Avatar

Shramitha bejja

20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ.

ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ & ದೇಬಾ ದಾಸ್, ಬಂಧಿತರು. ದಿನಾಂಕ 19/20-10-2025 ರಂದು ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್…

Read More

ದೀಪಾವಳಿ ನೇಮೋತ್ಸವ ಸಂಪನ್ನ.

ಕಾಸರಗೋಡು : ಕಾಸರಗೋಡು ಕೋಟೆ ಭಾಗಿಲಿನಲ್ಲಿರುವ, ಪಳ್ಳದ ಕೊಟ್ಯ ಶ್ರೀ ಧೂಮಾವತಿ, “ದೀಪಾವಳಿ ನೇಮೋತ್ಸವ “ನಾಗರಕಟ್ಟೆಯ, ಕಾಸರಗೋಡು ಕೋಟೆ ಬಾಗಿಲಿನಲ್ಲಿ ಸಮಸ್ತ ಜನ ಸಮುದಾಯದ ಓಗ್ಗೋಡುವಿಕೆಯಲ್ಲಿ ಸಂಪನ್ನವಾಯಿತು. ಪಳ್ಳದ ಕೊಟ್ಯ ತರವಾಡಿನಿಂದ ಬಂದ ಬಂಡಾರ ಮೆರವಣಿಗೆ, ಗುಳಿಗನ ಕೋಲ, 20.10.2025,ರಂದು ನಡೆದ ಧೂಮಾವತಿ ರಾಜನ್ ದೈವ ಕೋಲ, ಊರವರ ಸಹಕಾರದಲ್ಲಿ, ಕಾಸರಗೋಡು ಕೋಟೆ ನಾಯಕರ ಮನೆ ವಂಶಸ್ತರ ನೇತೃತ್ವದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಉತ್ಸವ ಸಮಿತಿ ಸಹಕರಿಸಿದ ಸಕಲರೀಗೆ ಧನ್ಯವಾದ ಸಮರ್ಪಸಿದೆ.

Read More

ಕೃಷ್ಣ ನಗರಿಯಲ್ಲಿ ದೀಪಾವಳಿ ಸಂಭ್ರಮ: ಶ್ರೀಕೃಷ್ಣ ಮಠದಲ್ಲಿ ಬಲೀಂದ್ರ ಪೂಜೆ, ಲಕ್ಷ್ಮೀ ಪೂಜೆ ಸಂಪನ್ನ .

ಉಡುಪಿ:ದೇವಾಲಯಗಳ ನಗರಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ರಾತ್ರಿ ಸಂಭ್ರಮದ ಬಲೀಂದ್ರ ಪೂಜೆ ನಡೆಯಿತು. ತುಳುನಾಡಿನಲ್ಲಿ ಬಲೀಂದ್ರ ಪೂಜೆಗೆ ವಿಶೇಷ ಮಹತ್ವವಿದೆ. ಈ ಭಾಗವನ್ನು ಆಳಿದ ಅರಸ ಬಲೀಂದ್ರನಿಗೆ ದೀಪಾವಳಿಯ ವೇಳೆ ಸ್ವಾಗತ ಕೋರಿ ಆತಿಥ್ಯ ನಡೆಸುವುದು ಇಲ್ಲಿನ ಪದ್ಧತಿ. ವರ್ಷಕ್ಕೊಮ್ಮೆ ಅರಸನನ್ನು ಬರಮಾಡಿಕೊಂಡು ಗೌರವಿಸುವುದು ಸಂಪ್ರದಾಯ. ಈ ಆಚರಣೆಯನ್ನು ಬಲೀಂದ್ರ ಪೂಜೆ ಎಂದು ಕರೆಯಲಾಗುತ್ತದೆ. ಭತ್ತದ ಗದ್ದೆಗಳಲ್ಲಿ ದೀಪವಿಟ್ಟು ಬಲೀಂದ್ರನನ್ನು ಕೂಗಿ ‌ಕರೆಯಲಾಗುತ್ತದೆ. ಕೃಷಿ ಸಂಸ್ಕೃತಿಯೊಂದಿಗೆ ಬಲೀಂದ್ರ ಪೂಜೆ ತಳಕು ಹಾಕಿಕೊಂಡಿರುವುದರಿಂದ ಇವತ್ತಿಗೂ…

Read More

ಅಕ್ಟೋಬರ್ 25 ರಂದು ದುಬೈನಲ್ಲಿ ‘ದುಬೈ ಗಡಿನಾಡ ಉತ್ಸವ’ .ಗಡಿನಾಡ ರತ್ನ ಪ್ರಶಸ್ತಿ ಪ್ರದಾನ, ಸಾಧಕರಿಗೆ ಮತ್ತು ಸಾಧಕ ಸಂಸ್ಥೆಗೆ ಗೌರವ ಸನ್ಮಾನ .

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ.ಸಂಜೆ ನಾಲ್ಕು ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ ಸುಧೆ,ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತಂಡದವರಿಂದ…

Read More

ಅಕ್ಟೋಬರ್ 24 ಕ್ಕೆ ಬೋಳೂರಿನ ನೂತನ ಶ್ರೀ ಮಹಾಮಾಯಿ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ …. !

ಇತಿಹಾಸ ಪ್ರಸಿದ್ಧ ಬೋಳೂರಿನ ಶ್ರೀ ವೀರಭದ್ರ ಮಹಾಮಾಯಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಆಶ್ರಯದಲ್ಲಿ ನೂತನ ಶ್ರೀ ಮಹಾಮಾಯಿ ದೇವರ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಅಕ್ಟೋಬರ್ 24 ರಂದು ಪೂರ್ವಾಹ್ನ 8.04 ರಿಂದ ಶುರುವಾಗಲಿದೆ ಎಂದು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಕಲ್ಬಾವಿ ತಿಳಿಸಿದರು . ಅವರು ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಅಂದಾಜು ೩. ೯೨ ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣ ಕಾರ್ಯನಡೆಯುವ ಈ…

Read More

ಮಿಡಲ್ ಕ್ಲಾಸ್ ಫ್ಯಾಮಿಲಿ’ ಅಕ್ಟೋಬರ್ 25ರಿಂದ ಯೂಟ್ಯೂಬ್ ನಲ್ಲಿ ಬಿಡುಗಡೆ .

ಮಂಗಳೂರು:ಥಿಯೇಟರ್‌ನಲ್ಲಿ ಬರೋಬ್ಬರಿ 160 ದಿನಗಳ ಕಾಲ ಆರ್ಭಟಿಸಿದ್ದ ತುಳು ಚಿತ್ರ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಅಕ್ಟೋಬರ್ 25ರಿಂದ ಯೂಟ್ಯೂಬ್ ನಲ್ಲಿ ಉಚಿತವಾಗಿ ವೀಕ್ಷಕರಿಗೆ ದೊರೆಯುವ ಮೂಲಕ ತುಳು ಚಿತ್ರಪ್ರೇಮಿಗಳಿಗೆ ಮನರಂಜಿಸಲು ಸಜ್ಜಾಗಿದೆ ಎಂದು ಚಿತ್ರ ತಂಡ ಘೋಷಿಸಿದೆ. ಈ ಕುರಿತಂತೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ಮಾಪಕ ಆನಂದ್ ಎನ್. ಕುಂಪಲ, ನಿರ್ದೇಶಕ ರಾಹುಲ್ ಅಮೀನ್, ನಾಯಕ ನಟ ವಿನಿತ್ ಕುಮಾರ್ ಮತ್ತು ನಾಯಕ ನಟಿ ಸಮತಾ ಅಮೀನ್ 2025ರ ಜನವರಿ 31ರಂದು ತುಳುನಾಡಿನಾದ್ಯಂತ ಅದ್ಧೂರಿಯಾಗಿ…

Read More

ಯಂಗ್‌ ಇಂಡಿಯನ್ಸ್ ಆಲೋಚನೆಗಳಿಂದ ಶ್ರೀಮಂತವಾಗಲಿದೆ ಕರಾವಳಿಯ ಕಡಲ ಕಿನಾರೆ …. !

