗಳ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಅನುಜ್ಞ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ

ಇತಿಹಾಸ ಪ್ರಸಿದ್ಧ 18 ದೈವಸ್ಥಾನಗಳಿಲ್ಲಿ ಒಂದಾದ ಪುತ್ತಿಗೆ ಶ್ರೀ ಧೂಮಾವತೀ ಕೋಮರಾಯ ಚಾಮುಂಡೇಶ್ವರಿ ಸಪರಿವಾರ ದೈವಗಳ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಅನುಜ್ಞ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯವೂ ತಂತ್ರಿವರ್ಯರಾದ ದೇಲಂಪಾಡಿ ಶ್ರೀ ಗಣೇಶ್ ಇವರ ದಿವ್ಯ ಹಸ್ತದಲ್ಲಿ ನೇರವೇರಿತು. ಈ ಸಂದರ್ಭದಲ್ಲಿ ಬಾಕುಡ ಸಮಾಜ 18 ದೈವಸ್ಥಾನದ ದೈವದ ಪಾತ್ರಿ ಮತ್ತು ಕಾರ್ನ ವರ ಒಕ್ಕೂಟ ಸಮಿತಿ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ಶ್ರೀ ವಸಂತ ಬಾಡೂರು ಶ್ರೀ ಸುರೇಶ್ ಕುಂಜತ್ತೂರು. ಶ್ರೀ ತುಳಸಿದಾಸ್ ಮಂಜೇಶ್ವರ…

Read More

ಉಪ್ಪಳ ತಾಲೂಕು ಆಸ್ಪತ್ರೆ ಯಲ್ಲಿ ವೈದ್ಯರ ಸಿಬ್ಬಂದಿಗಳ ಕೊರತೆ: ಆಸ್ಪತ್ರೆ ಮುಂಭಾಗದಲ್ಲಿ ಯೂತ್ ಕಾಂಗ್ರೆಸ್ ಧರಣಿ

ವೈದ್ಯರು ಹಾಗೂ ಸಿಬ್ಬಂದಿಗಳು ಸಾಕಷ್ಟು ಇಲ್ಲದೆ ರಾತ್ರಿ ಹೊತ್ತಿನ ಚಿಕಿತ್ಸೆಯನ್ನು ಸ್ಥಗಿತಗೊಳಿಸಿರುವ ಮಂಜೇಶ್ವರ ತಾಲೂಕು ಹೆಡ್ ಕ್ವಾಟರ್ಸ್ ಆಸ್ಪತ್ರೆಗೆ ಇಂಡಿಯನ್ ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮಾರ್ಚ್ ಹಾಗೂ ಧರಣಿ ನಡೆಯಿತು. ನಾಯಬಜಾರ್ ನಲ್ಲಿರುವಆಸ್ಪತ್ರೆ ಗೆ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿಯ ಅಧ್ಯಕ್ಷ ಜುನೈದ್ ಉರ್ಮಿ ಇವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಸದಸ್ಯ ಹಕ್ಕಿಂ ಕುನ್ನಿಲ್ ಧರಣಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೇರಳ ರಾಜ್ಯ ಸರ್ಕಾರ ಆರೋಗ್ಯ ರಂಗದಲ್ಲಿ ಪೂರ್ಣ ವಿಫಲಗೊಂಡಿದ್ದು,…

Read More

ದೇಲಂಪಾಡಿ ಪ್ರದೇಶದಲ್ಲಿ ಜನರ ಜೀವ ಮತ್ತು ಆಸ್ತಿಯನ್ನು ಸಂರಕ್ಷಿಸಲು ಎಂ.ಎಲ್. ಅಶ್ವಿನಿ ಒತ್ತಾಯ.

