4ನೇ ವರ್ಷದ “ದುಬೈ ಗಡಿನಾಡ ಉತ್ಸವ-2025”
ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಜಂಟಿಯಾಗಿ ಆಯೋಜಿಸಿದ್ದ ನಾಲ್ಕನೇ ವರ್ಷದ “ದುಬೈ ಗಡಿನಾಡ ಉತ್ಸವ-2025” ಕಾರ್ಯಕ್ರಮವು ಇತ್ತೀಚೆಗೆ ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಜಾನಪದ ಪರಿಷತ್ ಮಂಗಳೂರಿನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೋಡಿಯಲ್ ಬೈಲ್ ರವರು ಯಕ್ಷಗಾನದ ಚೆಂಡೆ ಬಾರಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ…