Avatar

Shramitha bejja

ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ…. !

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. RSS ಮುಖಂಡರ ಒಂದು ಭಾಷಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುನ್ನು ವಿಕಾಸ್ ಪುತ್ತೂರು ಎಂಬುವವರು ಸಾಮಾಜಿಕ ಜಾಲತಾಣದಲ್ಲಿ “ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ” ಎಂಬ ವಾಕ್ಯದೊಂದಿಗೆ ಶೇರ್ ಮಾಡಿದ್ದರು. ಇದನ್ನು ಶರಣ್ ಪಂಪ್‌ವೆಲ್ ಅವರು ಮತ್ತೊಮ್ಮೆ ಶೇರ್ ಮಾಡಿ ಜನಸಂಖ್ಯೆ ಬೆಳವಣಿಗೆಯ ಬಗ್ಗೆ ಚರ್ಚೆಯನ್ನು…

Read More

ನವೆಂಬರ್ 2 ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಸುವರ್ಣ ಮಹೋತ್ಸ ಕಾರ್ಯಕ್ರಮ … !

ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಮಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವು ನವೆಂಬರ್ 2 ರಂದು ಸಂಜೆ 4.00 ಗಂಟೆಗೆ ನಗರದ “ ಕುದ್ಮಲ್ ರಂಗರಾವ್ ಪುರಭವನ” ಮಂಗಳೂರು ಇಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿ’ಸೋಜಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಮಂಗಳೂರು ಮಹಾನಗರದಲ್ಲಿ ಆಟೋರಿಕ್ಷಾ ಮತ್ತು ಕಾರು ಚಾಲಕರ ಹಳೆ ವಾಹನಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ…

Read More

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್‌ಗೆ!

ಮುಂಬೈ, : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ನಲ್ಲಿ, ಗುರುವಾರ ಭಾರತ ತಂಡವು ರೋಚಕ ಹಣಾಹಣಿಯಲ್ಲಿ ಆಸ್ಟ್ರೇಲಿಯ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಆ ಮೂಲಕ ಟೂರ್ನಿಯುದ್ದಕ್ಕೂ ಅಜೇಯರಾಗಿ ಉಳಿದಿದ್ದ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ತಂಡವು ಸೋತು ಹೊರಬಿದ್ದಿತು. ನವೀ ಮುಂಬೈಯ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ ನಡೆದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಸ್ಪೋಟಕ ಆರಂಭ ಪಡೆದ ಆಸ್ಟೇಲಿಯಾ ತಂಡವು…

Read More

 ಕೇರಳದ ಪ್ರಪ್ರಥಮ ಒಲಿಂಪಿಕ್ ಪದಕ ವಿಜೇತ ಹಾಕಿ ಪಟು ಮ್ಯಾನ್ಯುಯೆಲ್ ಫ್ರೆಡ್ರಿಕ್ ನಿಧನ .

ಕಣ್ಣೂರು/ಬೆಂಗಳೂರು: ಕೇರಳದ ಪ್ರಪ್ರಥಮ ಒಲಿಂಪಿಕ್ ಪದಕ ವಿಜೇತ ಹಾಕಿ ಪಟು ಮ್ಯಾನ್ಯುಯೆಲ್ ಫ್ರೆಡ್ರಿಕ್ ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಫ್ರೆಡ್ರಿಕ್ ಮ್ಯಾನ್ಯುಯೆಲ್ ಗೆ 78 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯವರಾದ ಫ್ರೆಡ್ರಿಕ್ ಮ್ಯಾನ್ಯುಯೆಲ್, 1972ರ ಮ್ಯೂನಿಚ್ ಒಲಿಂಪಿಕ್ಸ್ ನಲ್ಲಿ ಹಾಲೆಂಡ್ ಎದುರು ನಡೆದಿದ್ದ ಪಂದ್ಯದಲ್ಲಿ ಭಾರತ ಹಾಕಿ…

Read More

ನ.1ರಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರುಣ್ಯ ಯೋಜನೆ ಉದ್ಘಾಟನೆ

ಮಂಗಳೂರು: ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಯ ಉದ್ಘಾಟನೆ ನವೆಂಬರ್ 1ರಂದು ಸಂಜೆ 4.00 ಗಂಟೆಗೆ ಲೇಡಿಗೋಷನ್ ಆಸ್ಪತ್ರೆಯ ಯೋಗಾಭ್ಯಾಸ ಧ್ಯಾನ ಕೇಂದ್ರದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಯೋಜನೆಗೆ ಚಾಲನೆ ನೀಡಲಿದ್ದು, ಶಾಸಕರಾದ ಡಿ.ವೇದವ್ಯಾಸ ಕಾಮತ್, ಐವನ್ ಡಿಸೋಜ, ಮಂಜುನಾಥ ಭಂಡಾರಿ, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್…

Read More

ಕದ್ರಿ ಪಾರ್ಕ್ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ತೆರೆದಿದ್ದ ಗೂಡಂಗಡಿಗಳ ತೆರವು …. !

ಮಂಗಳೂರು: ಅನಧಿಕೃತ ವಾಗಿ ಇದ್ದ ಚುರುಮುರಿ ಸ್ಟಾಲ್, ಕಬ್ಬಿನ ಜ್ಯೂಸ್ ಅಂಗಡಿ, ಪಾನಿಪುರಿ ಅಂಗಡಿಗಳನ್ನ ಮಹಾ ನಗರ ಪಾಲಿಕೆಯ ಅಧಿಕಾರಿಗಳು ತೆರವು ಗೊಳಿಸಿದರು. ಈ ಅಂಗಡಿಗಳಲ್ಲಿ ಸ್ವಚ್ಚತೆ ಪಾಲನೆಯಾಗುತ್ತಿರಲಿಲ್ಲ. ತ್ಯಾಜ್ಯ ವಸ್ತುಗಳ ರಾಶಿಯೇ ಉಳಿದು ಪಾರ್ಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿತ್ತು ಎಂದು ದೂರುಗಳು ಬಂದಿದ್ದವು. ಮಾತ್ರವಲ್ಲದೆ ಇಲ್ಲಿ ಅಂಗಡಿಗಳನ್ನು ಏಲಂ ಮೂಲಕ ಪಡೆದುಕೊಂಡವರು ತಮ್ಮ ವ್ಯವಹಾರಕ್ಕೆ ತೊಂದರೆಯಾಗುತ್ತದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

Read More

ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ .

ಹುಣಸೂರು : ವಿದ್ಯುತ್‌ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ತಾಯಿಗೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿವಾಹಕ್ಕೆಂದು ಬರುತ್ತಿದ್ದ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ; ಹಲವರು ಗಂಭೀರ

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗುರುವಾರ (ಅ.30) ಸಂಭವಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಥೆ ತಿರುವಿನಲ್ಲಿ ವಾಹನ…

Read More

ದ್ವಿ ಚಕ್ರ ವಾಹನ ಚಲಾಯಿಸುವ ವೇಳೆ ಹೃದಯಾಘಾತಕ್ಕೆ ಬಲಿಯಾದ ಸವಾರ

ಮಂಗಳೂರು: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವ ಮೃತಪಟ್ಟಿ ಘಟನೆ ಇಂದು(ಅ.30) ಬೆಳಗ್ಗೆ, ಸುರತ್ಕಲ್ ಜಂಕ್ಷನ್‌ನಲ್ಲಿ ಸಂಭವಿಸಿದೆ. ಕಾಟಿಪಳ್ಳ ಮೋರ್ ಸೂಪರ್ ಮಾರ್ಕೆಟ್ ಬಳಿಯ ನಿವಾಸಿ ಜಬ್ಬಾರ್ ಹೃದಯಾಘಾತಕ್ಕೊಳಗಾದ ವ್ಯಕ್ತಿ. ಜಬ್ಬಾರ್ ಅವರು ಸೂರಜ್ ಹೋಟೇಲ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಕಡೆಗೆ ಸರ್ವಿಸ್ ರಸ್ತೆಯಾಗಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಾಹನದಿಂದ ರಸ್ತೆಗೆ ಬಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳೀಯರು ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ಹೃದಾಯಾಘಾತಕ್ಕೊಳಗಾಗಿ ಮೃತಪಟ್ಟಿದ್ದರು…

Read More

ಐಆರ್‌ಸಿಟಿಸಿ ವತಿಯಿಂದ ಕಾಶಿ, ಅಯೋಧ್ಯೆ, ಉತ್ತರ ಭಾರತ ಪ್ರವಾಸ ಪ್ಯಾಕೇಜುಗಳ ಪ್ರಕಟ .

ಮಂಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ (ಐಆರ್‌ಸಿಟಿಸಿ) ಭಾರತ ಸರ್ಕಾರದ ನವರತ್ನ ಸಂಸ್ಥೆಯು ದಕ್ಷಿಣ ವಲಯದ ಮಂಗಳೂರು ಕಚೇರಿಯಿಂದ ಯಾತ್ರಿಕರ ಅನುಕೂಲಕ್ಕಾಗಿ ಹಲವು ವಿಶಿಷ್ಟ ಪ್ರವಾಸ ಪ್ಯಾಕೇಜುಗಳನ್ನು ಪ್ರಕಟಿಸಿದೆ ಎಂದು ಸಂಸ್ಥೆಯ ಜಂಟಿ ಜನರಲ್ ಮ್ಯಾನೇಜರ್ ಸ್ಯಾಮ್ ಜೋಸೆಫ್ ಪಿ ಮಾಹಿತಿಯನ್ನು ನೀಡಿದರು . ಅವರು ಪತ್ರಿಕಾ ಭವನದಲ್ಲಿ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ಯಾಕೇಜುಗಳಲ್ಲಿ ಕಾಶಿ, ಪ್ರಯಾಗರಾಜ್, ಅಯೋಧ್ಯಾ ವಿಮಾನ ಪ್ಯಾಕೇಜ್, ಉತ್ತರ ಭಾರತ ರೈಲು…

Read More
error: Content is protected !!