ಮಂಗಳೂರು: ಯಂಗ್‌ ಇಂಡಿಯನ್ಸ್ (Yi) ಎನ್ನುವುದು ಭಾರತದ ಯುವಕರು ಒಟ್ಟುಗೂಡಿ, ನಾಯಕತ್ವ ವಹಿಸಿ, ಸಹಸ್ರಜನಶೀಲತೆಯ ಮೂಲಕ ಭಾರತದ ಭವಿಷ್ಯವನ್ನು ಪ್ರಭಾವಿತಗೊಳಿಸುವ ಚಳುವಳಿಯಾಗಿದೆ. ಇದು ಭಾರತೀಯ ಕೈಗಾರಿಕಾ ಪರಿಷತ್ (Confederation of Indian Industry – CII)ನ ಅವಿಭಾಜ್ಯ ಅಂಗವಾಗಿದ್ದು ಸರ್ಕಾರೇತರ, ಲಾಭರಹಿತ, ಕೈಗಾರಿಕೆ ಮುನ್ನಡೆಸುವ ಮತ್ತು ನಿರ್ವಹಿಸುವ ಸಂಸ್ಥೆಯಾಗಿದೆ ಇದು ಭಾರತದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಕ್ರಿಯ ಪಾತ್ರವಹಿಸುವ ಸಂಸ್ಥೆಯಾಗಿದ್ದು ಈಗಾಗಲೇ ಸಾಕಷ್ಟು ಸಾಹಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಿದೆ ಎಂದು ಸಾಲೋಮೆ ಲೋಬೊ ಪೆರೇರಾ ತಿಳಿಸಿದರು . ನಗರದ…

Read More

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.

ಮಂಜೇಶ್ವರ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ಎಸ್.ಎ.ಟಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಶೇಕಡ 60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಝೋನಲ್ ಬಿಸಿನೆಸ್ ಹೆಡ್ ಎಸ್.ಎಫ್. ಎಲ್ ಶ್ರೀಜಿತ್ ಏನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೊ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್ ,ಎಸ್.ಎ.ಟಿ ಶಾಲೆಯ ಮುಖ್ಯೋಪದ್ಯಾನಿ…

Read More

ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಿಬೆಳೆಸಿ ಜೀವನವನ್ನೇ ಸಂಘಟನೆಗೆ ತೈದ ನಾಯಕ ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರ ಉದ್ಘಾಟನೆ .

ವರ್ಕಾಡಿ ಪಂಚಾಯತಿನ ಕೊಡ್ಲಮೊಗರು ಪಾತೂರು ಗ್ರಾಮದಲ್ಲಿ ಸಿ ಪಿ ಐ ಎಂ ಪಕ್ಷದ ಸಂಘಟನೆಗಾಗಿ ಹಗಲಿರುಳು ಎನ್ನದೆ ದುಡಿದು ತನ್ನ ಜೀವನವನ್ನೇ ಜನರ ಹಿತಕ್ಕಾಗಿ ಮುಡಿಪಾಗಿರಿಸಿ ಹಲವಾರು ವರ್ಷಗಳ ಕಾಲ ಲೋಕಲ್ ಕಮಿಟಿ ಕಾರ್ಯದರ್ಶಿಯಾಗಿದ್ದ ಶ್ರೀಯುತ ಕೆ. ಪಕೀರ ಶೆಟ್ಟಿಗಾರ್ ರ ಸವಿ ನೆನಪಿಗಾಗಿ ಕೊಡ್ಲಮೊಗರು ಲೋಕಲ್ ಕಮಿಟಿಯವರು ಊರ ಪರವೂರ ದಾನಿಗಳ ಸಹಕಾರದಿಂದ ನಿರ್ಮಿಸಿದ ಸ್ಮಾರಕ ಮಂದಿರದ ಉದ್ಘಾಟನಾ ಸಮಾರಂಭವು ಅಕ್ಟೊಬರ್ -19 ರಂದು ನಡೆಯಿತು. ಕೆ . ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವನ್ನು ಸಿ.ಪಿ….

Read More

ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪುತ್ತೂರು: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಇತರರಿಗೆ ಅವರು ಸ್ಫೂರ್ತಿಯಾಗಲಿ…

Read More
error: Content is protected !!