ವನ್ಯಜೀವಿಗಳ ಹಾವಳಿ ಹೆಚ್ಚಾಗಿ ಕಂಡುಬರುವ ದೇಲಂಬಾಡಿ ಪಂಚಾಯಿತಿನ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸಿ, ಸೌರ ಬೇಲಿ, ಬೀದಿ ದೀಪ ಮತ್ತು ಎಚ್ಚರಿಕೆ ವ್ಯವಸ್ಥೆಗಳನ್ನು ಅಳವಡಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಒತ್ತಾಯಿಸಿದ್ದಾರೆ.ಬಿಜೆಪಿ ದೇಲಂಪಾಡಿ ಪ್ರಾದೇಶಿಕ ಸಮಿತಿ ನೇತೃತ್ವದಲ್ಲಿ ಪರಪ್ಪದಲ್ಲಿರುವ ಅರಣ್ಯ ಇಲಾಖೆ ಮರದ ಡಿಪೋದಲ್ಲಿ ನಡೆದ ಧರಣಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು . ಕಾಡು ಪ್ರಾಣಿಗಳ ದಾಳಿಯಿಂದ ಬೆಳೆಗಳು ಹಾನಿಗೊಳಗಾದಾಗ, ಕೇವಲ ಅತ್ಯಲ್ಪ ಪರಿಹಾರವನ್ನು ಮಾತ್ರ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳಿಗೆ ಸಿಗುವಾಗ ಬಹಳಷ್ಟು ವಿಳಂಬವು…

Read More

ಮೂಡಂಬೈಲ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆ.

ಸರಕಾರಿ ಪ್ರೌಢಶಾಲೆ ಮೂಡಂಬೈಲ್ ನಲ್ಲಿ ಜಿಲ್ಲಾ ಪಂಚಾಯತಿನ ವತಿಯಿಂದ ಒದಗಿಸಲಾದ ಆಧುನಿಕ ವ್ಯವಸ್ಥೆಯನ್ನು ಒಳಗೊಂಡಿರುವ ಶೌಚಾಲಯವನ್ನು ಹಾಗೂ ಶುದ್ಧ ಜಲ ನೀರಿನ ಯೋಜನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಕಮಲಾಕ್ಷಿ ಅವರು ನಿರ್ವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ಲಾ ಪಜಿಂಗರ್ ಅವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಿಂಚಾಯತ್ ಉಪಾಧ್ಯಕ್ಷರಾದ ಜಯರಾಮ ಬಲ್ಲಂಗುಡೆಯಲು ಹಾಗೂ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಯಾದ ಜಾರ್ಜ್ ಕ್ರಾಸ್ತಾರವರು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ದಯಾವತಿ ಅವರು ಅತಿಥಿಗಳನ್ನು…

Read More

ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ : ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್‌ ನಟ ರಿಷಭ್‌ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ಭೇಟಿ ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್‌ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ ರಾಕೇಶ್‌ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ…

Read More

ಬ್ಲಾಕ್ ಸ್ಟಾಲೋನ್ಸ್ ಆರ್ಟ್ಸ್ ಆಂಡ್ ಸ್ಟೋರ್ಟ್ಸ್ ಕ್ಲಬ್ ತಲೇಕಲ ಇದರ 10ನೇ ವಾರ್ಷಿಕೋತ್ಸವ, ಆರೋಗ್ಯ ತಪಾಸಣೆ ಹಾಗೂ ಉಚಿತ ವೈದ್ಯಕೀಯ ಶಿಬಿರ

ಬ್ಲಾಕ್ ಸ್ಟಾಲೋನ್ಸ್ ಆರ್ಟ್ಸ್ ಆಂಡ್ ಸ್ಟೋರ್ಟ್ಸ್ ಕ್ಲಬ್ ತಲೇಕಲ ಇದರ 10ನೇ ವಾರ್ಷಿಕೋತ್ಸವದ ಪ್ರಯುಕ್ತನಾಯರ್‌ ಮೂಲೆ ಫ್ಯಾಮಿಲಿ ಅಸೋಸಿಯೇಷನ್ ಕುಟುಂಬ ವೈದ್ಯರಿಂದ ಮೀಯಪದವು ಶಾಲಾವಠಾರದಲ್ಲಿ ಆರೋಗ್ಯ ತಪಾಸಣೆ ಹಾಗೂ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಶಿಬಿರದಲ್ಲಿ ನೂರಾರು ಮಂದಿ ಫಲಾನುಭವಿಗಳು ಪಾಲ್ಗೊಂಡರು. ಶಿಬಿರವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ ಆಶ್ರಫ್ ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಮೀಂಜ ಗ್ರಾಮ ಪಂಚಾಯತು ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ನಿವೃತ ಜಿಲ್ಲಾ ನ್ಯಾಯಾಧೀಶಹಾಜಿ ಮೂಸ ಕುಂಞ ನಾಯರ್ ಮೂಲೆ, ಡಾಕ್ಟರ್ ಉಮರ್…

Read More

ಡಾ| ಬಿ.ಆರ್ ಕಲಾ ಸಂಘ ಅಂಬೇಡ್ಕರ್ ನಗರ ಕುಬಣೂರು ಇದರ ವತಿಯಿಂದ ಸತತ 19ನೇ ವರ್ಷದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕೋಪಕರಣದ ವಿತರಣಾ ಕಾರ್ಯಕ್ರಮ

ಡಾ, ಬಿ.ಆರ್ ಕಲಾ ಸಂಘ ,ಅಂಬೇಡ್ಕರ್ ನಗರ ಕುಬಣೂರು ಇದರ ವತಿಯಿಂದ ಸತತ 19ನೇ ವರ್ಷದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕೋಪಕರಣದ ವಿತರಣಾ ಕಾರ್ಯಕ್ರಮ ಕಲಾ ಸಂಘದಲ್ಲಿ ಜರಗಿತು. ಯುವ ಕವಿ ಹಾಗೂ ಅಧ್ಯಾಪಕರಾದ ಶ್ರೀ ಹರೀಶ್ ಸುಲಾಯಿ ಒಡ್ಡoಬೆಟ್ಟು,ಅಧ್ಯಾಪಕರಾದ ಶ್ರೀ ಅಶೋಕ್ ಮಾಸ್ಟರ್ ಕೊಡ್ಲಮೊಗರು,ಅಧ್ಯಾಪಕಿ ಸುಹಾಸಿನಿ ಟೀಚರ್,ಅಧ್ಯಾಪಕಿ ನಿವೇದಿತಾ ಟೀಚರ್, ಕಲಾ ಸಂಘದ ಅಧ್ಯಕ್ಷ ಶಿವಪ್ರಸಾದ್,ಮಹಿಳಾಸಂಘದ ಅಧ್ಯಕ್ಷೆ ಸಾವಿತ್ರಿ,ರೈಲ್ವೆ ಉದ್ಯೋಗಿ ಸದಾನಂದ ಕುಬಣೂರು ಶುಭಾಶಂಸನೆಗೈದರು. ವಿಶ್ವನಾಥ್ ಮಾಸ್ತರ್ ಸ್ವಾಗತಿಸಿ,ಮೋಹಿನಿ ಟೀಚರ್ ವಂದಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿಯಿಂದ…

Read More

ಮಳೆಹಾನಿ ಪ್ರದೇಶದಲ್ಲಿ DYFI ಯೂತ್ ಬ್ರಿಗೇಡ್ ನಿಂದ ರಕ್ಷಣಾ ಕಾರ್ಯ

ತೀವ್ರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡ ಜೋಡುಕಲ್ಲು,ಕನ್ನಟ್ಟಿಪಾರೆ, ಉಪ್ಪಳ ,ಪೆರಿಂಗಡಿ ಮತ್ತು ಶುಭಾಷ್ ನಗರ ಇತ್ಯಾದಿ ಪ್ರದೇಶಗಳಲ್ಲಿ CPIM ಮಂಜೇಶ್ವರ ಏರಿಯಾ ಸೆಕ್ರೆಟರಿ ವಿ ವಿ ರಮೇಶ್ ಹಾಗೂ DYFI ಜಿಲ್ಲಾ ಜೊತೆ ಕಾರ್ಯದರ್ಶಿ ಸಾಧಿಕ್ ಚೆರುಗೋಳಿ ಇವರ ನೇತೃತ್ವದಲ್ಲಿ DYFI ಯೂತ್ ಬ್ರಿಗೇಡ್ ನಿಂದ ರಕ್ಷಣಾಕಾರ್ಯ ನಡೆಸಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವಲ್ಲಿ ಪ್ರಯತ್ನ ಪಟ್ಟರು.ಈ ಸಂಧರ್ಭದಲ್ಲಿ DYFI ಯೂತ್ ಬ್ರಿಗೇಡ್ ಸದಸ್ಯರು ಹಾಜರಿದ್ದರು

Read More
error: Content is protected !!